Home / ಕವನ / ಕವಿತೆ / ಧಾರಿಣಿ

ಧಾರಿಣಿ

ಧಗೆಯ ಒಡಲು ಈ ಧಾರಿಣಿಯ ಮಡಿಲು
ಕ್ಷಮಯಾ ಧರಿತ್ರಿ ಎಂಬುದೆಲ್ಲಾ ಹಸಿ ಹಸಿಸುಳ್ಳು,
ಬೇಯುತ್ತಿರುವ ಒಡಲ ಬೆಂಕಿಯ
ಹಳದಿ ನೀರಾಗಿ ಉಗುಳುತ್ತಾಳೆ.
ನನ್ನ ಮೇಲಿನ ಹಸಿರು ಬರೀ ತೋರಿಕೆ
ಎಂದು ಸ್ಪಷ್ಟವಾಗೇ ಬೊಗಳುತ್ತಾಳೆ.

ಆದರೂ ಇವಳಿಗಂಟಿ ತಾವೂ ತಿರುಗುತ್ತಿರುವ
ಈ ಹುಲು ಮಾನವರಿಗೇನೋ ಭ್ರಮೆ
ನಾವು ತಿರುಗುತ್ತಿಲ್ಲ ನಿಂತಿದ್ದೇವೆ.
ಇವಳ ತಲೆ ಮೇಲೇ ಮನೆ ಮಠ ಕಟ್ಟಿದ್ದೇವೆ.
ದೇಗುಲದ ಗೋಪುರ ಗೂಟ ಹೊಡೆದಿದ್ದೇವೆ
ಈ ಇವಳ ಓಲಾಡುವ ಒಡಲಿಗೇ ಲಂಗರು
ಹಡಗ ಬಿಗಿದಿದ್ದೇವೆ.

ಅವಳು ಕಣ್ಣೆವೆ ಮುಚ್ಚಿ ತೆರೆಯುವುದರಲ್ಲಿ
ನಿದ್ರಿಸಿ ಎದ್ದಿದ್ದೇವೆ. ಕೋಳಿ ಕೂಗಿಸಿದ್ದೇವೆ
ಕಾಫಿ ಕಾಯಿಸಿದ್ದೇವೆ. ಆ ಸೂರ್ಯನಿಗೆ ನಮಸ್ಕಾರ
ಹಾಕಿದ್ದೇವೆ ಕಾಲಿಗೆ ಕೈಗೆ ನೀರು ಹೊಯ್ದಿದ್ದೇವೆ.
ಅವನ ನಿನ್ನ ಈ ಮಸೆದಾಟದ ನಡುವೆ
ನಾವು ಮುಗಿಸಬೇಕಿದೆ ನಮ್ಮ ದಿನಚರಿ
ನಿಮ್ಮ ಮಿಲನದ ಏರುಪೇರಿಗೇ ಆ ಸೂರ್‍ಯ
ಬಸವಳಿದು ನಿನ್ನೊಡಲಿನ ಬೆಂಕಿಗೆ ಸಮ ಸಮ
ತನ್ನೊಡಲಿನ ಬೆಂಕಿ ಸುರಿದು ನಿನ್ನಧರಾಮೃತ
ಪಾನದಿಂದ ಕೆಂಪೇರಿ ಕುಡುಕನಂತೆ ಬೀಳುತ್ತಾನೆ.

ಆಗ ನಿನಗಾದ ನಿರಾಸೆಯೇ ಕತ್ತಲಾಗಿ
ಹಬ್ಬಿ ನಿನ್ನ ತಬ್ಬುತ್ತದೆ. ಮತ್ತೆ ಅವನ, ಆ
ಹಳೇ ಗಂಡನ ಪತ್ತೆಯಾಗುವವರೆಗೆ ನಿನಗೆ
ತೂಕಡಿಕೆ ಆ ಅರೆ ಎಚ್ಚರದಲ್ಲಿ ನಿನ್ನ ಮೈ ಮೇಲೆ
ಎಲ್ಲಾ ಅವ್ಯವಹಾರ, ಒಂದೆರಡೆ ಜಾವ, ಮತ್ತೆ
ಇಬ್ಬನಿಯಲಿ ಮೈ ತೊಳೆದು ಹೂ ಸುಗಂಧ ಪೂಸಿ
ಕಣ್ಣರಳಿಸಿ ಅವನು ಬಂದನೆಂದರೆ ನಿನಗೆ
ಸಡಗರ ಹೊಸ ಯೌವನ, ಯುಗಯುಗ
ಗಳಿಂದ ನಡೆದ ಮೈಥುನ
ಬೇಸರವೇ ಬಾರದ ಮುಪ್ಪೇ ಇರದ
ನಿಮ್ಮಿಬ್ಬರ ಈ ಮಿಲನ.
*****
-ಗಾಂಧಿಬಜಾರ್ ಪತ್ರಿಕೆ

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...