Home / ಕವನ / ಕವಿತೆ / ಉತ್ತಮ ರಾಜ್ಯ

ಉತ್ತಮ ರಾಜ್ಯ

“ಕಂದ, ಕೇಳುತ್ತಮದ ರಾಜ್ಯ ಒಂದಿಹುದು:
ಮಂದಿ ಎಲ್ಲವು ಸುಖದಿ ಬಾಳುತ್ತಲಿಹುದು;”
ಎಂದು ನೀನಾಡುವಾ ರಾಜ್ಯವೆಲ್ಲಿಹುದು?
ಕಂದನಲಿ ಕರುಣಿಸುತ ಇಂದು ತಿಳಿಸಮ್ಮಾ!

“ಕಿತ್ತಳೆಯ ಮರಗಳಲಿ ಹೂಗಳರಳುತ್ತ
ಎತ್ತಲೂ ಮಿಂಚುಹುಳು ಚಿಮ್ಮಿ ಕುಣಿಯುತ್ತ,
ಮುತ್ತಿಕೊಂಡಿಹ ದೇಶದೊಳಗಿಹುದೆ ತಾಯೆ!”
“ಅತ್ತಲಿಲ್ಲಾ ರಾಜ್ಯ, ಅತ್ತಲಿಲ್ಲಣುಗಾ!”

“ತಾಳೆಗಳು ಬೆಳೆದು, ಖರ್‍ಜೂರದಲಿ ಹಣ್ಣು
ಜೋಲುತಿಹ ಬಿಸಿಲ ಸೀಮೆಯಲಿ ನೆಲಸಿಹುದೇ?
ಆಲಿಗಳಿಗಚ್ಚ ಹಸುರಾಗಿ ಸೊಗಸುತ್ತಾ
ಸಾಲು ಸಾಲಾಗೆಸೆದು ಸಾಗರದ ನಡುವೆ?-

“ಹಳುವಗಳ ಪರಿಮಳವ ಗಾಳಿಗೊಪ್ಪಿಸುತ್ತಾ,
ಹಲವು ಬಣ್ಣದ ಗರಿಯ ಪಕ್ಷಿ ಸಂಕುಲದಿ
ತೊಳಗುವಾ ದ್ವೀಪಂಗಳಲ್ಲಿಹುದೆ? ತಾಯೆ!”
“ಎಲೆ ಮಗುವೆ! ಕೇಳ್, ಅತ್ತಲಿಲ್ಲತ್ತಲಿಲ್ಲ.”

“ಹೊಳೆವ ಹೊನ್ನಿನ ಮರಳ ಮೇಲೆ ಹೊಳೆ ಹರಿವ,
ತೊಳಗುತಿಹ ಕೆಂಪುಗಳ ಕೆಂಬೆಳಗನುಗುಳ್ವ,
ತಳಿತಳಿಪ ವಜ್ರಗಳ ಗಣಿಗಳಿಂದೆಸೆವ
ತಿಳಿಮುತ್ತುಗಳ ನಗೆಯ ಬೆಳಕಿಂದ ಹೊಳೆವ-

“ಜಲದೊಳಗೆ ನೆಲೆಗೊಂಡ ಹವಳಗಳ ಕೆಳಗೆ
ತಳಿರ ಬಣ್ಣವ ತಳೆದ ಸಾಗರದ ನಡುವೆ
ಹೊಳೆವ ದ್ವೀಪಂಗಳಲಿ ನೆಲಸಿಹುದೆ? ತಾಯೆ!”
“ಎಲೆ ಮಗುವೆ! ಕೇಳತ್ತಲಿಲ್ಲತ್ತಲಿಲ್ಲ.

“ಅದರ ಸೊಗಸಿನ ಸಿರಿಯ ಕಣ್ಣು ಕಂಡಿಲ್ಲ.
ಅದರ ಗಾನದ ಸವಿಯ ಕಿವಿಯು ಕೇಳಿಲ್ಲ.
ಅದರಂದವನು ಕನಸು ಕಂಡರಿದುದಿಲ್ಲ.
ಅದರ ನೆಲೆಯನು ಸಾವು ನೋವರಿದುದಿಲ್ಲ.

“ಎಂದೆಂದುಮಾ ಪರಮರಾಜ್ಯ ವಿಭವಗಳು.
ಕುಂದುಕೊರತೆಗೆ ಸಿಲುಕದೊಂದೆ ತೆರವಿಹವು.
ಕಂದ! ಕೇಳದು ಸಾವಿನಿಂದತ್ತಲತ್ತ
ನಿಂದು ತಾನನಿಗಾಲ ಎಸೆದೊಪ್ಪುತ್ತಿಹುದು.”
*****
(ಕವಿಶಿಷ್ಯ)

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...