ಧಾರಿಣಿ

ಧಗೆಯ ಒಡಲು ಈ ಧಾರಿಣಿಯ ಮಡಿಲು
ಕ್ಷಮಯಾ ಧರಿತ್ರಿ ಎಂಬುದೆಲ್ಲಾ ಹಸಿ ಹಸಿಸುಳ್ಳು,
ಬೇಯುತ್ತಿರುವ ಒಡಲ ಬೆಂಕಿಯ
ಹಳದಿ ನೀರಾಗಿ ಉಗುಳುತ್ತಾಳೆ.
ನನ್ನ ಮೇಲಿನ ಹಸಿರು ಬರೀ ತೋರಿಕೆ
ಎಂದು ಸ್ಪಷ್ಟವಾಗೇ ಬೊಗಳುತ್ತಾಳೆ.

ಆದರೂ ಇವಳಿಗಂಟಿ ತಾವೂ ತಿರುಗುತ್ತಿರುವ
ಈ ಹುಲು ಮಾನವರಿಗೇನೋ ಭ್ರಮೆ
ನಾವು ತಿರುಗುತ್ತಿಲ್ಲ ನಿಂತಿದ್ದೇವೆ.
ಇವಳ ತಲೆ ಮೇಲೇ ಮನೆ ಮಠ ಕಟ್ಟಿದ್ದೇವೆ.
ದೇಗುಲದ ಗೋಪುರ ಗೂಟ ಹೊಡೆದಿದ್ದೇವೆ
ಈ ಇವಳ ಓಲಾಡುವ ಒಡಲಿಗೇ ಲಂಗರು
ಹಡಗ ಬಿಗಿದಿದ್ದೇವೆ.

ಅವಳು ಕಣ್ಣೆವೆ ಮುಚ್ಚಿ ತೆರೆಯುವುದರಲ್ಲಿ
ನಿದ್ರಿಸಿ ಎದ್ದಿದ್ದೇವೆ. ಕೋಳಿ ಕೂಗಿಸಿದ್ದೇವೆ
ಕಾಫಿ ಕಾಯಿಸಿದ್ದೇವೆ. ಆ ಸೂರ್ಯನಿಗೆ ನಮಸ್ಕಾರ
ಹಾಕಿದ್ದೇವೆ ಕಾಲಿಗೆ ಕೈಗೆ ನೀರು ಹೊಯ್ದಿದ್ದೇವೆ.
ಅವನ ನಿನ್ನ ಈ ಮಸೆದಾಟದ ನಡುವೆ
ನಾವು ಮುಗಿಸಬೇಕಿದೆ ನಮ್ಮ ದಿನಚರಿ
ನಿಮ್ಮ ಮಿಲನದ ಏರುಪೇರಿಗೇ ಆ ಸೂರ್‍ಯ
ಬಸವಳಿದು ನಿನ್ನೊಡಲಿನ ಬೆಂಕಿಗೆ ಸಮ ಸಮ
ತನ್ನೊಡಲಿನ ಬೆಂಕಿ ಸುರಿದು ನಿನ್ನಧರಾಮೃತ
ಪಾನದಿಂದ ಕೆಂಪೇರಿ ಕುಡುಕನಂತೆ ಬೀಳುತ್ತಾನೆ.

ಆಗ ನಿನಗಾದ ನಿರಾಸೆಯೇ ಕತ್ತಲಾಗಿ
ಹಬ್ಬಿ ನಿನ್ನ ತಬ್ಬುತ್ತದೆ. ಮತ್ತೆ ಅವನ, ಆ
ಹಳೇ ಗಂಡನ ಪತ್ತೆಯಾಗುವವರೆಗೆ ನಿನಗೆ
ತೂಕಡಿಕೆ ಆ ಅರೆ ಎಚ್ಚರದಲ್ಲಿ ನಿನ್ನ ಮೈ ಮೇಲೆ
ಎಲ್ಲಾ ಅವ್ಯವಹಾರ, ಒಂದೆರಡೆ ಜಾವ, ಮತ್ತೆ
ಇಬ್ಬನಿಯಲಿ ಮೈ ತೊಳೆದು ಹೂ ಸುಗಂಧ ಪೂಸಿ
ಕಣ್ಣರಳಿಸಿ ಅವನು ಬಂದನೆಂದರೆ ನಿನಗೆ
ಸಡಗರ ಹೊಸ ಯೌವನ, ಯುಗಯುಗ
ಗಳಿಂದ ನಡೆದ ಮೈಥುನ
ಬೇಸರವೇ ಬಾರದ ಮುಪ್ಪೇ ಇರದ
ನಿಮ್ಮಿಬ್ಬರ ಈ ಮಿಲನ.
*****
-ಗಾಂಧಿಬಜಾರ್ ಪತ್ರಿಕೆ

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬ್ರಾಹ್ಮಣ
Next post ಒಲವೇ ನನ್ನೊಲವೇ-೨

ಸಣ್ಣ ಕತೆ

  • ಅಹಮ್ ಬ್ರಹ್ಮಾಸ್ಮಿ

    ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…

  • ಅಪರೂಪದ ಬಾಂಧವ್ಯ

    ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…

  • ಜಡ

    ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ… Read more…

  • ವಿಷಚಕ್ರ

    "ಚಂದ್ರು, ಒಳಗೆ ಬಾಮ್ಮ. ಮಳೆ ಬರುತ್ತೆ." ತಾಯಿ ಕೂಗಿದುದನ್ನು ಕೇಳಿ ಚಂದ್ರು ನಕ್ಕ. ಒಳಕ್ಕೆ ಬರುವುದಿರಲಿ, ಪಕ್ಕದ ಮನೆಯ ಹುಡುಗಿ ವೇದಳೊಂದಿಗೆ ಆಡುತ್ತಿದ್ದುದನ್ನು ನಿಲ್ಲಿಸಲೂ ಇಲ್ಲ. "ನೋಡೇ-ನಾನು… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

cheap jordans|wholesale air max|wholesale jordans|wholesale jewelry|wholesale jerseys