ಬಾಲ್ಯ ಸ್ಮರಣೆ

ಧ್ವನಿಸಿ ಬಯಲಾಗುತಿಹ ಸುರಗಾನದಂತೆ,
ಕನಸಿನಲಿ ಗೈದಿರುವಮೃತ ಪಾನದಂತೆ,
ವನಧಿಯಡಿಯಿಂದೆದ್ದಳಿವ ಫೇನದಂತೆ,
ಜನಿಸಿ ಬಾಲ್ಯಸ್ಮರಣೆ ಬೆಳಗಿಪುದು ಮನವಾ.

ಮುದಿತಂದೆ ಎಲುಬುಗೂಡಿನ ಬೆನ್ನನೇರಿ,
ತೊದಲುಲಿಯ ಚುರುಕಿಂದ ಚಪ್ಪರಿಸಿ ಚೀರಿ,
ಕುದುರೆಯಾಟವಗೈದ ನೆನಪೊಂದು ಬಾರಿ,
ಉದಿಸಲಿಂದೀವುದೀ ಎದೆಗೆ ಚಂದನವಾ.

ಮದುವೆಯಾಗುವ ಮುನ್ನ ನನ್ನಕ್ಕ ತನ್ನ
ಬದಿಯ ಗೆಳತಿಯರೊಡನೆ ಕೂಳಾಟವನ್ನ
ಒದವಿಸೆನಗಿತ್ತ ಹಪ್ಪಳ ಹುರಿಯ ಅನ್ನ
ಅದೆ ಕೊಡುವುದೀಗೆನಗೆ ಮಧುರ ಭೋಜನವಾ.

“ತಂಗಿ, ನೀ ಅಳಬೇಡ, ತರುವೆ ನಾನೊಂದು
ಉಂಗುರವ ಮುದ್ದಿಡುವ ವಜ್ರವನು” ಎಂದು,
ಮುಂಗಾರಿನಿರುಳಲ್ಲಿ ಮಿಂಚುಹುಳ ತಂದು
ಸಿಂಗರಿಸಿದುದೆ ಕೊಡುವುದಮೃತ ಸೇಚನವಾ.

ವೀರಕಚ್ಚೆಯ, ಕೂದಲಿನ ಮೀಸೆ ಧರಿಸಿ,
ಶ್ರೀರಾಮನೆಂದಾಡಿ “ಹಾ! ಪ್ರಾಣದರಿಸಿ!
ಬಾ! ರಮಣೆ!” ಎಂದು ನಾ ಕುಣಿದುದನು ಸ್ಮರಿಸಿ,
ಹಾರುವುದು ಬಗೆಯ ಗೈದಂಗ ನರ್‍ತನವಾ

ಬಣ್ಣ ಕಾಗದದ ಚೆಲು ಮಂಟಪವ ಮಾಡಿ,
ಮಣ್ಣಗೊಂಬೆಯ ದೇವರೆಂದು ಕೊಂಡಾಡಿ,
“ಅಣ್ಣನನ್ನು ಬದುಕಿಸಿಕೊಡೆ”ಂದು ವರಬೇಡಿ,
ಕಣ್ಣೀರ್ ಮಿಡಿದ ನೆನಹು ಮೀಪುದು ನಯನವಾ.

ಸಂದ ಬಾಲ್ಯವೆ ಬಾರೆ, ನಿನ್ನ ಬಿಡಲಾರೆ;
ಅಂದು ನಿನ್ನೊಡನಿದ್ದು, ಕಂಡು ಕಣ್ಣಾರೆ,
ಕಂದ ನಾನಾದಂತೆ, ಓ ಸುಖ ವಿಹಾರೆ!
ಇಂದಾದೆ ಹಾಡಿ ಬಾಲ್ಯದ ಚೌಪದನವಾ
*****
(ಕವಿಶಿಷ್ಯ)

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಇಂತೆಲ್ಲ ಕುಂತುಣ್ಣಲೆಂತೀ ಯಂತ್ರ ಹಸಿವಿಂಗುವುದೋ?
Next post ಗೊದೋವಿಗಾಗಿ ಕಾಯುತ್ತ

ಸಣ್ಣ ಕತೆ

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…