ನದಿ

“ಎಲ್ಲಿಂದ ಬರುತಿಯೆ? ನೀರನ್ನು ತರುತಿಯೆ?
ಒಳ್ಳೇದಾಗಿರುತೀಯೆ, ನೀನು?
ಎಲ್ಲಿಗೆ ಹೋಗುವೆ? ನೀರನ್ನು ಸಾಗುವೆ?
ಕಡೆಗೆ ಏನಾಗುವ, ನೀನು?”

“ಬೆಟ್ಟದಾ ಹೊಡೆಯಲ್ಲಿ ಹುಟ್ಟಿದ ಹನಿಯಾಗಿ;
ತೊಟ್ಟಾದೆ ತಟುಕಾದೆ, ನಾನು.
ಬೆಟ್ಟಾದೆ, ಬೆರಳಾದೆ, ತೋಳಾದ, ತೊಡೆಯಾದೆ,
ಪುಟ್ಟ ತೋಡಾದೆನು ನಾನು.

“ಮಲೆಮರಗಳ ಮರೆಯಲ್ಲಿ ಮಲಗಿದೆನು;
ಮಳೆ ಬಿದಿರೆಲೆಯಿಂದ ಬಂದಾ
ಬೆಳಕಿಗೆ ಎಚ್ಚೆತ್ತು ಹೊರಬಂದೆ ಹರಿದಾಡಿ,
ನಲಿದಾಡಿ ಸಂತೋಷದಿಂದಾ.

“ಆಡುತ್ತ, ಸುತ್ತಲು ನೋಡುತ್ತ, ತೊರೆಯನ್ನು
ಕೂಡುತ್ತ, ಓಡುತ್ತ ಬಂದೆ;
ದೂಡುತ್ತ ಕಲ್ಲನ್ನು, ಮಾಡುತ್ತ ಗುಲ್ಲನು,
ಹಾಡುತ್ತ, ನೀಡುತ್ತ ಬಂದೆ.

“ಭಾರಿ ಎತ್ತರದಿಂದ ಹಾರಿದೆ ಹೆಸರಾಯ್ತು;
‘ನೀರಿನ ಜೋರಿನ ಜೋಗು’;
ಊರಿನ ಜನರನ್ನು ಕಿವುಡು ಮಾಡಿತು ನನ್ನ
ಭೋರನೆ ಕೂಗುವ ಕೂಗು.”
*****
(ಕವಿಶಿಷ್ಯ)

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...