Home / ಲೇಖನ / ವ್ಯಕ್ತಿ / ಸುಪ್ರಿಯಾ ದಯಾನಂದ್

ಸುಪ್ರಿಯಾ ದಯಾನಂದ್

ಕನ್ನಡ ನಾಡು ಪ್ರತಿಭಾವಂತರ ಬೀಡು. ಅದರಲ್ಲಿಯೂ ಕೊಡಗು ಎಂದಾಕ್ಷಣ ಕಣ್ಣ ಮುಂದೆ ಕಾಶ್ಮೀರ ಬಂದು ಹೋಗುವುದು. ವೀರ ಸೇನಾನಿಗಳ ನಾಡು ಕೆಚ್ಚೆದೆಯ ಬೀಡು.

ಕೊಡಗು ದೇಶ ಸೇವೆಗೂ ಮುಂದೆ ಪ್ರತಿಭಾವಂತರಿಗೆ ಮುಂದೆ ಎನ್ನುವುದಕ್ಕೆ ಸುಪ್ರಿಯಾ ದಯಾನಂದ್ ಅವರು ನಮಗೆಲ್ಲ ಇಂದು ಹಿರಿಸಾಕ್ಷಿಯಾಗಿರುವರು. ಸುಪ್ರಿಯಾ ದಯಾನಂದ್ ಕೊಡಗಿನ ಸೋಮವಾರ ಪೇಟೆ ತಾಲ್ಲೂಕಿನ ಗೆಜ್ಜೆ ಹಣಕೋಡು ಗ್ರಾಮದ ಹೆಮ್ಮೆಯ ಸುಪುತ್ರಿ.ತಂದೆ- ಸಿದ್ಧಿ ಪ್ರಸಿದ್ಧಿ ಕಾಫಿ ಬೆಳೆಗಾರರಾದ ದಯಾನಂದ್ ತಾಯಿ- ಅಮ್ಮ ಕಾವೇರಮ್ಮನ ವರಪುತ್ರಿ ಕವಿತಾ.

ಸುಪ್ರಿಯಾ ದಯಾನಂದ್ ಈಗ ಬೆಂಗಳೂರಿನ ಜಿಕೆವಿಕೆಯಲ್ಲಿ ಎಂಎಸ್ಸಿ ಕೃಷಿ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರತಿಭಾವಂತ ವಿದ್ಯಾರ್ಥಿನಿ.

ದಿನಾಂಕ ೧೨-೦೮-೨೦೧೫ ರಿಂದ ೨೨-೦೮-೨೦೧೫ ರವರೆಗೆ ಫ್ರಾನ್ಸ್‌ನ ಪ್ಯಾರೀಸ್‌ನಲ್ಲಿ ಜರುಗಲಿರುವ ಜಾಗತಿಕ ಮಟ್ಟದ ಆಹಾರ ಪದ್ಧತಿ ಕುರಿತು ಬೃಹತ್ ವಿಚಾರ ಸಂಕೀರ್ಣಕ್ಕೆ ಭವ್ಯ ಭಾರತದಿಂದ ಏಕೈಕ ಪ್ರತಿನಿಧಿಯಾಗಿ ಇವರು ಹೋಗಿ ಬರಲಿದ್ದಾರೆ.

ಇಲ್ಲಿ ವಿಶ್ವದ ೫೦ ದೇಶದ ಪ್ರತಿನಿಧಿಗಳು ತಮ್ಮ ತಮ್ಮ ದೇಶಗಳಲ್ಲಿನ ಆಹಾರ- ಬೀಜ-ದವಸ-ಧಾನ್ಯ-ತಳಿಗಳ ಉತ್ಪಾದನೆ, ಆಮದು, ರಫ್ತು ಗುಣಮಟ್ಟ, ಮಾರುಕಟ್ಟೆಯ ಬಗ್ಗೆ ವ್ಯಾಪಕ ಚರ್ಚೆ, ಪ್ರಬಂಧ ವಿಚಾರ ವಿನಿಮಯ ನಡೆಯಲಿದೆ.

ದಿನಾಂಕ ೧೬-೦೯-೨೦೧೫ ರಿಂದ ೨೦೧೬ ರ ಫೆಬ್ರವರಿವರೆಗೆ ಬೆಲ್ಲಿಯಂನ ಗೆಂಟ್ ವಿಶ್ವವಿದ್ಯಾಲಯದಲ್ಲಿ ಉನ್ನತ ವ್ಯಾಸಂಗಕ್ಕೆ ತೆರಳುವ ಸುವರ್ಣಾವಕಾಶವನ್ನು ಸುಪ್ರಿಯಾ ದಯಾನಂದ್ ಅವರು ಪಡೆದುಕೊಂಡಿರುವರು.

ಹೀಗೆ ಸುಪ್ರಿಯಾ ದಯಾನಂದ್ ತಾನುಟ್ಟಿದ ಊರಿಗೆ, ತಂದೆತಾಯಿಗೆ, ಕಲಿತ ಶಾಲೆ ಕಾಲೇಜಿಗೆ ಕೀರ್ತಿ ತಂದಿರುವರು. ಇವರ ಪ್ರತಿಭೆ, ಉತ್ಪತ್ತಿ, ವಿದ್ವತ್ ಉಳಿದವರಿಗೆ ಸ್ಫೂರ್ತಿದಾಯಕ ಹರ್ಷದಾಯಕವಾಗಿದೆ.

ಕಲಿತರೆ ಇದ್ದರೆ ಇರಬೇಕು ಸುಪ್ರಿಯಾ ದಯಾನಂದ್‌ವರಂತೆ, ಪ್ರತಿಭಾವಂತ ಮಕ್ಕಳು ಅಲ್ಲವೇ?

ನಾವು ನೀವು ಎಲ್ಲರೂ ಸುಪ್ರಿಯಾ ದಯಾನಂದ್ ಅವರಿಗೆ ಆಲ್ ದಿ ಬೆಸ್ಟ್, ಹೇಳೋಣವಲ್ಲವೇ?
*****

Tagged:

Leave a Reply

Your email address will not be published. Required fields are marked *

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...