Home / ಕವನ / ಕವಿತೆ / ವೃಷಭಾವತಿ

ವೃಷಭಾವತಿ

ವೃಷಭಾವತಿ ಒಮ್ಮೆ ಹರಿದು ಉಕ್ಕೇರಿ ನೆಲ ಜಲ ಹೊಲ
ಭೇದ ಭಾವವಿಲ್ಲದೇ ಉಣಿಸಿದ್ದಳು ಎಲ್ಲರನೂ ತಣಿಸಿದ್ದಳು
ಈಗೇಕೆ ವಿಷವಾದೆ ನಾನು ಎಂದು ಪರಿತಪಿಸುತ್ತಾಳೆ. ತನಗೆ ವಿಷ
ವೂಡಿದವರ ಕಾಣಲಾಗದೇ ಹಿಡಿಯಲಾಗದೇ ತಡೆಯಲಾಗದೇ ಹೀಗೆ

ತುಂಬಿ ಹರಿಯುತ್ತಿದ್ದ ನದಿಗೆ ವಿಷವಿಕ್ಕಿದವರ್‍ಯಾರು ಕಾಲವೆ?
ಕಾಳಜಿಯೆ? ಸ್ವಾರ್‍ಥವೇ? ಮತ್ಸರವೇ? ಅಥವಾ ಒಳಗಿನದೇ
ಏನೋ ತಾಪವೆ? ತೋಚುವುದಿಲ್ಲ ನನಗಂತೂ ಏನೂ
ಈಗಿಲ್ಲಿ ಮಿಂದವರೇ ಪಾಪಿಗಳು ಅವರ ತಲೆ ತುಂಬ ಹೇನು.

ಉರಿವ ಸೂರ್‍ಯನಿಗೂ ಇಲ್ಲ ಕರುಣೆ
ಆವಿಯಾಗಿಸಿ ಬಿಡುತ್ತಾನೆ ನನ್ನೆಲ್ಲ ಬವಣೆ
ಸುರಿಸುವುದೂ ಇಲ್ಲ ನನ್ನೆದೆಯ ಜಲವ ನನಗೆ
ಮಳೆಯಾಗಿಸಿ ಕೊಂಡೊಯ್ಯುತ್ತಾನೆ ಇನ್ನೊಬ್ಬರ ಮನೆಗೆ

ಕಚ್ಚುವಂತಾದುದೇಕೆ ನಾನು ವಿಷ ಸರ್ಪದಂತೆ
ಕೇಳಿ ಭಾರತದ ಎಲ್ಲ ಕಾರ್‍ಖಾನೆಗಳ ತೆಗೆಸಿ ಅವರ
ಲೆಕ್ಕ ಪತ್ರದ ಕಂತೆ. ಅವರಿಗೆ ಬೇಕಿತ್ತೆ ಹೇಳಿ
ಹರಿವ ಜೀವದಾಯಿನಿಯಲ್ಲಿ ಅವರ ಕೊಳಕು ಜಲಕೇಳಿ

ಅಂದಿನೊಬ್ಬ ಪ್ರಿಯಕರ ಬಂದು ಕೇಳುತ್ತಾನೆ ಮತ್ತೆ ಮತ್ತೆ
ವೃಷಭಾವತಿ ಹರಿಯಲಾರೆಯ ನೀನು ಹಿಂದಿನಂತೆ
ಹರಿವ ಬಯಕೆ ನನಗಿದೆ ಗೆಳೆಯ ಹರಿದೇನು ನಾನು
ತುಂಬಿ ಸುರಿದೇನು ನಾನು ಸೋಸಿಬಿಡು ಈ ಕೊಳೆಯ
ಪಿಸು ಮಾತಿನಲಿ ಉಸುರುತ್ತೇನೆ ನಾನು

ದಿನ ದಿನದ ಧಾರೆಯಲಿ ಕಾಯುತ್ತೇನೆ ಅವನಿಗಾಗಿ
ಮತ್ತೊಮ್ಮೆ ಅಮೃತವಾಗಿ ಹರಿವ ಬಯಕೆ ಅದ್ಯಮವಾಗಿ
ಎತ್ತಿಕೋ ಗೆಳೆಯಾ ಹಿಡಿದಪ್ಪಿಕೋ ಹೀಗೆ, ಒಳಗಿನ ಕಲ್ಮಶ
ಒಳಗೇ ಉಳಿದು ತಿಳಿನೀರು ಬರುವ ಹಾಗೆ ಮತ್ತೊಮ್ಮೆ
ನನ್ನೆದೆಯ ಅಲೆಗಳಲಿ ಈ ಜೋಣ ಹೀಗೆ ಮತ್ತೆಂದೂ
ಒಳಸರಿಯದ ಹಾಗೆ ನೆಲಮುಗಿಲ ನಡುವಣ ಪ್ರಕೃತಿಯ ಹಾಗೆ

ತಡೆದು ನಿಲ್ಲಿಸು ಆ ಕಾರ್‍ಖಾನೆಗಳ ಕೊಳಕು ಧಾರೆ
ಹರಿಯ ಬಿಡು ಅವುಗಳನ್ನು ಆ ಸಮುದ್ರದ ಮೇರೆ
ಆ ದೈತ್ಯನಾದರೋ ಎಲ್ಲವನು ನುಂಗಿ ನೀರು ಕುಡಿದಾನು
ಹಬ್ಬಿಕೊಳ್ಳಲಿ ನಮಗೆ ನಮ್ಮ ನೆಲದಡಿಯ ಬಾನು
*****
-ಕರ್ಮವೀರ ದೀಪಾವಳಿ ವಿಶೇಷಾಂಕ

Tagged:

Leave a Reply

Your email address will not be published. Required fields are marked *

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...