Home / ಲೇಖನ / ಇತರೆ / ಹಚ್ಚೆ-ಹಕ್ಕು

ಹಚ್ಚೆ-ಹಕ್ಕು

ಹಚ್ಚೆ ಎಲ್ಲರ ಹಕ್ಕು. ಮನುಷ್ಯನ ಹಿಂದೆ ಹಚ್ಚೆ ಮಾತ್ರ ಹೋಗುವುದು! ಜೀವಿತದ ಅವಧಿಯಲ್ಲಿ ಬೇಕಾದ್ದು ಗಳಿಸಿದ್ದರೂ ಅದನ್ನು ಇಲ್ಲೇ ಬಿಟ್ಟು ಹೋಗುವರು. ಅದೇ ಹಚ್ಚೆ ಹಾಕಿಸಿಕೊಂಡರೆ ಅದನ್ನು ಹಿಂದಿಂದೆ ಒಯ್ಯುವರು. ಹೀಗಾಗಿ ಹಚ್ಚೆ-ಹಕ್ಕು ಅದನ್ನು ಯಾರು ಕಸಿಯುವಂತಿಲ್ಲ.

ಈ ಹಚ್ಚೆ ಕಲೆಗೆ ಸುಮಾರು ೫೦೦೦ ವರ್ಷಗಳಷ್ಟು ಇತಿಹಾಸವಿದೆ. ಇದು ನಮ್ಮ ಮೂಲನಿವಾಸಿಗಳ ಆಸ್ತಿ. ಇದನ್ನು ನಮಗೆ ಬಳುವಳಿಯಾಗಿ ಬಿಟ್ಟು ಹೋಗಿರುವರು. ಇದನ್ನು ಕಸಿಯುವ ಹಕ್ಕು ಯಾರಿಗಿದೆ?

ಇತ್ತೀಚೆಗೆ ಭಾರತೀಯ ಸೇನಾ ಸಿಬ್ಬಂದಿ, ಅಧಿಕಾರಿಗಳು, ಸೈನಿಕರು, ಹಚ್ಚೆಗಳನ್ನು ಹಾಕಿಸಿಕೊಳ್ಳುವಂತಿಲ್ಲ ಎಂದು ಸೇನಾ ಅಧಿಕಾರಿಗಳು ಆದೇಶಿಸಿದ್ದಾರೆ.

ಭವ್ಯ ಭಾರತೀಯ ಸೇನೆಗೆ ಸೇರಲು ಬಯಸುವ ಅಭ್ಯರ್ಥಿಗಳು ಇನ್ನು ಮುಂದೆ ಹಚ್ಚೆ ಹಾಕಿಸಿಕೊಳ್ಳುವಂತಿಲ್ಲ ಎಂದು ಆದೇಶ ಹೊರಡಿಸಿದೆ.

ಸಂಪ್ರದಾಯ ಆಚರಣೆಗಳ ಹಿತದೃಷ್ಟಿಯಿಂದ ಬುಡಕಟ್ಟು ಹಿಂದುಳಿದ ಜಾತಿ ಜನಾಂಗದವರಿಗೆ ಮಾತ್ರ ಹಚ್ಚೆ ಹಾಕಿಸಿಕೊಳ್ಳಲು ಆದೇಶದಲ್ಲಿ ಅವಕಾಶ ಕಲ್ಪಿಸಲಾಗಿದೆ.

ಭವ್ಯ ಭಾರತೀಯ ಸೇನೆಗೆ ಸೇರಿದ ಮೇಲೆ ನಾನು ಯಾವುದೇ ರೀತಿಯ ಹಚ್ಚೆಗಳನ್ನು ಹಾಕಿಸಿಕೊಳ್ಳುವುದಿಲ್ಲ ಎಂದು ತರಬೇತಿಗೆ ತೆರಳುವ ಮುನ್ನ ಅಭ್ಯರ್ಥಿಗಳು ಪ್ರಮಾಣ ಪತ್ರವೊಂದಕ್ಕೆ ಸಹಿ ಮಾಡುವ ವಿಧಿವಿಧಾನ ನಿಯಮವೊಂದನ್ನು ಈಗಾಗಲೇ ರೂಪಿಸಿರುವರು.

ಇಷ್ಟೇ ಅಲ್ಲದೆ, ಸರ್‍ವೇ ಸಾಮಾನ್ಯ ಜನರು ತಮ್ಮ ಶಿಸ್ತು ದಕ್ಷತೆಗೆ ಧಕ್ಕೆಯಾಗದಂತೆ ಧಾರ್ಮಿಕ ಹಾಗೂ ಪ್ರೀತಿ ಪಾತ್ರರ ಹೆಸರು ಚಿಹ್ನೆ ಹಾಕಿಸಿಕೊಳ್ಳಲು ಸಂಪೂರ್ಣವಾಗಿ ಅವಕಾಶ ಕಲ್ಪಿಸಲಾಗುವುದೆಂದು ಪ್ರಕಟಣೆಯಲ್ಲಿ ತಿಳಿಸಿದೆ.

ನಮ್ಮ ಭಾರತೀಯ ಸೈನ್ಯ ಇನ್ನಾದರೂ ಎಚ್ಚೆತ್ತುಕೊಳ್ಳಬೇಕು. ಬ್ರಿಟೀಶ್ ಮಾದರಿಯ ಆಡಳಿತ, ಸರ್ಕಾರ, ಸಲ್ಲವೆಂದು ಮತ್ತೊಮ್ಮೆ ಸಿಪಾಯಿ ದಂಗೆಗೆ ಕಾರಣವಾಗದಂತೆ ಇಂದಿನ ಘನ ಸರ್ಕಾರ ಎಚ್ಚೆತ್ತು ಕೊಳ್ಳಬೇಕಲ್ಲವೇ?
*****

Tagged:

Leave a Reply

Your email address will not be published. Required fields are marked *

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...