ಉದಯ ರಾಗ

ಮೂಡುವನು ರವಿ ಮೂಡುವನು; ಕತ್ತಲೊಡನೆ ಜಗಳಾಡುವನು;
ಮೂಡಣ ರಂಗಸ್ಥಳದಲಿ ನೆತ್ತರು ಮಾಡುವನು, ಕುಣಿದಾಡುವನು.

ಬೆಳಕಿನ ಕಣ್ಣುಗಳಿಂದಾ ಸೂರ್‍ಯನು ನೋಡುವನು, ಬಿಸಿಲೂಡುವನು;
ಚಿಳಿಪಿಳಿ ಹಾಡನು ಹಾಡಿಸಿ, ಹಕ್ಕಿಯ ಗೂಡಿನ ಹೊರಹೊರದೂಡುವನು.

ಬಂಗಾರದ ಚೆಲು ಬಿಸಿಲ ಕಿರೀಟದ ಶೃಂಗಾರದ ತಲೆ ಎತ್ತುವನು;
ತೆಂಗಿನ, ಕಂಗಿನ, ತಾಳೆಯ, ಬಾಳೆಯ ಅಂಗಕೆ ರಂಗನು ಮೆತ್ತುವನು.

ಮಾಡಿನ ಹುಲ್ಲಲಿ ಚಿನ್ನದ ಗೆರೆಯನು ಎಳೆಯುವನು ರವಿ ಹೊಳೆಯುವನು;
ಕೂಡಲೆ ಕೋಣೆಯ ಕತ್ತಲೆ ಕೊಳೆಯನು ತೊಳೆಯುವನು, ರವಿ ಹೊಳೆಯುವನು.

ಮಲಗಿದ ಕೂಸಿನ ನಿದ್ದೆಯ ಕಸವನು ಗುಡಿಸುವನು, ಕಣ್ ಬಿಡಿಸುವನು;
ಹುಲು, ಗಿಡ, ಹೂವಿಗೆ ಪರಿಪರಿ ಬಣ್ಣವ ಉಡಿಸುವನು, ಹನಿ ತೊಡಿಸುವನು.

ಏರುವನು, ರವಿ, ಏರುವನು; ಬಾನೊಳು ಸಣ್ಣಗೆ ತೋರುವನು;
“ಏರಿದವನು ಚಿಕ್ಕವನಿರಬೇಕೆಲೆ,” ಎಂಬಾ ಮಾತನು ಸಾರುವನು.
*****
(ಕವಿಶಿಷ್ಯ)

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವರ ಕೃಷಿಯನರಿಯದೆ ಬರೆದರದು ಸಾಹಿತ್ಯವಾದೀತೇ?
Next post ಜಾಗತೀಕರಣ ಮತ್ತು ಸಿನಿಮಾ

ಸಣ್ಣ ಕತೆ

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

  • ಜುಡಾಸ್

    "ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…

cheap jordans|wholesale air max|wholesale jordans|wholesale jewelry|wholesale jerseys