ಉತ್ತಮ ರಾಜ್ಯ

“ಕಂದ, ಕೇಳುತ್ತಮದ ರಾಜ್ಯ ಒಂದಿಹುದು:
ಮಂದಿ ಎಲ್ಲವು ಸುಖದಿ ಬಾಳುತ್ತಲಿಹುದು;”
ಎಂದು ನೀನಾಡುವಾ ರಾಜ್ಯವೆಲ್ಲಿಹುದು?
ಕಂದನಲಿ ಕರುಣಿಸುತ ಇಂದು ತಿಳಿಸಮ್ಮಾ!

“ಕಿತ್ತಳೆಯ ಮರಗಳಲಿ ಹೂಗಳರಳುತ್ತ
ಎತ್ತಲೂ ಮಿಂಚುಹುಳು ಚಿಮ್ಮಿ ಕುಣಿಯುತ್ತ,
ಮುತ್ತಿಕೊಂಡಿಹ ದೇಶದೊಳಗಿಹುದೆ ತಾಯೆ!”
“ಅತ್ತಲಿಲ್ಲಾ ರಾಜ್ಯ, ಅತ್ತಲಿಲ್ಲಣುಗಾ!”

“ತಾಳೆಗಳು ಬೆಳೆದು, ಖರ್‍ಜೂರದಲಿ ಹಣ್ಣು
ಜೋಲುತಿಹ ಬಿಸಿಲ ಸೀಮೆಯಲಿ ನೆಲಸಿಹುದೇ?
ಆಲಿಗಳಿಗಚ್ಚ ಹಸುರಾಗಿ ಸೊಗಸುತ್ತಾ
ಸಾಲು ಸಾಲಾಗೆಸೆದು ಸಾಗರದ ನಡುವೆ?-

“ಹಳುವಗಳ ಪರಿಮಳವ ಗಾಳಿಗೊಪ್ಪಿಸುತ್ತಾ,
ಹಲವು ಬಣ್ಣದ ಗರಿಯ ಪಕ್ಷಿ ಸಂಕುಲದಿ
ತೊಳಗುವಾ ದ್ವೀಪಂಗಳಲ್ಲಿಹುದೆ? ತಾಯೆ!”
“ಎಲೆ ಮಗುವೆ! ಕೇಳ್, ಅತ್ತಲಿಲ್ಲತ್ತಲಿಲ್ಲ.”

“ಹೊಳೆವ ಹೊನ್ನಿನ ಮರಳ ಮೇಲೆ ಹೊಳೆ ಹರಿವ,
ತೊಳಗುತಿಹ ಕೆಂಪುಗಳ ಕೆಂಬೆಳಗನುಗುಳ್ವ,
ತಳಿತಳಿಪ ವಜ್ರಗಳ ಗಣಿಗಳಿಂದೆಸೆವ
ತಿಳಿಮುತ್ತುಗಳ ನಗೆಯ ಬೆಳಕಿಂದ ಹೊಳೆವ-

“ಜಲದೊಳಗೆ ನೆಲೆಗೊಂಡ ಹವಳಗಳ ಕೆಳಗೆ
ತಳಿರ ಬಣ್ಣವ ತಳೆದ ಸಾಗರದ ನಡುವೆ
ಹೊಳೆವ ದ್ವೀಪಂಗಳಲಿ ನೆಲಸಿಹುದೆ? ತಾಯೆ!”
“ಎಲೆ ಮಗುವೆ! ಕೇಳತ್ತಲಿಲ್ಲತ್ತಲಿಲ್ಲ.

“ಅದರ ಸೊಗಸಿನ ಸಿರಿಯ ಕಣ್ಣು ಕಂಡಿಲ್ಲ.
ಅದರ ಗಾನದ ಸವಿಯ ಕಿವಿಯು ಕೇಳಿಲ್ಲ.
ಅದರಂದವನು ಕನಸು ಕಂಡರಿದುದಿಲ್ಲ.
ಅದರ ನೆಲೆಯನು ಸಾವು ನೋವರಿದುದಿಲ್ಲ.

“ಎಂದೆಂದುಮಾ ಪರಮರಾಜ್ಯ ವಿಭವಗಳು.
ಕುಂದುಕೊರತೆಗೆ ಸಿಲುಕದೊಂದೆ ತೆರವಿಹವು.
ಕಂದ! ಕೇಳದು ಸಾವಿನಿಂದತ್ತಲತ್ತ
ನಿಂದು ತಾನನಿಗಾಲ ಎಸೆದೊಪ್ಪುತ್ತಿಹುದು.”
*****
(ಕವಿಶಿಷ್ಯ)

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಎಂತುಳಿಸುವುದೋ? ರೈತಾತ್ಮ ಶಕ್ತಿಯನು
Next post ಸೋಫೋಕ್ಲೀಸ್‌ನ Oedipus Rex- ಪುನರಾವರ್ತನೆ ಮತ್ತು ಅಂಗೀಕಾರ ತತ್ವಗಳ ವಿಸ್ತೃತತೆ

ಸಣ್ಣ ಕತೆ

  • ಕಳಕೊಂಡವನು

    ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ರಣಹದ್ದುಗಳು

    ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…

cheap jordans|wholesale air max|wholesale jordans|wholesale jewelry|wholesale jerseys