Home / ಕವನ / ಕವಿತೆ / ತಾಯಿ-ಭೂಮಿ

ತಾಯಿ-ಭೂಮಿ

ತಾಯಿಯಂತೆ ಭರಿಸುವೆ ನಾ ಈ ಇವರುಗಳ
ನನ್ನನ್ನು ಹಂಚಿಕೊಂಡವರ ದೇಶದ ನೆಲವ
ಇಂಚಿಂಚು ತಿಂದವರ ನನ್ನ ಮನಸ್ಸೆಂಬ
ಸರೋವರದಲೀಸಾಡ ಬಂದವರ, ನನ್ನ
ಒಂದೊಂದು
ಮೂಲೆಯನೂ ತಮ್ಮದೆಂದು ಕೊಂಡವರ
ಗಲ್ಲಿಯ ಗುರುವೊಬ್ಬ ಜಗದ್ಗುರುವಾದಂತೆ
ನನ್ನ ಸಹಿಷ್ಣುತೆಯ ಅನಿವಾರ್ಯತೆಯ
ನರಿಯವರ,
ಒಲ್ಲದವರ, ತಮ್ಮ ಪೌರುಷಕೆಂದೇ ನೆಲವೆಂದವರ
ಹುಸಿ ಭ್ರಮೆಯಲಿ ಮಿಂದವರ ಮುನ್ನ ಶತ
ಕೋಟಿ ರಾಯರುಗಳಾಳಿದ ನೆಲವ ತನ್ನದೆಂದೆನುತ
ಶಾಸನವ ಬರೆಸಿದವರ, ಗರ್‍ವರಸ ಸೋರಿದವರ.

ಒಂದು ಮಳೆಗೆಂದೂ ನೆನೆಯದ ಭೂಮಿ
ಕಾದಿರುವಂತೆ ಹತ್ತಾರು ಮಳೆಗೆ ಕಾದಿರುವೆ
ನಾನು, ತೆರೆದಂತೆ ಭಾನು ಈ ಜಗದ
ಮೂಲೆ ಮೂಲೆಯಲಿರುವ ಈ ಇವರ
ಒಂದೊಂದೇ ಫೋನಿಗಾಗಿ, ಒಂದೊಂದೇ ಪತ್ರ
ಕಾಗಿ, ಒಂದೊಂದೇ ಭೇಟಿಗಾಗಿ, ತನ್ನಿಂದಲೇ
ಇವಳು ಎಂಬ ಇವರ ಭ್ರಮೆಗಾಗಿ

ಏಕಿವರು ಅರ್ಥಮಾಡಿಕೊಳ್ಳುವುದಿಲ್ಲ
ಎಂದು ಕೊರಗಿದ್ದೇನೆ, ಏಕಿವರು
ಸಹಿಸುವುದಿಲ್ಲ ಎಂದು ಮರುಗಿದ್ದೇನೆ.
ಚಲನೆಯ ನಿಯಮದ ಆಳ ತಿಳಿಯದ
ಇವರ ಅಜ್ಞಾನಕೆ ಅತ್ತಿದ್ದೇನೆ. ತಾನು
ತುಂಬಲಾರದ ಶೂನ್ಯವ ತುಂಬಲಿರುವ
ಇನ್ನೊಂದು ಬರುವಿಕೆಯನಿವರೇಕೆ
ಅರಿಯಬಾರದು ಎಂದು ವಾದಿಸಿದ್ದೇನೆ.
ಮುಖ ಊದಿಸಿದ್ದೇನೆ ಬಾಯಿಮಾತ್ರ
ಬಿಡಲಾರೆ, ಬಿಟ್ಟರೆ ಮಾರಾಮಾರಿ.

ಇವರೇ ರಾವಣ ಕುಂಭಕರ್‍ಣರಾಗುತ್ತಾರೆ
ತಾವು ರಾಮ ಲಕ್ಷ್ಮಣರೆಂದೇ ಭಾವಿಸುತ್ತಾರೆ.
ದುರ್ಯೋಧನನ ಒಳಗೇ ಅಡಗಿ ಕುಳಿತು ಕೃಷ್ಣ
ನಂತೆ ನಟಿಸುತ್ತಾರೆ ಇವರು ಯಾವ ರಾಮಾ
ಯಣ ಭಾರತ ಬರೆಯುವುದು ಬೇಡ.
ಮಳೆ ಹನಿ ಹೇಗೆ ಹಸಿರೊಡೆಸಿ ಕರ್ತವ್ಯ ತೀರಿಸಿ
ನಡೆಯುವುದೋ ಹಾಗೆ ಬಾಳಿರೋ
ಎಂದು ಬುದ್ದಿ ಹೇಳಿದ್ದೇನೆ. ಏಕಾಂತದಲಿ
ಕಚ್ಚಾಡಿದ್ದೇನೆ.
ಅವನ ಸುದ್ದಿ ಇವನ ಬಳಿ ಇವನ ಸುದ್ದಿ ಅವನ
ಬಳಿ ಎತ್ತುವಂತಿಲ್ಲ ಕುರುಕ್ಷೇತ್ರ ಕಣ್ಣ
ಪಟ್ಟಿ, ಕಟ್ಟಿದ ಗಾಂಧಾರಿಯಂತ ಒಳಗೊಳಗೇ
ಕುದ್ದಿದ್ದೇನೆ. ಇವರು ಹರಿದು ಚಿಂದಿ
ಮಾಡಿದ ಈ ತೇಪೆ ದೇಹದ ಮೇಲೆಲ್ಲಾ
ನನ್ನ ಕರುಣೆಯ ವರ್ಷ ಸುರಿಸಿದ್ದೇನೆ.
ಒಂದೇ ತಟ್ಟೆಯಲಿವರಿಗೆ ಉಣಬಡಿಸಿದ್ದೇನೆ.
ಉಣ್ಣುತ್ತಲೇ ತನ್ನದು ತಟ್ಟೆ ಎಂದು ಭಾವಿಸುವ
ಅವರ ಮೂರ್‍ಖತನವ ಸೆರಗಿನಲಿ ಮುಚ್ಚಿ
ಇನ್ನೊಬ್ಬನಿಗೆ ತುತ್ತಿಕ್ಕಿದ್ದೇನೆ. ಸದಾ ಇವರಿ
ಗಾಗಿ ಬಿಕ್ಕಿದ್ದೇನೆ ಮತ್ತು ಇನ್ನೂ ಬದುಕಿದ್ದೇನೆ.
*****
-ಗಾಂಧಿ ಬಜಾರ್ ಪತ್ರಿಕೆ

Tagged:

Leave a Reply

Your email address will not be published. Required fields are marked *

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...

ಮಧ್ಯಾಹ್ನದ ಆರು ತಾಸಿನ ಸಮಯ. ಬಿಸಿಲು ರಣಗುಟ್ಟುತ್ತಿತ್ತು. ಕಲ್ಲವನು ಉರುವಲ ಹೊರೆಯೊಂದನ್ನು ಹೊತ್ತು ತಂದು, ಗುಡಿಸಲಿನ ಮುಂದೆ ಒಗೆದು ಬೇವಿನ ಗಿಡದ ನೆರಳಿನಲ್ಲಿ ಕುಳಿತು ಉಸ್ಸೆಂದು ಉಸುರುಗರೆದಳು. ಗುಡಿಸಲಿನೊಳಗಿಂದ ನಾಲ್ಕಾರು ಚಿಕ್ಕ ಮಕ್ಕಳು ಹೊರಗೆ ಹಾತೊರೆದು ಬಂದು, “ಅವ್...

ಬೀರ ಹಾಸಿಗೆಯಲ್ಲಿ ಹೊರಳುತ್ತಿದ್ದಾನೆ, ಕಣ್ಣಿಗೆ ನಿದ್ರೆಯಿಲ್ಲ; ಮನಸ್ಸಿಗೆ ಶಾ೦ತಿಯಿಲ್ಲ. ಸಾಯಂಕಾಲ ಊರ ಚಾವಡಿಯಲ್ಲಿ “ಹೆಚ್ಚು ಆಹಾರ ಧಾನ್ಯ ಬೆಳೆಯಿರಿ!” ಎಂಬ ವಿಷಯದ ಮೇಲೆ ಅಧಿಕಾರಿಗಳ ವ್ಯಾಖ್ಯಾನ ಕೇಳಿದ್ದನಾತ. ಆಗಿನಿಂದಲೂ ಅವನಿಗೆ ತಾನೊಂದು ಬಾವಿಯನ್ನೇಕೆ ತೋಡಬಾರದು ಎನ್ನ...