Home / ಕವನ / ಕವಿತೆ / ನಾನು-ನೀನು

ನಾನು-ನೀನು

ನಾನು ಭೂಮಿ; ಭೂಮಿ ಕಾಯುವುದಿಲ್ಲ
ನೀನು ಮಳೆ. ನೀನು ಕಾಯುತ್ತೀಯೆ, ಕಾಯಬೇಕು
ನೀನು ಮುಗಿಲು ನಾನು ನೆಲ ಎಂದು ಒಂದು ಗಂಡು
ಹಾಡಿದಂತಲ್ಲ ನಮ್ಮಿಬ್ಬರ ಯುಗಯುಗಗಳ ಈ ಬಂಧ
ನಾನು ಭೂಮಿ, ಭೂಮಿಯೇ ಹಾಡಬೇಕು
ನಾನು ಭೂಮಿ, ನಾನು ಬರೀ ನೆಲವಲ್ಲ.

ನಾನು ತಿರುಗುತ್ತಿರುವೆ, ನೀನು ನಿಂತಿರುವೆ ನಿಶ್ಚಲ
ನಾನು ಕಾಯುವೆ, ನಿನ್ನನ್ನೇ ಕರಗಿಸುವೆ, ಕರಗಿಸಿ ಹರಿಸುವೆ
ನನ್ನೆಡೆಗೆ, ಈ ನನ್ನ ಎದೆಯ ಜಲದಿಂದಲೇ ನೀ ಉಗಿ ಮೋಡ
ವಾದೆ ಕಡೆಗೆ ನನ್ನೆಡೆಗೇ ಹರಿದೆ. ಮೋಡ ಕಟ್ಟಬೇಕು
ಕಟ್ಟುವವರೆಗೆ ಕಾಯೇ ಎಂದೆ ನೀನು. ನಾನು ಕಾಯಲಾರೆ
ನನಗೆ ನೀನಲ್ಲದಿದ್ದರಿನ್ನೊಬ್ಬ, ನಿನ್ನಂಥವನಿನ್ನೊಬ್ಬ
ಎಷ್ಟು ಮಂದಿ ಗೆಳೆಯರು ಗೊತ್ತೆ ನನಗೆ?
ನಾನು ಭೂಮಿ ನಾನು ಬರೀ ನೆಲವಲ್ಲ.

ನನ್ನೆದೆಯೊಳಗೇ ಲಾವಾ ಅಡಗಿಸಿ ಹೊರಗೆಲ್ಲಾ ಹಸಿರ ಚೆಲ್ಲುವೆ
ನನಗೆ ಮೇಲೆರೆವ ಜೀವ ಜಲವಾಗಿ ನೀನು ಬರುವೆ.
ನೀನು ನನ್ನದೇ ಅಂಗ, ನನ್ನಿಂದಲೇ ನೀನು. ಇದರ ಅರಿ
ವಿದೆ ನನಗೆ, ಅದರಿಂದಲೇ ಇಟ್ಟಿರುವ ನಿನ್ನ ಹೊರಗೆ
ಅಷ್ಟು, ದೂರ ಆಗಸದ ತುದಿಗೆ, ನಿನ್ನ ಒಲವೇ ನನ್ನ ಬಲ
ಎಂದು ಹಾಡಿದ ಕವಿಗಿಲ್ಲ ಇದರರಿವು
ನಾನು ಭೂಮಿ ನಾನು ಬರೀ ನೆಲವಲ್ಲ.

ಸಸ್ಯ ಶ್ಯಾಮಲೆ ನಾನು ನನ್ನ ಅಸ್ತಿತ್ವವೇ ಅದು
ಈ ನನ್ನ ಹಸಿರಿನ ಪರಿ ಬೀಜವೃಕ್ಷ ನ್ಯಾಯದ ಪರಿ
ನನ್ನೆದೆಯ ನೀರ ಆವಿಯಾಗಿಸಿ ಮೋಡವಾಗಿಸಿ
ಗಟ್ಟಿಗೊಳಿಸಲು ಆ ನನ್ನ ಹಳೇ ಗಂಡ ಸೂರ್‍ಯನ
ತಯಾರಿ, ನಡೆದಿದ ಹಗಲಿರುಳು ಅವನ ಸವಾರಿ
ಆ ತುಂಟ ಕುದುರೆಯ ಕುಂಟ ಸಾರಥಿಯ ದಾರಿ
ನಾನು ಭೂಮಿ ನಾನು ಬರೀ ನೆಲವಲ್ಲ.

ನಮ್ಮಿಬ್ಬರ ಮಿಲನದಿಂದ ಉಲ್ಲಾಸವೇ ಶ್ಯಾಮಲಾ
ಎಂದರಲ್ಲ ಅವರು ನೋಡಿದ್ದು ಕೇವಲ ಮಳೆಗಾಲ
ಮಲೆನಾಡು ಶಿವಮೊಗ್ಗ ಸಹ್ಯಾದ್ರಿ ಇದರ
ಹೊರತು ಬೇರೇನಿಲ್ಲವೇ ನನ್ನೊಡಲಿನ ರಾಜಸ್ಥಾನ
ಥಾರ್ ಮರುಭೂಮಿ, ಆಫ್ಗನ್ ಕಣಿವೆ ಕೆಂಪು ಸಮುದ್ರ-
ಎಲ್ಲೆಲ್ಲೂ ಹಸಿರುಕ್ಕಿಸಿಲ್ಲವೇ ನಾನು
ಬೇಸಗೆ ಚಳಿ ಮಳೆಗಳ ಧಾಳಿಯ ನಟ್ಟ ನಡುವೆ
ನಾನು ಭೂಮಿ ನಾನು ಬರೀ ನೆಲವಲ್ಲ.

ನಾನು ಕರೆವೆ ನೀನು ಬೆರೆವೆ ನೀನು ಹೊಳೆವೆ
ನಾನು ಬೆಳೆವ ಇದು ಸ್ವಲ್ಪ ಸರಿ ಏಕೆನ್ನುವಿಯೋ
ನಾನು ಕಾದು ಕಾದು ಕರೆದಾಗಲ್ಲವೇ
ನೀನು ಧಾರೆ ಧಾರ ಸುರಿವುದು.
ಗುಡುಗು ಮಿಂಚು ಹೊಳೆದಾಗಲ್ಲವೇ.
ನಾನು ನೀರು ತುಂಬಿ ಗದ್ದೆಯಾಗಿ ಭತ್ತವಾಗಿ
ಕಬ್ಬಾಗಿ ಗೋಧಿಯಾಗಿ, ಜೋಳವಾಗಿ, ಇನ್ನೂ
ಹಣ್ಣು ಹಂಪಲು ಗಡ್ಡೆ ಗೆಣಸು ಗಿಡ ಮರ ಹೂ ಹುಲ್ಲು
ಏನೆಲ್ಲ ಆಗಿ ಮೆರೆವುದು. ಇದೀಗ ಸಸ್ಯ ಶ್ಯಾಮಲಾ
ಮಾತರಂ ಎಂದು ಆ ದೇಶ ಭಕ್ತರೂ ಹಾಡುವುದು.
ಆದರೆ ಈ ವೈವಿಧ್ಯ ನನ್ನದು ನಿನ್ನದಲ್ಲ ನೆನಪಿರಲಿ
ನನ್ನೊಳಗಿರುವ ನಿನ್ನ ಬೀಜದ ಗುಣ ಮಾತ್ರ ಆರದಿರಲಿ
ನೀನು ಕೇವಲ ಪೋಷಕ ಮಾತ್ರ ಅರಿವಿರಲಿ
ನಮ್ಮಿಬ್ಬರ ಸಂಬಂಧ ಮಾತ್ರ ಹೀಗೇ ಮುರಿಯದಿರಲಿ
*****
-ಸಂಕಲನ

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...