Home / ಕವನ / ಕವಿತೆ / ಬಾಲ್ಯ ಸ್ಮರಣೆ

ಬಾಲ್ಯ ಸ್ಮರಣೆ

ಧ್ವನಿಸಿ ಬಯಲಾಗುತಿಹ ಸುರಗಾನದಂತೆ,
ಕನಸಿನಲಿ ಗೈದಿರುವಮೃತ ಪಾನದಂತೆ,
ವನಧಿಯಡಿಯಿಂದೆದ್ದಳಿವ ಫೇನದಂತೆ,
ಜನಿಸಿ ಬಾಲ್ಯಸ್ಮರಣೆ ಬೆಳಗಿಪುದು ಮನವಾ.

ಮುದಿತಂದೆ ಎಲುಬುಗೂಡಿನ ಬೆನ್ನನೇರಿ,
ತೊದಲುಲಿಯ ಚುರುಕಿಂದ ಚಪ್ಪರಿಸಿ ಚೀರಿ,
ಕುದುರೆಯಾಟವಗೈದ ನೆನಪೊಂದು ಬಾರಿ,
ಉದಿಸಲಿಂದೀವುದೀ ಎದೆಗೆ ಚಂದನವಾ.

ಮದುವೆಯಾಗುವ ಮುನ್ನ ನನ್ನಕ್ಕ ತನ್ನ
ಬದಿಯ ಗೆಳತಿಯರೊಡನೆ ಕೂಳಾಟವನ್ನ
ಒದವಿಸೆನಗಿತ್ತ ಹಪ್ಪಳ ಹುರಿಯ ಅನ್ನ
ಅದೆ ಕೊಡುವುದೀಗೆನಗೆ ಮಧುರ ಭೋಜನವಾ.

“ತಂಗಿ, ನೀ ಅಳಬೇಡ, ತರುವೆ ನಾನೊಂದು
ಉಂಗುರವ ಮುದ್ದಿಡುವ ವಜ್ರವನು” ಎಂದು,
ಮುಂಗಾರಿನಿರುಳಲ್ಲಿ ಮಿಂಚುಹುಳ ತಂದು
ಸಿಂಗರಿಸಿದುದೆ ಕೊಡುವುದಮೃತ ಸೇಚನವಾ.

ವೀರಕಚ್ಚೆಯ, ಕೂದಲಿನ ಮೀಸೆ ಧರಿಸಿ,
ಶ್ರೀರಾಮನೆಂದಾಡಿ “ಹಾ! ಪ್ರಾಣದರಿಸಿ!
ಬಾ! ರಮಣೆ!” ಎಂದು ನಾ ಕುಣಿದುದನು ಸ್ಮರಿಸಿ,
ಹಾರುವುದು ಬಗೆಯ ಗೈದಂಗ ನರ್‍ತನವಾ

ಬಣ್ಣ ಕಾಗದದ ಚೆಲು ಮಂಟಪವ ಮಾಡಿ,
ಮಣ್ಣಗೊಂಬೆಯ ದೇವರೆಂದು ಕೊಂಡಾಡಿ,
“ಅಣ್ಣನನ್ನು ಬದುಕಿಸಿಕೊಡೆ”ಂದು ವರಬೇಡಿ,
ಕಣ್ಣೀರ್ ಮಿಡಿದ ನೆನಹು ಮೀಪುದು ನಯನವಾ.

ಸಂದ ಬಾಲ್ಯವೆ ಬಾರೆ, ನಿನ್ನ ಬಿಡಲಾರೆ;
ಅಂದು ನಿನ್ನೊಡನಿದ್ದು, ಕಂಡು ಕಣ್ಣಾರೆ,
ಕಂದ ನಾನಾದಂತೆ, ಓ ಸುಖ ವಿಹಾರೆ!
ಇಂದಾದೆ ಹಾಡಿ ಬಾಲ್ಯದ ಚೌಪದನವಾ
*****
(ಕವಿಶಿಷ್ಯ)

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...