Home / ಕವನ / ಕವಿತೆ / ತಾಯಿ-ಭೂಮಿ

ತಾಯಿ-ಭೂಮಿ

ತಾಯಿಯಂತೆ ಭರಿಸುವೆ ನಾ ಈ ಇವರುಗಳ
ನನ್ನನ್ನು ಹಂಚಿಕೊಂಡವರ ದೇಶದ ನೆಲವ
ಇಂಚಿಂಚು ತಿಂದವರ ನನ್ನ ಮನಸ್ಸೆಂಬ
ಸರೋವರದಲೀಸಾಡ ಬಂದವರ, ನನ್ನ
ಒಂದೊಂದು
ಮೂಲೆಯನೂ ತಮ್ಮದೆಂದು ಕೊಂಡವರ
ಗಲ್ಲಿಯ ಗುರುವೊಬ್ಬ ಜಗದ್ಗುರುವಾದಂತೆ
ನನ್ನ ಸಹಿಷ್ಣುತೆಯ ಅನಿವಾರ್ಯತೆಯ
ನರಿಯವರ,
ಒಲ್ಲದವರ, ತಮ್ಮ ಪೌರುಷಕೆಂದೇ ನೆಲವೆಂದವರ
ಹುಸಿ ಭ್ರಮೆಯಲಿ ಮಿಂದವರ ಮುನ್ನ ಶತ
ಕೋಟಿ ರಾಯರುಗಳಾಳಿದ ನೆಲವ ತನ್ನದೆಂದೆನುತ
ಶಾಸನವ ಬರೆಸಿದವರ, ಗರ್‍ವರಸ ಸೋರಿದವರ.

ಒಂದು ಮಳೆಗೆಂದೂ ನೆನೆಯದ ಭೂಮಿ
ಕಾದಿರುವಂತೆ ಹತ್ತಾರು ಮಳೆಗೆ ಕಾದಿರುವೆ
ನಾನು, ತೆರೆದಂತೆ ಭಾನು ಈ ಜಗದ
ಮೂಲೆ ಮೂಲೆಯಲಿರುವ ಈ ಇವರ
ಒಂದೊಂದೇ ಫೋನಿಗಾಗಿ, ಒಂದೊಂದೇ ಪತ್ರ
ಕಾಗಿ, ಒಂದೊಂದೇ ಭೇಟಿಗಾಗಿ, ತನ್ನಿಂದಲೇ
ಇವಳು ಎಂಬ ಇವರ ಭ್ರಮೆಗಾಗಿ

ಏಕಿವರು ಅರ್ಥಮಾಡಿಕೊಳ್ಳುವುದಿಲ್ಲ
ಎಂದು ಕೊರಗಿದ್ದೇನೆ, ಏಕಿವರು
ಸಹಿಸುವುದಿಲ್ಲ ಎಂದು ಮರುಗಿದ್ದೇನೆ.
ಚಲನೆಯ ನಿಯಮದ ಆಳ ತಿಳಿಯದ
ಇವರ ಅಜ್ಞಾನಕೆ ಅತ್ತಿದ್ದೇನೆ. ತಾನು
ತುಂಬಲಾರದ ಶೂನ್ಯವ ತುಂಬಲಿರುವ
ಇನ್ನೊಂದು ಬರುವಿಕೆಯನಿವರೇಕೆ
ಅರಿಯಬಾರದು ಎಂದು ವಾದಿಸಿದ್ದೇನೆ.
ಮುಖ ಊದಿಸಿದ್ದೇನೆ ಬಾಯಿಮಾತ್ರ
ಬಿಡಲಾರೆ, ಬಿಟ್ಟರೆ ಮಾರಾಮಾರಿ.

ಇವರೇ ರಾವಣ ಕುಂಭಕರ್‍ಣರಾಗುತ್ತಾರೆ
ತಾವು ರಾಮ ಲಕ್ಷ್ಮಣರೆಂದೇ ಭಾವಿಸುತ್ತಾರೆ.
ದುರ್ಯೋಧನನ ಒಳಗೇ ಅಡಗಿ ಕುಳಿತು ಕೃಷ್ಣ
ನಂತೆ ನಟಿಸುತ್ತಾರೆ ಇವರು ಯಾವ ರಾಮಾ
ಯಣ ಭಾರತ ಬರೆಯುವುದು ಬೇಡ.
ಮಳೆ ಹನಿ ಹೇಗೆ ಹಸಿರೊಡೆಸಿ ಕರ್ತವ್ಯ ತೀರಿಸಿ
ನಡೆಯುವುದೋ ಹಾಗೆ ಬಾಳಿರೋ
ಎಂದು ಬುದ್ದಿ ಹೇಳಿದ್ದೇನೆ. ಏಕಾಂತದಲಿ
ಕಚ್ಚಾಡಿದ್ದೇನೆ.
ಅವನ ಸುದ್ದಿ ಇವನ ಬಳಿ ಇವನ ಸುದ್ದಿ ಅವನ
ಬಳಿ ಎತ್ತುವಂತಿಲ್ಲ ಕುರುಕ್ಷೇತ್ರ ಕಣ್ಣ
ಪಟ್ಟಿ, ಕಟ್ಟಿದ ಗಾಂಧಾರಿಯಂತ ಒಳಗೊಳಗೇ
ಕುದ್ದಿದ್ದೇನೆ. ಇವರು ಹರಿದು ಚಿಂದಿ
ಮಾಡಿದ ಈ ತೇಪೆ ದೇಹದ ಮೇಲೆಲ್ಲಾ
ನನ್ನ ಕರುಣೆಯ ವರ್ಷ ಸುರಿಸಿದ್ದೇನೆ.
ಒಂದೇ ತಟ್ಟೆಯಲಿವರಿಗೆ ಉಣಬಡಿಸಿದ್ದೇನೆ.
ಉಣ್ಣುತ್ತಲೇ ತನ್ನದು ತಟ್ಟೆ ಎಂದು ಭಾವಿಸುವ
ಅವರ ಮೂರ್‍ಖತನವ ಸೆರಗಿನಲಿ ಮುಚ್ಚಿ
ಇನ್ನೊಬ್ಬನಿಗೆ ತುತ್ತಿಕ್ಕಿದ್ದೇನೆ. ಸದಾ ಇವರಿ
ಗಾಗಿ ಬಿಕ್ಕಿದ್ದೇನೆ ಮತ್ತು ಇನ್ನೂ ಬದುಕಿದ್ದೇನೆ.
*****
-ಗಾಂಧಿ ಬಜಾರ್ ಪತ್ರಿಕೆ

Tagged:

Leave a Reply

Your email address will not be published. Required fields are marked *

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...