Home / ಲೇಖನ / ಇತರೆ / ಹಚ್ಚೆ-ಹಕ್ಕು

ಹಚ್ಚೆ-ಹಕ್ಕು

ಹಚ್ಚೆ ಎಲ್ಲರ ಹಕ್ಕು. ಮನುಷ್ಯನ ಹಿಂದೆ ಹಚ್ಚೆ ಮಾತ್ರ ಹೋಗುವುದು! ಜೀವಿತದ ಅವಧಿಯಲ್ಲಿ ಬೇಕಾದ್ದು ಗಳಿಸಿದ್ದರೂ ಅದನ್ನು ಇಲ್ಲೇ ಬಿಟ್ಟು ಹೋಗುವರು. ಅದೇ ಹಚ್ಚೆ ಹಾಕಿಸಿಕೊಂಡರೆ ಅದನ್ನು ಹಿಂದಿಂದೆ ಒಯ್ಯುವರು. ಹೀಗಾಗಿ ಹಚ್ಚೆ-ಹಕ್ಕು ಅದನ್ನು ಯಾರು ಕಸಿಯುವಂತಿಲ್ಲ.

ಈ ಹಚ್ಚೆ ಕಲೆಗೆ ಸುಮಾರು ೫೦೦೦ ವರ್ಷಗಳಷ್ಟು ಇತಿಹಾಸವಿದೆ. ಇದು ನಮ್ಮ ಮೂಲನಿವಾಸಿಗಳ ಆಸ್ತಿ. ಇದನ್ನು ನಮಗೆ ಬಳುವಳಿಯಾಗಿ ಬಿಟ್ಟು ಹೋಗಿರುವರು. ಇದನ್ನು ಕಸಿಯುವ ಹಕ್ಕು ಯಾರಿಗಿದೆ?

ಇತ್ತೀಚೆಗೆ ಭಾರತೀಯ ಸೇನಾ ಸಿಬ್ಬಂದಿ, ಅಧಿಕಾರಿಗಳು, ಸೈನಿಕರು, ಹಚ್ಚೆಗಳನ್ನು ಹಾಕಿಸಿಕೊಳ್ಳುವಂತಿಲ್ಲ ಎಂದು ಸೇನಾ ಅಧಿಕಾರಿಗಳು ಆದೇಶಿಸಿದ್ದಾರೆ.

ಭವ್ಯ ಭಾರತೀಯ ಸೇನೆಗೆ ಸೇರಲು ಬಯಸುವ ಅಭ್ಯರ್ಥಿಗಳು ಇನ್ನು ಮುಂದೆ ಹಚ್ಚೆ ಹಾಕಿಸಿಕೊಳ್ಳುವಂತಿಲ್ಲ ಎಂದು ಆದೇಶ ಹೊರಡಿಸಿದೆ.

ಸಂಪ್ರದಾಯ ಆಚರಣೆಗಳ ಹಿತದೃಷ್ಟಿಯಿಂದ ಬುಡಕಟ್ಟು ಹಿಂದುಳಿದ ಜಾತಿ ಜನಾಂಗದವರಿಗೆ ಮಾತ್ರ ಹಚ್ಚೆ ಹಾಕಿಸಿಕೊಳ್ಳಲು ಆದೇಶದಲ್ಲಿ ಅವಕಾಶ ಕಲ್ಪಿಸಲಾಗಿದೆ.

ಭವ್ಯ ಭಾರತೀಯ ಸೇನೆಗೆ ಸೇರಿದ ಮೇಲೆ ನಾನು ಯಾವುದೇ ರೀತಿಯ ಹಚ್ಚೆಗಳನ್ನು ಹಾಕಿಸಿಕೊಳ್ಳುವುದಿಲ್ಲ ಎಂದು ತರಬೇತಿಗೆ ತೆರಳುವ ಮುನ್ನ ಅಭ್ಯರ್ಥಿಗಳು ಪ್ರಮಾಣ ಪತ್ರವೊಂದಕ್ಕೆ ಸಹಿ ಮಾಡುವ ವಿಧಿವಿಧಾನ ನಿಯಮವೊಂದನ್ನು ಈಗಾಗಲೇ ರೂಪಿಸಿರುವರು.

ಇಷ್ಟೇ ಅಲ್ಲದೆ, ಸರ್‍ವೇ ಸಾಮಾನ್ಯ ಜನರು ತಮ್ಮ ಶಿಸ್ತು ದಕ್ಷತೆಗೆ ಧಕ್ಕೆಯಾಗದಂತೆ ಧಾರ್ಮಿಕ ಹಾಗೂ ಪ್ರೀತಿ ಪಾತ್ರರ ಹೆಸರು ಚಿಹ್ನೆ ಹಾಕಿಸಿಕೊಳ್ಳಲು ಸಂಪೂರ್ಣವಾಗಿ ಅವಕಾಶ ಕಲ್ಪಿಸಲಾಗುವುದೆಂದು ಪ್ರಕಟಣೆಯಲ್ಲಿ ತಿಳಿಸಿದೆ.

ನಮ್ಮ ಭಾರತೀಯ ಸೈನ್ಯ ಇನ್ನಾದರೂ ಎಚ್ಚೆತ್ತುಕೊಳ್ಳಬೇಕು. ಬ್ರಿಟೀಶ್ ಮಾದರಿಯ ಆಡಳಿತ, ಸರ್ಕಾರ, ಸಲ್ಲವೆಂದು ಮತ್ತೊಮ್ಮೆ ಸಿಪಾಯಿ ದಂಗೆಗೆ ಕಾರಣವಾಗದಂತೆ ಇಂದಿನ ಘನ ಸರ್ಕಾರ ಎಚ್ಚೆತ್ತು ಕೊಳ್ಳಬೇಕಲ್ಲವೇ?
*****

Tagged:

Leave a Reply

Your email address will not be published. Required fields are marked *

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...