Home / ಕವನ / ಕವಿತೆ / ಉತ್ತಮ ರಾಜ್ಯ

ಉತ್ತಮ ರಾಜ್ಯ

“ಕಂದ, ಕೇಳುತ್ತಮದ ರಾಜ್ಯ ಒಂದಿಹುದು:
ಮಂದಿ ಎಲ್ಲವು ಸುಖದಿ ಬಾಳುತ್ತಲಿಹುದು;”
ಎಂದು ನೀನಾಡುವಾ ರಾಜ್ಯವೆಲ್ಲಿಹುದು?
ಕಂದನಲಿ ಕರುಣಿಸುತ ಇಂದು ತಿಳಿಸಮ್ಮಾ!

“ಕಿತ್ತಳೆಯ ಮರಗಳಲಿ ಹೂಗಳರಳುತ್ತ
ಎತ್ತಲೂ ಮಿಂಚುಹುಳು ಚಿಮ್ಮಿ ಕುಣಿಯುತ್ತ,
ಮುತ್ತಿಕೊಂಡಿಹ ದೇಶದೊಳಗಿಹುದೆ ತಾಯೆ!”
“ಅತ್ತಲಿಲ್ಲಾ ರಾಜ್ಯ, ಅತ್ತಲಿಲ್ಲಣುಗಾ!”

“ತಾಳೆಗಳು ಬೆಳೆದು, ಖರ್‍ಜೂರದಲಿ ಹಣ್ಣು
ಜೋಲುತಿಹ ಬಿಸಿಲ ಸೀಮೆಯಲಿ ನೆಲಸಿಹುದೇ?
ಆಲಿಗಳಿಗಚ್ಚ ಹಸುರಾಗಿ ಸೊಗಸುತ್ತಾ
ಸಾಲು ಸಾಲಾಗೆಸೆದು ಸಾಗರದ ನಡುವೆ?-

“ಹಳುವಗಳ ಪರಿಮಳವ ಗಾಳಿಗೊಪ್ಪಿಸುತ್ತಾ,
ಹಲವು ಬಣ್ಣದ ಗರಿಯ ಪಕ್ಷಿ ಸಂಕುಲದಿ
ತೊಳಗುವಾ ದ್ವೀಪಂಗಳಲ್ಲಿಹುದೆ? ತಾಯೆ!”
“ಎಲೆ ಮಗುವೆ! ಕೇಳ್, ಅತ್ತಲಿಲ್ಲತ್ತಲಿಲ್ಲ.”

“ಹೊಳೆವ ಹೊನ್ನಿನ ಮರಳ ಮೇಲೆ ಹೊಳೆ ಹರಿವ,
ತೊಳಗುತಿಹ ಕೆಂಪುಗಳ ಕೆಂಬೆಳಗನುಗುಳ್ವ,
ತಳಿತಳಿಪ ವಜ್ರಗಳ ಗಣಿಗಳಿಂದೆಸೆವ
ತಿಳಿಮುತ್ತುಗಳ ನಗೆಯ ಬೆಳಕಿಂದ ಹೊಳೆವ-

“ಜಲದೊಳಗೆ ನೆಲೆಗೊಂಡ ಹವಳಗಳ ಕೆಳಗೆ
ತಳಿರ ಬಣ್ಣವ ತಳೆದ ಸಾಗರದ ನಡುವೆ
ಹೊಳೆವ ದ್ವೀಪಂಗಳಲಿ ನೆಲಸಿಹುದೆ? ತಾಯೆ!”
“ಎಲೆ ಮಗುವೆ! ಕೇಳತ್ತಲಿಲ್ಲತ್ತಲಿಲ್ಲ.

“ಅದರ ಸೊಗಸಿನ ಸಿರಿಯ ಕಣ್ಣು ಕಂಡಿಲ್ಲ.
ಅದರ ಗಾನದ ಸವಿಯ ಕಿವಿಯು ಕೇಳಿಲ್ಲ.
ಅದರಂದವನು ಕನಸು ಕಂಡರಿದುದಿಲ್ಲ.
ಅದರ ನೆಲೆಯನು ಸಾವು ನೋವರಿದುದಿಲ್ಲ.

“ಎಂದೆಂದುಮಾ ಪರಮರಾಜ್ಯ ವಿಭವಗಳು.
ಕುಂದುಕೊರತೆಗೆ ಸಿಲುಕದೊಂದೆ ತೆರವಿಹವು.
ಕಂದ! ಕೇಳದು ಸಾವಿನಿಂದತ್ತಲತ್ತ
ನಿಂದು ತಾನನಿಗಾಲ ಎಸೆದೊಪ್ಪುತ್ತಿಹುದು.”
*****
(ಕವಿಶಿಷ್ಯ)

Tagged:

Leave a Reply

Your email address will not be published. Required fields are marked *

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...