Home / ಲೇಖನ / ವಿಜ್ಞಾನ / ಮರೆಗುಳಿತನ

ಮರೆಗುಳಿತನ

ಕೆಲವರಿಗೆ ಮರೆಗುಳಿತನ ವಂಶ ಪರಂಪರೆಯಾಗಿ ಬಂದಿರುತ್ತದೆ. ವಯಸ್ಸು ಸಣ್ಣದಿರಲಿ ದೊಡ್ಡದಿರಲಿ ಮರೆಗುಳಿತನ ಜಾಸ್ತಿಯಿರುವುದು, ಮರೆವು ಒಂದು ವರದಾನ. ಕಹಿಯನ್ನು ಮರೆಯಲು ದೇವರಿತ್ತ ವರವು. ಇದರಿಂದಾಗಿ ತುಸು ನೆಮ್ಮದಿ, ತೃಪ್ತಿ, ಶಾಂತಿ ಲಭಿಸಲು ಕಾರಣವಾಗಿದೆ. ಮರೆವು ಬೇಕು. ಆದರೆ ಅದೇ ಜಾಸ್ತಿಯಾದರೆ…. ಜೀವನ ನೀರಸನವಾಗುವುದು.

ಈ ಮರೆಗುಳಿತನಕ್ಕೆ ಕಾರಣವೇನು? ವಯಸ್ಸಾಗುತ್ತಾ… ಬರುಬರುತ್ತಾ… ಮರೆವು ಸಹಜವೇ? ನಿಜಕ್ಕೂ ಮರೆವು ಒಂದು ವರದಾನವೇ? ಇದೊಂದು ಕಾಯಿಲೆಯೇ?

– ಹೀಗೆ ಹಲವು ಪ್ರಶ್ನೆಗಳನ್ನಿಟ್ಟುಕೊಂಡು ಶಾಶ್ವತ ಪರಿಹಾರ ನೀಡುವ ಔಷಧಿ ಕಂಡು ಹಿಡಿಯಲು ವಿಶ್ವದಾದ್ಯಂತ ನಿರಂತರವಾಗಿ…. ಹಲವು ಸಂಶೋಧನೆಗಳು ಈಗಾಗಲೇ ಜರುಗುತ್ತಿವೆ.

ಈಗೀಗ ಘಟಾನುಘಟಿ ವೈದ್ಯರು, ನರತಜ್ಞರು, ವಿಜ್ಞಾನಿಗಳು… ಈಗಲೂ ಈ ಕಾಯಿಲೆಗೆ ಔಷಧಿಯನ್ನು ನಿಖರ ಕಾರ್‍ಯ ಕಾರಣವನ್ನು ಪರಿಹಾರವನ್ನು ಕಂಡು ಹಿಡಿಯಲು ಶ್ರಮಿಸುತ್ತಿದ್ದಾರೆ.

ಆದರೆ… ಜುಲೈ ೨೦೧೫ ರಲ್ಲಿ ಸರ್ರೆಯ ಕ್ರಿಟಿನ್ ನಿತ್ಯಾನಂದನ್ ಲಂಡನ್ ಶಾಲಾ ಬಾಲಕ ವಯಸ್ಸು ೧೫ ವರ್ಷ ಭಾರತೀಯ ಮೂಲದ ಬ್ರಿಟೀಶ್ ಪ್ರಜೆಯಾದ ಈತ ಈಗ ಮರೆಗುಳಿತನಕ್ಕೆ ಪರಿಹಾರ ಕಂಡು ಹಿಡಿದು, ಇಡೀ ಜಗತ್ತನ್ನು ನಿಬ್ಬೆರಗುಗೊಳಿಸಿದ್ದಾನೆ. ಅಬ್ಬಾ! ವಯಸ್ಸು ಕಿರಿದು ಸಾಧನೆ ಹಿರಿದು ಎಂದು ಹುಬ್ಬೇರುವಂತೆ ಮಾಡಿದ್ದಾನೆ. ಈ ಮರೆಗುಳಿತನ ಕಾಣಿಸಿಕೊಳ್ಳುವ ಹತ್ತು ವರ್ಷ ಮೊದಲೇ ಈ ರೋಗ ಲಕ್ಷಣಗಳನ್ನು ಗುರ್ತಿಸಿ ತಡೆಗಟ್ಟುವ ವಿಧಿವಿಧಾನವನ್ನು ಕಂಡು ಹಿಡಿದಿರುವನು.

ಈತನು ತನ್ನೆಲ್ಲ ಪ್ರಯೋಗ ವಿವರವಾದ ಸಂಶೋಧನಾ ವರದಿಗಳನ್ನು ಈಗಾಗಲೇ “ಗೂಗಲ್ ಸೈನ್ಸ್ ಫೇರ್ ಪ್ರೈಜ್‌ಗೆ” ಕಳಿಸಿದ್ದಾನೆ. ಅಲ್ಲಿ ಅಂತಿಮವಾಗಿದ್ದು ಬಹುಮಾನ ಕೂಡಾ ಬಂದಿದೆ!

ಈತನಕ ಮರೆಗುಳಿಗೆ ದಿವ್ಯ ಔಷಧಿಯನ್ನು ಕಂಡು ಹಿಡಿಯಲು ಹಲವು ಥರದ ಅರಿವಿನ ನಾನಾ ಪರೀಕ್ಷೆಗಳನ್ನು ನಡೆಸಬೇಕಾಗಿತ್ತು! ಇಲ್ಲವೆ ವ್ಯಕ್ತಿಯ ಸಾವಿನ ತರುವಾಯ ಆತನ ಮೆದುಳನ್ನು ಪರೀಕ್ಷೆಗೆ ಒಡ್ಡಬೇಕಾಗಿತ್ತು. ಇದು ಪೋಸ್ಟ್‌ಮಾರ್‍ಟಂ ಕೆಲಸವಾಗಿತ್ತು!

ಆದರೆ… ಸರ್ರೆಯ ಕ್ರಿಟನ್ ನಿತ್ಯಾನಂದನ್ ಈಗ ತಾನು ಟ್ರೋಜನ್ ಹಾರ್ಸ್ ಎಂಬ ಪ್ರತಿಕಾಯವನ್ನು ಬಹಳ ಕಷ್ಟಪಟ್ಟು ಸಂಶೋಧಿಸಿದ್ದು ಅದು ಮೆದುಳನ್ನು ಸಲೀಸಾಗಿ ಹೊಕ್ಕು ಅಲ್ಲಿರುವ ಮರೆಗುಳಿತನ ತರುವ ನ್ಯೂರೋಟಾಕ್ಸಿಕ್ ಪ್ರೋಟಿನ್‌ಗಳ ಜತೆ ಕೂಡಿಕೊಳ್ಳುವುವು…. ಹೀಗಾಗಿ ಮೊತ್ತ ಮೊದಲ ಪ್ರಯತ್ನದಲ್ಲಿಯೇ ಮರೆಗುಳಿತನವನ್ನು ಗುರ್ತಿಸಿದ್ದು ಪರಿಹಾರವೂ ದೊರಕಿರುವುದು!

ಈಗೀಗ ಬ್ರಿಟನ್ ದೇಶದಲ್ಲೇನು… ಇತರ ದೇಶ ವಿದೇಶಗಳಲ್ಲಿ ಕೂಡಾ ಮರೆಗುಳಿತನ ಬಹುದೊಡ್ಡ ಕಾಯಿಲೆಯಾಗಿ ಉಲ್ಬಣಗೊಳ್ಳುತ್ತಿದ್ದು ಇದಕ್ಕೊಂದು ಪರಿಹಾರ ಸಿಕ್ಕಂತಾಗಿದೆಯೆಂದು ನಿತ್ಯಾನಂದನ್ ಈಗಾಗಲೇ ಅಭಿಮಾನದಿಂದ ಸಾರಿಕೊಂಡಿದ್ದಾನೆ.

ನಾವು ನೀವು ಎಲ್ಲರೂ ನಿತ್ಯಾನಂದನ್‌ಗೆ ಆಲ್ ದಿ ಬೆಸ್ಟ್ ಹೇಳೋಣವಲ್ಲವೇ?
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...