Home / ಕವನ / ಕವಿತೆ / ಶೋಕ ಗೀತೆ

ಶೋಕ ಗೀತೆ

ಹೋದುದಲ್ಲಾ! ಎಲ್ಲಾ ಹೋದುದಲ್ಲಾ!

ಹೋದುದೆಲ್ಲವು ಕಣ್ಣ ಹಿಂದೆ
ಖೇದವಿನ್ನೆನಗುಳಿದುದೊಂದೆ
ಹೇ ದಯಾನಿಧೆ! ಪ್ರೇಮದಿಂದೆ
ಹಾದಿ ತೋರಿಸಿ ನಡಿಸು ಮುಂದೆ
ಹೋದುದಲ್ಲಾ, ಎಲ್ಲಾ ಹೋದುದಲ್ಲಾ.

ತೊಡೆಯ ತೊಟ್ಟಿಲೊಳೆನ್ನನಿಟ್ಟು,
ಕುಡಿಸಿ ಮಮತೆಯ ಗುಣವ ನೆಟ್ಟು,
ಬಿಡದೆ ವಿದ್ಯೆಯ ಬಾಯ್ಗೆಕೊಟ್ಟು
ನಡೆದನೆನ್ನನು ಮರುಗಬಿಟ್ಟು
ಹೋದನಲ್ಲಾ, ಅಪ್ಪ ಹೋದನಲ್ಲಾ.

ಆಟದಿಂದೆನ್ನೊಡನೆ ಬೆಳೆದು,
ಊಟಕೂಟದ ಪ್ರೇಮ ತಳೆದು,
ಕೋಟಲೆಯ ಸಂಸಾರ ಕಳೆದು
ದಾಟಿದನು ಮಮ ಹೃದಯ ಸೆಳೆದು
ಹೋದನಲ್ಲಾ, ತಮ್ಮ ಹೋದನಲ್ಲಾ.

ಮನದಿ ಕೃಷ್ಣತೆಯನ್ನು ಮುಚ್ಚಿ,
ಕನಕತನು ಸೌಂದರ್‍ಯ ಬಿಚ್ಚಿ
ಧನದ ಕಪಟ ಸ್ನೇಹ ಹಚ್ಚಿ
ಕೊನೆಗೆ ಮಿತ್ರ ಭುಜಂಗ ಕಚ್ಚಿ
ಹೋದನಲ್ಲಾ ಮಿತ್ರ ಹೋದನಲ್ಲಾ.

ಅಲೆಯ ಬಡಿತಕೆ ಜಾರ್‍ವ ಮಳಲೋಲ್
ಕೆಳಗಿಳಿವ ಹೊತ್ತರೆಯ ನೆಳಲೋಲ್
ತಳದ ತೂತಿನ ಗಡಿಗೆ ಜಲದೋಳ್
ತಿಳಿದು ತಿಳಿಯದೆ ನೂರಬುದದೋಲ್
ಹೋದುದಲ್ಲಾ, ಪ್ರಾಯ ಹೋದುದಲ್ಲಾ.

ತೋರದಂದದಿ ಸೇರಿ ತೋರುತ
ಭೂರಿ ಸುಖ ಸಂತಸವ ಕೋರುತ
ನೀರಿನೋಲ್ ಕೈಯಿಂದ ಜಾರುತ
ಹಾರಿ ಹೋದುದು ದುಃಖ ಕಾರುತ
ಹೋದುದಲ್ಲಾ, ದ್ರವ್ಯ ಹೋದುದಲ್ಲಾ.

ಅಕಟ! ಈ ಸಂಸಾರದೊಳಗೆ
ಸಕಲ ನಾಶಕೆ ಮೂರು ಗಳಿಗೆ
ಶಕಟ ನಂದದಿ ತಿರುಗಿ ಕೆಳಗೆ
ವಿಕಟ ಭಾರತನಾದೆನಿಳೆಗೆ

ಹೋದುದನು ನಾ ಮರುಗದಂದವ
ಗೈದು ಬಿಗಿ ವೈರಾಗ್ಯ ಬಂಧವ,
ಓ ದಯಾನಿಧೆ ಭಕ್ತಬಾಂಧವ
ಮೋದದಿಂದವತರಿಸಿ ಬಂದವ.
*****
(ಕವಿಶಿಷ್ಯ)

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...