Home / ಲೇಖನ / ವಿಜ್ಞಾನ / ಮರೆಗುಳಿತನ

ಮರೆಗುಳಿತನ

ಕೆಲವರಿಗೆ ಮರೆಗುಳಿತನ ವಂಶ ಪರಂಪರೆಯಾಗಿ ಬಂದಿರುತ್ತದೆ. ವಯಸ್ಸು ಸಣ್ಣದಿರಲಿ ದೊಡ್ಡದಿರಲಿ ಮರೆಗುಳಿತನ ಜಾಸ್ತಿಯಿರುವುದು, ಮರೆವು ಒಂದು ವರದಾನ. ಕಹಿಯನ್ನು ಮರೆಯಲು ದೇವರಿತ್ತ ವರವು. ಇದರಿಂದಾಗಿ ತುಸು ನೆಮ್ಮದಿ, ತೃಪ್ತಿ, ಶಾಂತಿ ಲಭಿಸಲು ಕಾರಣವಾಗಿದೆ. ಮರೆವು ಬೇಕು. ಆದರೆ ಅದೇ ಜಾಸ್ತಿಯಾದರೆ…. ಜೀವನ ನೀರಸನವಾಗುವುದು.

ಈ ಮರೆಗುಳಿತನಕ್ಕೆ ಕಾರಣವೇನು? ವಯಸ್ಸಾಗುತ್ತಾ… ಬರುಬರುತ್ತಾ… ಮರೆವು ಸಹಜವೇ? ನಿಜಕ್ಕೂ ಮರೆವು ಒಂದು ವರದಾನವೇ? ಇದೊಂದು ಕಾಯಿಲೆಯೇ?

– ಹೀಗೆ ಹಲವು ಪ್ರಶ್ನೆಗಳನ್ನಿಟ್ಟುಕೊಂಡು ಶಾಶ್ವತ ಪರಿಹಾರ ನೀಡುವ ಔಷಧಿ ಕಂಡು ಹಿಡಿಯಲು ವಿಶ್ವದಾದ್ಯಂತ ನಿರಂತರವಾಗಿ…. ಹಲವು ಸಂಶೋಧನೆಗಳು ಈಗಾಗಲೇ ಜರುಗುತ್ತಿವೆ.

ಈಗೀಗ ಘಟಾನುಘಟಿ ವೈದ್ಯರು, ನರತಜ್ಞರು, ವಿಜ್ಞಾನಿಗಳು… ಈಗಲೂ ಈ ಕಾಯಿಲೆಗೆ ಔಷಧಿಯನ್ನು ನಿಖರ ಕಾರ್‍ಯ ಕಾರಣವನ್ನು ಪರಿಹಾರವನ್ನು ಕಂಡು ಹಿಡಿಯಲು ಶ್ರಮಿಸುತ್ತಿದ್ದಾರೆ.

ಆದರೆ… ಜುಲೈ ೨೦೧೫ ರಲ್ಲಿ ಸರ್ರೆಯ ಕ್ರಿಟಿನ್ ನಿತ್ಯಾನಂದನ್ ಲಂಡನ್ ಶಾಲಾ ಬಾಲಕ ವಯಸ್ಸು ೧೫ ವರ್ಷ ಭಾರತೀಯ ಮೂಲದ ಬ್ರಿಟೀಶ್ ಪ್ರಜೆಯಾದ ಈತ ಈಗ ಮರೆಗುಳಿತನಕ್ಕೆ ಪರಿಹಾರ ಕಂಡು ಹಿಡಿದು, ಇಡೀ ಜಗತ್ತನ್ನು ನಿಬ್ಬೆರಗುಗೊಳಿಸಿದ್ದಾನೆ. ಅಬ್ಬಾ! ವಯಸ್ಸು ಕಿರಿದು ಸಾಧನೆ ಹಿರಿದು ಎಂದು ಹುಬ್ಬೇರುವಂತೆ ಮಾಡಿದ್ದಾನೆ. ಈ ಮರೆಗುಳಿತನ ಕಾಣಿಸಿಕೊಳ್ಳುವ ಹತ್ತು ವರ್ಷ ಮೊದಲೇ ಈ ರೋಗ ಲಕ್ಷಣಗಳನ್ನು ಗುರ್ತಿಸಿ ತಡೆಗಟ್ಟುವ ವಿಧಿವಿಧಾನವನ್ನು ಕಂಡು ಹಿಡಿದಿರುವನು.

ಈತನು ತನ್ನೆಲ್ಲ ಪ್ರಯೋಗ ವಿವರವಾದ ಸಂಶೋಧನಾ ವರದಿಗಳನ್ನು ಈಗಾಗಲೇ “ಗೂಗಲ್ ಸೈನ್ಸ್ ಫೇರ್ ಪ್ರೈಜ್‌ಗೆ” ಕಳಿಸಿದ್ದಾನೆ. ಅಲ್ಲಿ ಅಂತಿಮವಾಗಿದ್ದು ಬಹುಮಾನ ಕೂಡಾ ಬಂದಿದೆ!

ಈತನಕ ಮರೆಗುಳಿಗೆ ದಿವ್ಯ ಔಷಧಿಯನ್ನು ಕಂಡು ಹಿಡಿಯಲು ಹಲವು ಥರದ ಅರಿವಿನ ನಾನಾ ಪರೀಕ್ಷೆಗಳನ್ನು ನಡೆಸಬೇಕಾಗಿತ್ತು! ಇಲ್ಲವೆ ವ್ಯಕ್ತಿಯ ಸಾವಿನ ತರುವಾಯ ಆತನ ಮೆದುಳನ್ನು ಪರೀಕ್ಷೆಗೆ ಒಡ್ಡಬೇಕಾಗಿತ್ತು. ಇದು ಪೋಸ್ಟ್‌ಮಾರ್‍ಟಂ ಕೆಲಸವಾಗಿತ್ತು!

ಆದರೆ… ಸರ್ರೆಯ ಕ್ರಿಟನ್ ನಿತ್ಯಾನಂದನ್ ಈಗ ತಾನು ಟ್ರೋಜನ್ ಹಾರ್ಸ್ ಎಂಬ ಪ್ರತಿಕಾಯವನ್ನು ಬಹಳ ಕಷ್ಟಪಟ್ಟು ಸಂಶೋಧಿಸಿದ್ದು ಅದು ಮೆದುಳನ್ನು ಸಲೀಸಾಗಿ ಹೊಕ್ಕು ಅಲ್ಲಿರುವ ಮರೆಗುಳಿತನ ತರುವ ನ್ಯೂರೋಟಾಕ್ಸಿಕ್ ಪ್ರೋಟಿನ್‌ಗಳ ಜತೆ ಕೂಡಿಕೊಳ್ಳುವುವು…. ಹೀಗಾಗಿ ಮೊತ್ತ ಮೊದಲ ಪ್ರಯತ್ನದಲ್ಲಿಯೇ ಮರೆಗುಳಿತನವನ್ನು ಗುರ್ತಿಸಿದ್ದು ಪರಿಹಾರವೂ ದೊರಕಿರುವುದು!

ಈಗೀಗ ಬ್ರಿಟನ್ ದೇಶದಲ್ಲೇನು… ಇತರ ದೇಶ ವಿದೇಶಗಳಲ್ಲಿ ಕೂಡಾ ಮರೆಗುಳಿತನ ಬಹುದೊಡ್ಡ ಕಾಯಿಲೆಯಾಗಿ ಉಲ್ಬಣಗೊಳ್ಳುತ್ತಿದ್ದು ಇದಕ್ಕೊಂದು ಪರಿಹಾರ ಸಿಕ್ಕಂತಾಗಿದೆಯೆಂದು ನಿತ್ಯಾನಂದನ್ ಈಗಾಗಲೇ ಅಭಿಮಾನದಿಂದ ಸಾರಿಕೊಂಡಿದ್ದಾನೆ.

ನಾವು ನೀವು ಎಲ್ಲರೂ ನಿತ್ಯಾನಂದನ್‌ಗೆ ಆಲ್ ದಿ ಬೆಸ್ಟ್ ಹೇಳೋಣವಲ್ಲವೇ?
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...