ಶೋಕ ಗೀತೆ

ಹೋದುದಲ್ಲಾ! ಎಲ್ಲಾ ಹೋದುದಲ್ಲಾ!

ಹೋದುದೆಲ್ಲವು ಕಣ್ಣ ಹಿಂದೆ
ಖೇದವಿನ್ನೆನಗುಳಿದುದೊಂದೆ
ಹೇ ದಯಾನಿಧೆ! ಪ್ರೇಮದಿಂದೆ
ಹಾದಿ ತೋರಿಸಿ ನಡಿಸು ಮುಂದೆ
ಹೋದುದಲ್ಲಾ, ಎಲ್ಲಾ ಹೋದುದಲ್ಲಾ.

ತೊಡೆಯ ತೊಟ್ಟಿಲೊಳೆನ್ನನಿಟ್ಟು,
ಕುಡಿಸಿ ಮಮತೆಯ ಗುಣವ ನೆಟ್ಟು,
ಬಿಡದೆ ವಿದ್ಯೆಯ ಬಾಯ್ಗೆಕೊಟ್ಟು
ನಡೆದನೆನ್ನನು ಮರುಗಬಿಟ್ಟು
ಹೋದನಲ್ಲಾ, ಅಪ್ಪ ಹೋದನಲ್ಲಾ.

ಆಟದಿಂದೆನ್ನೊಡನೆ ಬೆಳೆದು,
ಊಟಕೂಟದ ಪ್ರೇಮ ತಳೆದು,
ಕೋಟಲೆಯ ಸಂಸಾರ ಕಳೆದು
ದಾಟಿದನು ಮಮ ಹೃದಯ ಸೆಳೆದು
ಹೋದನಲ್ಲಾ, ತಮ್ಮ ಹೋದನಲ್ಲಾ.

ಮನದಿ ಕೃಷ್ಣತೆಯನ್ನು ಮುಚ್ಚಿ,
ಕನಕತನು ಸೌಂದರ್‍ಯ ಬಿಚ್ಚಿ
ಧನದ ಕಪಟ ಸ್ನೇಹ ಹಚ್ಚಿ
ಕೊನೆಗೆ ಮಿತ್ರ ಭುಜಂಗ ಕಚ್ಚಿ
ಹೋದನಲ್ಲಾ ಮಿತ್ರ ಹೋದನಲ್ಲಾ.

ಅಲೆಯ ಬಡಿತಕೆ ಜಾರ್‍ವ ಮಳಲೋಲ್
ಕೆಳಗಿಳಿವ ಹೊತ್ತರೆಯ ನೆಳಲೋಲ್
ತಳದ ತೂತಿನ ಗಡಿಗೆ ಜಲದೋಳ್
ತಿಳಿದು ತಿಳಿಯದೆ ನೂರಬುದದೋಲ್
ಹೋದುದಲ್ಲಾ, ಪ್ರಾಯ ಹೋದುದಲ್ಲಾ.

ತೋರದಂದದಿ ಸೇರಿ ತೋರುತ
ಭೂರಿ ಸುಖ ಸಂತಸವ ಕೋರುತ
ನೀರಿನೋಲ್ ಕೈಯಿಂದ ಜಾರುತ
ಹಾರಿ ಹೋದುದು ದುಃಖ ಕಾರುತ
ಹೋದುದಲ್ಲಾ, ದ್ರವ್ಯ ಹೋದುದಲ್ಲಾ.

ಅಕಟ! ಈ ಸಂಸಾರದೊಳಗೆ
ಸಕಲ ನಾಶಕೆ ಮೂರು ಗಳಿಗೆ
ಶಕಟ ನಂದದಿ ತಿರುಗಿ ಕೆಳಗೆ
ವಿಕಟ ಭಾರತನಾದೆನಿಳೆಗೆ

ಹೋದುದನು ನಾ ಮರುಗದಂದವ
ಗೈದು ಬಿಗಿ ವೈರಾಗ್ಯ ಬಂಧವ,
ಓ ದಯಾನಿಧೆ ಭಕ್ತಬಾಂಧವ
ಮೋದದಿಂದವತರಿಸಿ ಬಂದವ.
*****
(ಕವಿಶಿಷ್ಯ)

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ತಾಳವೆನುವಾ ತರುಲತೆಗಳನೊಂಟಿ ಮಾಡುವುದ್ಯಾಕೋ?
Next post ಕನ್ನಡ ಕಾವ್ಯಧಾತುವಿಗೆ ಅಂಟಿಕೊಂಡಿರುವ ಆತ್ಮೀಯ ಕವಿ

ಸಣ್ಣ ಕತೆ

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

  • ಇರುವುದೆಲ್ಲವ ಬಿಟ್ಟು

    ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…

  • ಸ್ವಯಂಪ್ರಕಾಶ

    ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…

  • ದೇವರು

    ನನ್ನ ದೇವರಿಗೆ, ಬಹಳ ದಿನಗಳ ನಂತರ ನಿಮಗೆ ಕಾಗದ ಬರೆಯುತ್ತಿದ್ದೇನೆ. ಏಕೆಂದರೆ ನೀವು ಬರೆದ ಕಾಗದಕ್ಕೆ ಉತ್ತರ ಕೇಳಿದ್ದೀರಿ. ನಾನೀಗ ಉತ್ತರ ಬರೆಯಲೇಬೇಕು ಬರೆಯುತ್ತಿದ್ದೇನೆ. "ಪತಿಯೇ ದೇವರು"… Read more…