ತಾಯಿ-ಭೂಮಿ

ತಾಯಿಯಂತೆ ಭರಿಸುವೆ ನಾ ಈ ಇವರುಗಳ
ನನ್ನನ್ನು ಹಂಚಿಕೊಂಡವರ ದೇಶದ ನೆಲವ
ಇಂಚಿಂಚು ತಿಂದವರ ನನ್ನ ಮನಸ್ಸೆಂಬ
ಸರೋವರದಲೀಸಾಡ ಬಂದವರ, ನನ್ನ
ಒಂದೊಂದು
ಮೂಲೆಯನೂ ತಮ್ಮದೆಂದು ಕೊಂಡವರ
ಗಲ್ಲಿಯ ಗುರುವೊಬ್ಬ ಜಗದ್ಗುರುವಾದಂತೆ
ನನ್ನ ಸಹಿಷ್ಣುತೆಯ ಅನಿವಾರ್ಯತೆಯ
ನರಿಯವರ,
ಒಲ್ಲದವರ, ತಮ್ಮ ಪೌರುಷಕೆಂದೇ ನೆಲವೆಂದವರ
ಹುಸಿ ಭ್ರಮೆಯಲಿ ಮಿಂದವರ ಮುನ್ನ ಶತ
ಕೋಟಿ ರಾಯರುಗಳಾಳಿದ ನೆಲವ ತನ್ನದೆಂದೆನುತ
ಶಾಸನವ ಬರೆಸಿದವರ, ಗರ್‍ವರಸ ಸೋರಿದವರ.

ಒಂದು ಮಳೆಗೆಂದೂ ನೆನೆಯದ ಭೂಮಿ
ಕಾದಿರುವಂತೆ ಹತ್ತಾರು ಮಳೆಗೆ ಕಾದಿರುವೆ
ನಾನು, ತೆರೆದಂತೆ ಭಾನು ಈ ಜಗದ
ಮೂಲೆ ಮೂಲೆಯಲಿರುವ ಈ ಇವರ
ಒಂದೊಂದೇ ಫೋನಿಗಾಗಿ, ಒಂದೊಂದೇ ಪತ್ರ
ಕಾಗಿ, ಒಂದೊಂದೇ ಭೇಟಿಗಾಗಿ, ತನ್ನಿಂದಲೇ
ಇವಳು ಎಂಬ ಇವರ ಭ್ರಮೆಗಾಗಿ

ಏಕಿವರು ಅರ್ಥಮಾಡಿಕೊಳ್ಳುವುದಿಲ್ಲ
ಎಂದು ಕೊರಗಿದ್ದೇನೆ, ಏಕಿವರು
ಸಹಿಸುವುದಿಲ್ಲ ಎಂದು ಮರುಗಿದ್ದೇನೆ.
ಚಲನೆಯ ನಿಯಮದ ಆಳ ತಿಳಿಯದ
ಇವರ ಅಜ್ಞಾನಕೆ ಅತ್ತಿದ್ದೇನೆ. ತಾನು
ತುಂಬಲಾರದ ಶೂನ್ಯವ ತುಂಬಲಿರುವ
ಇನ್ನೊಂದು ಬರುವಿಕೆಯನಿವರೇಕೆ
ಅರಿಯಬಾರದು ಎಂದು ವಾದಿಸಿದ್ದೇನೆ.
ಮುಖ ಊದಿಸಿದ್ದೇನೆ ಬಾಯಿಮಾತ್ರ
ಬಿಡಲಾರೆ, ಬಿಟ್ಟರೆ ಮಾರಾಮಾರಿ.

ಇವರೇ ರಾವಣ ಕುಂಭಕರ್‍ಣರಾಗುತ್ತಾರೆ
ತಾವು ರಾಮ ಲಕ್ಷ್ಮಣರೆಂದೇ ಭಾವಿಸುತ್ತಾರೆ.
ದುರ್ಯೋಧನನ ಒಳಗೇ ಅಡಗಿ ಕುಳಿತು ಕೃಷ್ಣ
ನಂತೆ ನಟಿಸುತ್ತಾರೆ ಇವರು ಯಾವ ರಾಮಾ
ಯಣ ಭಾರತ ಬರೆಯುವುದು ಬೇಡ.
ಮಳೆ ಹನಿ ಹೇಗೆ ಹಸಿರೊಡೆಸಿ ಕರ್ತವ್ಯ ತೀರಿಸಿ
ನಡೆಯುವುದೋ ಹಾಗೆ ಬಾಳಿರೋ
ಎಂದು ಬುದ್ದಿ ಹೇಳಿದ್ದೇನೆ. ಏಕಾಂತದಲಿ
ಕಚ್ಚಾಡಿದ್ದೇನೆ.
ಅವನ ಸುದ್ದಿ ಇವನ ಬಳಿ ಇವನ ಸುದ್ದಿ ಅವನ
ಬಳಿ ಎತ್ತುವಂತಿಲ್ಲ ಕುರುಕ್ಷೇತ್ರ ಕಣ್ಣ
ಪಟ್ಟಿ, ಕಟ್ಟಿದ ಗಾಂಧಾರಿಯಂತ ಒಳಗೊಳಗೇ
ಕುದ್ದಿದ್ದೇನೆ. ಇವರು ಹರಿದು ಚಿಂದಿ
ಮಾಡಿದ ಈ ತೇಪೆ ದೇಹದ ಮೇಲೆಲ್ಲಾ
ನನ್ನ ಕರುಣೆಯ ವರ್ಷ ಸುರಿಸಿದ್ದೇನೆ.
ಒಂದೇ ತಟ್ಟೆಯಲಿವರಿಗೆ ಉಣಬಡಿಸಿದ್ದೇನೆ.
ಉಣ್ಣುತ್ತಲೇ ತನ್ನದು ತಟ್ಟೆ ಎಂದು ಭಾವಿಸುವ
ಅವರ ಮೂರ್‍ಖತನವ ಸೆರಗಿನಲಿ ಮುಚ್ಚಿ
ಇನ್ನೊಬ್ಬನಿಗೆ ತುತ್ತಿಕ್ಕಿದ್ದೇನೆ. ಸದಾ ಇವರಿ
ಗಾಗಿ ಬಿಕ್ಕಿದ್ದೇನೆ ಮತ್ತು ಇನ್ನೂ ಬದುಕಿದ್ದೇನೆ.
*****
-ಗಾಂಧಿ ಬಜಾರ್ ಪತ್ರಿಕೆ

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅತ್ತರ್
Next post ತುಂಬಿ ಬಂದ ಕಡಲಿನಲಿ

ಸಣ್ಣ ಕತೆ

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

  • ನಾಗನ ವರಿಸಿದ ಬಿಂಬಾಲಿ…

    ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ… Read more…

  • ಮಿಂಚಿನ ದೀಪ

    ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

  • ಒಂದು ಹಿಡಿ ಪ್ರೀತಿ

    ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…

cheap jordans|wholesale air max|wholesale jordans|wholesale jewelry|wholesale jerseys