Home / ಕವನ / ಕವಿತೆ / ಹೊಲೆಯನ ಹಾಡು

ಹೊಲೆಯನ ಹಾಡು

ಉಳ್ಳಯ್ಯಾ, ದಯೆ ಗೊಳ್ಳಯ್ಯಾ!

“ದಟ್ಟಿದಿಕ್ಕಾ! ಮಾರಿ, ಮುಂಡ, ಮುಂಡಾಳ!
ಹುಟ್ಟು ಹೊಲೆಯ! ಪೋಲಾ! ಚಂಡ ಚಂಡಾಳ!
ಬೊಟ್ಟೆ! ಬೊಗ್ಗುರೆ!” ಎಂದು ಹೆಸರೆತ್ತಿ ಕೂಗಿ
ಮುಟ್ಟಲಂಜುತೆ ನಿಲ್ವೆ ದೂರಕ್ಕೆ ಹೋಗಿ!

ಕಣ್ಣು, ಮೂಗು, ಕಿವಿ, ಕೈ, ಕಾಲು, ಗಂಟು-
ಅಣ್ಣ, ನಿಮ್ಮಂತೆಯೆ ನಮಗೆಲ್ಲ ಉಂಟು.
ಬಣ್ಣ ಕಪ್ಪೆಂದು ನೀ ಬಿಡುವುದೆ ನಂಟು?
ಎಣ್ಣೆಯೋಲ್ ಹಿಡಿವುದೆ ನಮ್ಮ ಮೈ ಅಂಟು ?

ಹಾಸಿಗೆ ತಗಣೆ ಮುದ್ದಿಪ ನಿಮ್ಮ ಮೈಗೆ
ಹೇಸಿಗೆ ಅಹುದೆ ಮುಟ್ಟಲು ನಮ್ಮ ಕೈಗೆ?
ವಾಸಕ್ಕೆ ನಮಗೂರ ಹೊರಗೊಂದು ಎಡೆಯೇ?
ಆ ಸುದ್ದ ಹಂದಿನಾಯ್ಗಳಿಗಿಂತ ಕಡೆಯೆ?

ಒಳಹೊಕ್ಕು ಅನ್ನ ತಿಂಬುದು ಮನೆ ಬೆಕ್ಕು;
ಉಳುವರು ನಾವು! ಹಾ! ನಮಗಿಲ್ಲ ಹಕ್ಕು!
ಅಳುವ ತಮ್ಮಗೆ ಸರಿ ಮಣೆಯನ್ನು ಇಕ್ಕು;
ಕಲಿಯುಗದಲಿ ನಿನಗಿದು ಪುಣ್ಯವಕ್ಕು!

ಮಾರಿ ಹೊಲೆಯ, ಬಾವಿ, ಕೆರೆ ಮುಟ್ಟಲಾರೆ.
ಊರ ಸಾಲೆಗಳಂತೆ: ನಮಗೊಂದು ಬೇರೆ!
“ದೂರಕ್ಕೆ ಪೋ! ಪೋ!” ಯಾವುದೀ ನ್ಯಾಯ?
ಹಾರುವ! ಮಾಡಿದ್ದುಣ್ಣುವೆ, ಮಹಾರಾಯಾ!

ಅರರೆ! ಕಾಲಡಿಯ ಕುಂಬಳಕೆ ಕಣ್ಮುಚ್ಚಿ,
ಪರದೇಶ ಕಾಯಿದೆ ಸಾಸಿವೆ ಕಾಳು ಹೆಚ್ಚಿ,
ಹಿರಿದು ಹಬ್ಬಿಸುವ ಬೊಬ್ಬೆಯದೇಕೆ ಹೇಳು?
ಹೊರದೊಬ್ಬು ಮೊದಲು ನಿನ್ನಂಗಳ ಧೂಳು!

ನೋಡು ಸ್ವರಾಜ್ಯಕ್ಕೆ ನಾವೂರುಗೋಲು!
ನೀಡಣ್ಣ! ದಮ್ಮಯ್ಯ! ಕೊಡು ಸರಿ ಸಾಲು!
ಬೇಡಿದಾಗಲೆ ಬಿಟ್ಟುಕೊಡುವುದೆ ಮೇಲು!
ಬೇಡ ನಾಂ ಸೆಳೆದು ಕೊಂಬೆವು ನಮ್ಮ ಪಾಲು!

ನಂದಿಸು ಕಿಡಿಯಲ್ಲಿ ಹೊಲೆಯನ ಹಗೆಯಾ!
ಬಂದಿಸು ಕೈಗೆ ಕೈ! ನಮ್ಮ ಸಲುಗೆಯಾ
ಹೊಂದಿಸು! ಸಂದಿಸು ಮೊಗದಲ್ಲಿ ನಗೆಯಾ!
ಹಿಂದು ದೇವಿಯು ಘಲ್ಲೆಂಬಳು ಕಾಲಂದುಗೆಯಾ!
*****
(ಕವಿಶಿಷ್ಯ)

Tagged:

Leave a Reply

Your email address will not be published. Required fields are marked *

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...