Home / ಕವನ / ಕವಿತೆ / ವೃಷಭಾವತಿ

ವೃಷಭಾವತಿ

ವೃಷಭಾವತಿ ಒಮ್ಮೆ ಹರಿದು ಉಕ್ಕೇರಿ ನೆಲ ಜಲ ಹೊಲ
ಭೇದ ಭಾವವಿಲ್ಲದೇ ಉಣಿಸಿದ್ದಳು ಎಲ್ಲರನೂ ತಣಿಸಿದ್ದಳು
ಈಗೇಕೆ ವಿಷವಾದೆ ನಾನು ಎಂದು ಪರಿತಪಿಸುತ್ತಾಳೆ. ತನಗೆ ವಿಷ
ವೂಡಿದವರ ಕಾಣಲಾಗದೇ ಹಿಡಿಯಲಾಗದೇ ತಡೆಯಲಾಗದೇ ಹೀಗೆ

ತುಂಬಿ ಹರಿಯುತ್ತಿದ್ದ ನದಿಗೆ ವಿಷವಿಕ್ಕಿದವರ್‍ಯಾರು ಕಾಲವೆ?
ಕಾಳಜಿಯೆ? ಸ್ವಾರ್‍ಥವೇ? ಮತ್ಸರವೇ? ಅಥವಾ ಒಳಗಿನದೇ
ಏನೋ ತಾಪವೆ? ತೋಚುವುದಿಲ್ಲ ನನಗಂತೂ ಏನೂ
ಈಗಿಲ್ಲಿ ಮಿಂದವರೇ ಪಾಪಿಗಳು ಅವರ ತಲೆ ತುಂಬ ಹೇನು.

ಉರಿವ ಸೂರ್‍ಯನಿಗೂ ಇಲ್ಲ ಕರುಣೆ
ಆವಿಯಾಗಿಸಿ ಬಿಡುತ್ತಾನೆ ನನ್ನೆಲ್ಲ ಬವಣೆ
ಸುರಿಸುವುದೂ ಇಲ್ಲ ನನ್ನೆದೆಯ ಜಲವ ನನಗೆ
ಮಳೆಯಾಗಿಸಿ ಕೊಂಡೊಯ್ಯುತ್ತಾನೆ ಇನ್ನೊಬ್ಬರ ಮನೆಗೆ

ಕಚ್ಚುವಂತಾದುದೇಕೆ ನಾನು ವಿಷ ಸರ್ಪದಂತೆ
ಕೇಳಿ ಭಾರತದ ಎಲ್ಲ ಕಾರ್‍ಖಾನೆಗಳ ತೆಗೆಸಿ ಅವರ
ಲೆಕ್ಕ ಪತ್ರದ ಕಂತೆ. ಅವರಿಗೆ ಬೇಕಿತ್ತೆ ಹೇಳಿ
ಹರಿವ ಜೀವದಾಯಿನಿಯಲ್ಲಿ ಅವರ ಕೊಳಕು ಜಲಕೇಳಿ

ಅಂದಿನೊಬ್ಬ ಪ್ರಿಯಕರ ಬಂದು ಕೇಳುತ್ತಾನೆ ಮತ್ತೆ ಮತ್ತೆ
ವೃಷಭಾವತಿ ಹರಿಯಲಾರೆಯ ನೀನು ಹಿಂದಿನಂತೆ
ಹರಿವ ಬಯಕೆ ನನಗಿದೆ ಗೆಳೆಯ ಹರಿದೇನು ನಾನು
ತುಂಬಿ ಸುರಿದೇನು ನಾನು ಸೋಸಿಬಿಡು ಈ ಕೊಳೆಯ
ಪಿಸು ಮಾತಿನಲಿ ಉಸುರುತ್ತೇನೆ ನಾನು

ದಿನ ದಿನದ ಧಾರೆಯಲಿ ಕಾಯುತ್ತೇನೆ ಅವನಿಗಾಗಿ
ಮತ್ತೊಮ್ಮೆ ಅಮೃತವಾಗಿ ಹರಿವ ಬಯಕೆ ಅದ್ಯಮವಾಗಿ
ಎತ್ತಿಕೋ ಗೆಳೆಯಾ ಹಿಡಿದಪ್ಪಿಕೋ ಹೀಗೆ, ಒಳಗಿನ ಕಲ್ಮಶ
ಒಳಗೇ ಉಳಿದು ತಿಳಿನೀರು ಬರುವ ಹಾಗೆ ಮತ್ತೊಮ್ಮೆ
ನನ್ನೆದೆಯ ಅಲೆಗಳಲಿ ಈ ಜೋಣ ಹೀಗೆ ಮತ್ತೆಂದೂ
ಒಳಸರಿಯದ ಹಾಗೆ ನೆಲಮುಗಿಲ ನಡುವಣ ಪ್ರಕೃತಿಯ ಹಾಗೆ

ತಡೆದು ನಿಲ್ಲಿಸು ಆ ಕಾರ್‍ಖಾನೆಗಳ ಕೊಳಕು ಧಾರೆ
ಹರಿಯ ಬಿಡು ಅವುಗಳನ್ನು ಆ ಸಮುದ್ರದ ಮೇರೆ
ಆ ದೈತ್ಯನಾದರೋ ಎಲ್ಲವನು ನುಂಗಿ ನೀರು ಕುಡಿದಾನು
ಹಬ್ಬಿಕೊಳ್ಳಲಿ ನಮಗೆ ನಮ್ಮ ನೆಲದಡಿಯ ಬಾನು
*****
-ಕರ್ಮವೀರ ದೀಪಾವಳಿ ವಿಶೇಷಾಂಕ

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...