Home / ಕವನ / ಕವಿತೆ / ವೃಷಭಾವತಿ

ವೃಷಭಾವತಿ

ವೃಷಭಾವತಿ ಒಮ್ಮೆ ಹರಿದು ಉಕ್ಕೇರಿ ನೆಲ ಜಲ ಹೊಲ
ಭೇದ ಭಾವವಿಲ್ಲದೇ ಉಣಿಸಿದ್ದಳು ಎಲ್ಲರನೂ ತಣಿಸಿದ್ದಳು
ಈಗೇಕೆ ವಿಷವಾದೆ ನಾನು ಎಂದು ಪರಿತಪಿಸುತ್ತಾಳೆ. ತನಗೆ ವಿಷ
ವೂಡಿದವರ ಕಾಣಲಾಗದೇ ಹಿಡಿಯಲಾಗದೇ ತಡೆಯಲಾಗದೇ ಹೀಗೆ

ತುಂಬಿ ಹರಿಯುತ್ತಿದ್ದ ನದಿಗೆ ವಿಷವಿಕ್ಕಿದವರ್‍ಯಾರು ಕಾಲವೆ?
ಕಾಳಜಿಯೆ? ಸ್ವಾರ್‍ಥವೇ? ಮತ್ಸರವೇ? ಅಥವಾ ಒಳಗಿನದೇ
ಏನೋ ತಾಪವೆ? ತೋಚುವುದಿಲ್ಲ ನನಗಂತೂ ಏನೂ
ಈಗಿಲ್ಲಿ ಮಿಂದವರೇ ಪಾಪಿಗಳು ಅವರ ತಲೆ ತುಂಬ ಹೇನು.

ಉರಿವ ಸೂರ್‍ಯನಿಗೂ ಇಲ್ಲ ಕರುಣೆ
ಆವಿಯಾಗಿಸಿ ಬಿಡುತ್ತಾನೆ ನನ್ನೆಲ್ಲ ಬವಣೆ
ಸುರಿಸುವುದೂ ಇಲ್ಲ ನನ್ನೆದೆಯ ಜಲವ ನನಗೆ
ಮಳೆಯಾಗಿಸಿ ಕೊಂಡೊಯ್ಯುತ್ತಾನೆ ಇನ್ನೊಬ್ಬರ ಮನೆಗೆ

ಕಚ್ಚುವಂತಾದುದೇಕೆ ನಾನು ವಿಷ ಸರ್ಪದಂತೆ
ಕೇಳಿ ಭಾರತದ ಎಲ್ಲ ಕಾರ್‍ಖಾನೆಗಳ ತೆಗೆಸಿ ಅವರ
ಲೆಕ್ಕ ಪತ್ರದ ಕಂತೆ. ಅವರಿಗೆ ಬೇಕಿತ್ತೆ ಹೇಳಿ
ಹರಿವ ಜೀವದಾಯಿನಿಯಲ್ಲಿ ಅವರ ಕೊಳಕು ಜಲಕೇಳಿ

ಅಂದಿನೊಬ್ಬ ಪ್ರಿಯಕರ ಬಂದು ಕೇಳುತ್ತಾನೆ ಮತ್ತೆ ಮತ್ತೆ
ವೃಷಭಾವತಿ ಹರಿಯಲಾರೆಯ ನೀನು ಹಿಂದಿನಂತೆ
ಹರಿವ ಬಯಕೆ ನನಗಿದೆ ಗೆಳೆಯ ಹರಿದೇನು ನಾನು
ತುಂಬಿ ಸುರಿದೇನು ನಾನು ಸೋಸಿಬಿಡು ಈ ಕೊಳೆಯ
ಪಿಸು ಮಾತಿನಲಿ ಉಸುರುತ್ತೇನೆ ನಾನು

ದಿನ ದಿನದ ಧಾರೆಯಲಿ ಕಾಯುತ್ತೇನೆ ಅವನಿಗಾಗಿ
ಮತ್ತೊಮ್ಮೆ ಅಮೃತವಾಗಿ ಹರಿವ ಬಯಕೆ ಅದ್ಯಮವಾಗಿ
ಎತ್ತಿಕೋ ಗೆಳೆಯಾ ಹಿಡಿದಪ್ಪಿಕೋ ಹೀಗೆ, ಒಳಗಿನ ಕಲ್ಮಶ
ಒಳಗೇ ಉಳಿದು ತಿಳಿನೀರು ಬರುವ ಹಾಗೆ ಮತ್ತೊಮ್ಮೆ
ನನ್ನೆದೆಯ ಅಲೆಗಳಲಿ ಈ ಜೋಣ ಹೀಗೆ ಮತ್ತೆಂದೂ
ಒಳಸರಿಯದ ಹಾಗೆ ನೆಲಮುಗಿಲ ನಡುವಣ ಪ್ರಕೃತಿಯ ಹಾಗೆ

ತಡೆದು ನಿಲ್ಲಿಸು ಆ ಕಾರ್‍ಖಾನೆಗಳ ಕೊಳಕು ಧಾರೆ
ಹರಿಯ ಬಿಡು ಅವುಗಳನ್ನು ಆ ಸಮುದ್ರದ ಮೇರೆ
ಆ ದೈತ್ಯನಾದರೋ ಎಲ್ಲವನು ನುಂಗಿ ನೀರು ಕುಡಿದಾನು
ಹಬ್ಬಿಕೊಳ್ಳಲಿ ನಮಗೆ ನಮ್ಮ ನೆಲದಡಿಯ ಬಾನು
*****
-ಕರ್ಮವೀರ ದೀಪಾವಳಿ ವಿಶೇಷಾಂಕ

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...