Home / ಕವನ / ಕವಿತೆ / ಶೋಕ ಗೀತೆ

ಶೋಕ ಗೀತೆ

ಹೋದುದಲ್ಲಾ! ಎಲ್ಲಾ ಹೋದುದಲ್ಲಾ!

ಹೋದುದೆಲ್ಲವು ಕಣ್ಣ ಹಿಂದೆ
ಖೇದವಿನ್ನೆನಗುಳಿದುದೊಂದೆ
ಹೇ ದಯಾನಿಧೆ! ಪ್ರೇಮದಿಂದೆ
ಹಾದಿ ತೋರಿಸಿ ನಡಿಸು ಮುಂದೆ
ಹೋದುದಲ್ಲಾ, ಎಲ್ಲಾ ಹೋದುದಲ್ಲಾ.

ತೊಡೆಯ ತೊಟ್ಟಿಲೊಳೆನ್ನನಿಟ್ಟು,
ಕುಡಿಸಿ ಮಮತೆಯ ಗುಣವ ನೆಟ್ಟು,
ಬಿಡದೆ ವಿದ್ಯೆಯ ಬಾಯ್ಗೆಕೊಟ್ಟು
ನಡೆದನೆನ್ನನು ಮರುಗಬಿಟ್ಟು
ಹೋದನಲ್ಲಾ, ಅಪ್ಪ ಹೋದನಲ್ಲಾ.

ಆಟದಿಂದೆನ್ನೊಡನೆ ಬೆಳೆದು,
ಊಟಕೂಟದ ಪ್ರೇಮ ತಳೆದು,
ಕೋಟಲೆಯ ಸಂಸಾರ ಕಳೆದು
ದಾಟಿದನು ಮಮ ಹೃದಯ ಸೆಳೆದು
ಹೋದನಲ್ಲಾ, ತಮ್ಮ ಹೋದನಲ್ಲಾ.

ಮನದಿ ಕೃಷ್ಣತೆಯನ್ನು ಮುಚ್ಚಿ,
ಕನಕತನು ಸೌಂದರ್‍ಯ ಬಿಚ್ಚಿ
ಧನದ ಕಪಟ ಸ್ನೇಹ ಹಚ್ಚಿ
ಕೊನೆಗೆ ಮಿತ್ರ ಭುಜಂಗ ಕಚ್ಚಿ
ಹೋದನಲ್ಲಾ ಮಿತ್ರ ಹೋದನಲ್ಲಾ.

ಅಲೆಯ ಬಡಿತಕೆ ಜಾರ್‍ವ ಮಳಲೋಲ್
ಕೆಳಗಿಳಿವ ಹೊತ್ತರೆಯ ನೆಳಲೋಲ್
ತಳದ ತೂತಿನ ಗಡಿಗೆ ಜಲದೋಳ್
ತಿಳಿದು ತಿಳಿಯದೆ ನೂರಬುದದೋಲ್
ಹೋದುದಲ್ಲಾ, ಪ್ರಾಯ ಹೋದುದಲ್ಲಾ.

ತೋರದಂದದಿ ಸೇರಿ ತೋರುತ
ಭೂರಿ ಸುಖ ಸಂತಸವ ಕೋರುತ
ನೀರಿನೋಲ್ ಕೈಯಿಂದ ಜಾರುತ
ಹಾರಿ ಹೋದುದು ದುಃಖ ಕಾರುತ
ಹೋದುದಲ್ಲಾ, ದ್ರವ್ಯ ಹೋದುದಲ್ಲಾ.

ಅಕಟ! ಈ ಸಂಸಾರದೊಳಗೆ
ಸಕಲ ನಾಶಕೆ ಮೂರು ಗಳಿಗೆ
ಶಕಟ ನಂದದಿ ತಿರುಗಿ ಕೆಳಗೆ
ವಿಕಟ ಭಾರತನಾದೆನಿಳೆಗೆ

ಹೋದುದನು ನಾ ಮರುಗದಂದವ
ಗೈದು ಬಿಗಿ ವೈರಾಗ್ಯ ಬಂಧವ,
ಓ ದಯಾನಿಧೆ ಭಕ್ತಬಾಂಧವ
ಮೋದದಿಂದವತರಿಸಿ ಬಂದವ.
*****
(ಕವಿಶಿಷ್ಯ)

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...