Home / ಕವನ / ಕವಿತೆ / ಇಳೆ-ಮಳೆ

ಇಳೆ-ಮಳೆ

ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ
ಹುಯ್ಯೋ ಹುಯ್ಯೋ ಮಳೆರಾಯ ಹೂವಿನ ತೋಟಕೆ ನೀರಿಲ್ಲ.
-ಜಾನಪದ ಗೀತೆ


ಇವಳೊಂದು ಪ್ರತಿಮೆ ಇವನೊಂದು ಪ್ರತಿಮೆ
ಇವಳಿಗಾಗಿ ಇವನೋ ಇವನಿಗಾಗಿ ಇವಳೋ
ಋತು ಋತುವಿಗೂ ಬೇರೆ ಬೇರೆ ರೂಪ ಇವನದೇ ಬೆಳೆ
ಇವನಿಗಾಗಿ ಕಾದು ಕಾದು ಕಾಯುತ್ತಿರುವ ಇವಳೇ ಇಳೆ.
ಇಳಾ ಎಂದರು ಧರಿತ್ರೀ ಎಂದರು.
ಸುಳ್ಳು ಸುಳ್ಳೇ ಕ್ಷಮಯಾ
ಧರಿತ್ರಿ ಎಂದೂ ಅಂದುಕೊಂಡಿದ್ದರು. ಇವನ ಹೆಸರು
ಗಳೋ ಅಪರಿಮಿತ ಸ್ವಾತಿ, ಉತ್ತರಾ,
ಧನಿಷ್ಠಾ, ಮುಂಗಾರೇ ಇವನ ಮೊದಲ ರೂಪ, ಉಳಿದುದೆಲ್ಲಾ ಇವನದೇ ಬೇರೆ
ಬೇರೆ ಕೋಪ ತಾಪ.
ಇವನಾರ್‍ಭಟಕೆ ನಡುಗಿದರೂ
ಸಡಗರಗೊಂಡು ಮೆರೆಯುವ
ಇವಳು ತಪಿಸಿದ್ದಳು ತಾಪಿಸಿದ್ದಳು. ತನ್ನ ಸುತ್ತಮುತ್ತ
ಬಿರುಕು ಬಿಟ್ಟಿದ್ದಳು. ಮಕ್ಕಳ ತಲೆಗೂದಲ ಎಲೆ ಎಲೆ
ಉದುರಿಸಿದ್ದಳು. ಬಿಳಿ ಸೀರೆ ಉಡಿಸಿದ್ದಳು.
ಬೋಳು ಬೋಳಾಗಿಸಿದ್ದಳು
ಅಳಿಸಿದ್ದಳು. ಕಾಡಿಸಿದ್ದಳು ಹಾಗೇ ಕಾಯಿಸಿದ್ದಳು.


ಕಾದಿದ್ದ ಇವಳನು ಕಂಡ ಅವನು ಬಂದೇ ಬಂದ.
ಇಂಚಿಂಚು ನೆಲದಲ್ಲಿ ತನ್ನ ಬೇರಿಳಿಸಿ ರಸ್ತೆ ರಸ್ತೆ ಹರಿದು
ಹೊಂಡವಾಗಿಸಿ ಸುಮ್ಮನೇ ಸುರಿದು
ಸುರಿದ, ಅಂತರ್‍ಜಲವಾಗಿ
ನೀರಾಗಿ ಕೊಚ್ಚೆಯಾಗಿ ರಾಡಿಯಾಗಿ ಅಲಿಕಲ್ಲಾಗಿ ಹಿಮ
ಪಾತವಾಗಿ ಮೆರೆದ ತನ್ನ ಎರಡೂ ಮುಖ ತೋರಿದ.


ಕಾದಿದ್ದ ಕೆಂಡವಾಗಿದ್ದ ಜ್ವರವೇರಿದ್ದ
ಅವಳನು ತಣಿಸಲೋ
ದಣಿಸಲೋ ದಂಡಿಸಲೋ ಎಂಬಂತೆ ಒಂದೇ
ಸಮನೇ ಸುರಿದ.
ಒನಕೆ ಮಳೆ ಜಡಿತ, ಆ ಕ್ಷಣಕೆ ಸಂತೃಪ್ತಿ.
ತೇಗಿ ತೇವವಾದ
ಅವಳು ಕಣ್ಣೆವೆ ತೆರೆಯುವಷ್ಟರಲ್ಲಿ
ಮತ್ತೆ ಒಣಗಿ ಬಾಯಾ
ರಿದಳು ಇವಳ ಹಣೆಬರಹ ಇವಳದು ಇದೇ ಗೋಳು.


ತಣಿಸಿದರೆ ಸಾಯುವ ಮತ್ತೆ ಹುಟ್ಟುವ
ಇವಳ ಈ ದಾಹ ಇಂಗದ ಬಾಯ ತುಂಬಲು
ಋತು ಋತುವಿಗೂ ಬರುವ ಮಳೆರಾಯ
ಬಾರೋ ಬಾರೋ ನೀರಿಲ್ಲ ನೀರಿಲ್ಲ
ಕಾದಿದ ಧರೆಯಲ್ಲಾ
*****
-ಪ್ರಜಾವಾಣಿ ದೀಪಾವಳಿ ವಿಶೇಷಾಂಕ

Tagged:

Leave a Reply

Your email address will not be published. Required fields are marked *

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...