Home / ಕವನ / ಕವಿತೆ / ವೃಷಭಾವತಿ

ವೃಷಭಾವತಿ

ವೃಷಭಾವತಿ ಒಮ್ಮೆ ಹರಿದು ಉಕ್ಕೇರಿ ನೆಲ ಜಲ ಹೊಲ
ಭೇದ ಭಾವವಿಲ್ಲದೇ ಉಣಿಸಿದ್ದಳು ಎಲ್ಲರನೂ ತಣಿಸಿದ್ದಳು
ಈಗೇಕೆ ವಿಷವಾದೆ ನಾನು ಎಂದು ಪರಿತಪಿಸುತ್ತಾಳೆ. ತನಗೆ ವಿಷ
ವೂಡಿದವರ ಕಾಣಲಾಗದೇ ಹಿಡಿಯಲಾಗದೇ ತಡೆಯಲಾಗದೇ ಹೀಗೆ

ತುಂಬಿ ಹರಿಯುತ್ತಿದ್ದ ನದಿಗೆ ವಿಷವಿಕ್ಕಿದವರ್‍ಯಾರು ಕಾಲವೆ?
ಕಾಳಜಿಯೆ? ಸ್ವಾರ್‍ಥವೇ? ಮತ್ಸರವೇ? ಅಥವಾ ಒಳಗಿನದೇ
ಏನೋ ತಾಪವೆ? ತೋಚುವುದಿಲ್ಲ ನನಗಂತೂ ಏನೂ
ಈಗಿಲ್ಲಿ ಮಿಂದವರೇ ಪಾಪಿಗಳು ಅವರ ತಲೆ ತುಂಬ ಹೇನು.

ಉರಿವ ಸೂರ್‍ಯನಿಗೂ ಇಲ್ಲ ಕರುಣೆ
ಆವಿಯಾಗಿಸಿ ಬಿಡುತ್ತಾನೆ ನನ್ನೆಲ್ಲ ಬವಣೆ
ಸುರಿಸುವುದೂ ಇಲ್ಲ ನನ್ನೆದೆಯ ಜಲವ ನನಗೆ
ಮಳೆಯಾಗಿಸಿ ಕೊಂಡೊಯ್ಯುತ್ತಾನೆ ಇನ್ನೊಬ್ಬರ ಮನೆಗೆ

ಕಚ್ಚುವಂತಾದುದೇಕೆ ನಾನು ವಿಷ ಸರ್ಪದಂತೆ
ಕೇಳಿ ಭಾರತದ ಎಲ್ಲ ಕಾರ್‍ಖಾನೆಗಳ ತೆಗೆಸಿ ಅವರ
ಲೆಕ್ಕ ಪತ್ರದ ಕಂತೆ. ಅವರಿಗೆ ಬೇಕಿತ್ತೆ ಹೇಳಿ
ಹರಿವ ಜೀವದಾಯಿನಿಯಲ್ಲಿ ಅವರ ಕೊಳಕು ಜಲಕೇಳಿ

ಅಂದಿನೊಬ್ಬ ಪ್ರಿಯಕರ ಬಂದು ಕೇಳುತ್ತಾನೆ ಮತ್ತೆ ಮತ್ತೆ
ವೃಷಭಾವತಿ ಹರಿಯಲಾರೆಯ ನೀನು ಹಿಂದಿನಂತೆ
ಹರಿವ ಬಯಕೆ ನನಗಿದೆ ಗೆಳೆಯ ಹರಿದೇನು ನಾನು
ತುಂಬಿ ಸುರಿದೇನು ನಾನು ಸೋಸಿಬಿಡು ಈ ಕೊಳೆಯ
ಪಿಸು ಮಾತಿನಲಿ ಉಸುರುತ್ತೇನೆ ನಾನು

ದಿನ ದಿನದ ಧಾರೆಯಲಿ ಕಾಯುತ್ತೇನೆ ಅವನಿಗಾಗಿ
ಮತ್ತೊಮ್ಮೆ ಅಮೃತವಾಗಿ ಹರಿವ ಬಯಕೆ ಅದ್ಯಮವಾಗಿ
ಎತ್ತಿಕೋ ಗೆಳೆಯಾ ಹಿಡಿದಪ್ಪಿಕೋ ಹೀಗೆ, ಒಳಗಿನ ಕಲ್ಮಶ
ಒಳಗೇ ಉಳಿದು ತಿಳಿನೀರು ಬರುವ ಹಾಗೆ ಮತ್ತೊಮ್ಮೆ
ನನ್ನೆದೆಯ ಅಲೆಗಳಲಿ ಈ ಜೋಣ ಹೀಗೆ ಮತ್ತೆಂದೂ
ಒಳಸರಿಯದ ಹಾಗೆ ನೆಲಮುಗಿಲ ನಡುವಣ ಪ್ರಕೃತಿಯ ಹಾಗೆ

ತಡೆದು ನಿಲ್ಲಿಸು ಆ ಕಾರ್‍ಖಾನೆಗಳ ಕೊಳಕು ಧಾರೆ
ಹರಿಯ ಬಿಡು ಅವುಗಳನ್ನು ಆ ಸಮುದ್ರದ ಮೇರೆ
ಆ ದೈತ್ಯನಾದರೋ ಎಲ್ಲವನು ನುಂಗಿ ನೀರು ಕುಡಿದಾನು
ಹಬ್ಬಿಕೊಳ್ಳಲಿ ನಮಗೆ ನಮ್ಮ ನೆಲದಡಿಯ ಬಾನು
*****
-ಕರ್ಮವೀರ ದೀಪಾವಳಿ ವಿಶೇಷಾಂಕ

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...