Home / ಕವನ / ಕವಿತೆ / ಹರಿಶ್ಚಂದ್ರ ರಾಜ್ಯವಿಯೋಗ

ಹರಿಶ್ಚಂದ್ರ ರಾಜ್ಯವಿಯೋಗ

(ಮತ್ತೇಭ ವಿಕ್ರೀಡಿತ)

ಅಡಿಯಂ ಮೆಲ್ಲನಿಡುತ್ತೆ, ಕಂದು ಮೊಗಮಂ ಕೀಳೋದು, ಕಣ್ಣೀರ್ಗಳಿಂ|
ಮಿಡಿದುಂ, ತಾಮೊಡವರ್ಪೆವೆಂದು ನೃಪನಂ ಬೆಂಬತ್ತಿ ಬಂದಿರ್ಪರಂ|
ಜಡಿದುಂ ಜಾಡಿಸಿ, ಪಿಂದಕಟ್ಟಿ ಪುರಕಂ, ಗಾಧೇಯನುಂ ಮೂವರಂ|
ಕಡುಗಲ್ತೀವಿದರಣ್ಯಮಂ ಪುಗಿಸಿದಂ – ಕೈಗೂಡಿಸಲ್ ಪಂತವಂ ||೧||

ಮನುವಿಂದಿನ್ನೆವರಂ ಮಹಾವಿಭವದಿಂ ಸಾಮ್ರಾಜ್ಯಮಂಗೈದ ಪ|
ತ್ತನಮಂ ನಿಟ್ಟಿಸುತೊರ್ಮೆ ನಿಂದರಿನಿಸುಂ; ಮೇಣೊರ್ಮೆಯೋಕೋರ್ವರುಂ|
ನನೆಗೂಸಂ ನೆರೆ ನೋಡಿ ನೋಡಿ, ನುಡಿದರ್ ನೇತ್ರಂಗಳಿಂ ಮತ್ತೆ ಮಾ
ನಿನಿ ತನ್ನಂಬಕದಿಂದೆ ಬಿಳ್ದ ಪನಿಮುತ್ತಂ ಮಾಜಿದಳ್ ಸೀರೆಯಿಂ ||೨||

“ಎಲೆ! ಪ್ರಾಣೇಶ್ವರಿ! ತಕ್ಕುದಲ್ತು ದುಗುಡಂ ಪ್ರಸ್ತಾನದಾರಂಭದೊಳ್|
ಪಲವುಂ ದಂದುಗಮಂತು ರೋಗರುಜೆಯುಂ, ಸಂಕಷ್ಟ ಕಷ್ಟಂಗಳುಂ|
ಸತಿ ಎಮ್ಮುದರಣಾರ್ಥಮಾಗಿ, ಪ್ರಭು ತಾಂ ಕೈಗಾಯ್ದ ಸೌಭಾಗ್ಯಮಂ|
ದೊಲಿದುಂ ತಾಳ್ವುದು – ಭಕ್ತರಕ್ಷಣದೊಳುಂ ‘ದೈವೀ ವಿಚಿತ್ರಾಗತೀ!’” ||೩||

ಎನಸುಂ ಸಂತವಿಡುತ್ತೆ ಚಂದ್ರಮತಿಯಂ, ಮುದ್ದಾಡುತಂ ಬಾಲನಂ,|
ಜನಪಂ ಕೊಂಡು ತಳರ್ದನೆಲ್ಲ ನೆಲಮುಂ ಕಣ್ಮುಂದೆ ಪರ್ಬಿತ್ತು ದೇ|
ವನ ಹಸ್ತಾಬ್ಜದ ಛಾಯೆಯಿರ್ಪುದೆನುತಂ, ನಲ್ಲಳ್ಗೆ ಕೈಗೊಟ್ಟು, ಮೆ|
ಲ್ಲನೆ ಪೋದಂ, ತಡಗಾಲ ಪಜ್ಜೆ ತೊಡರಲ್, ಶಂಕವಂ ರಾಜ್ಯದಿಂ| ||೪||
*****
(ಸುವಾಸಿನಿ ಏಪ್ರಿಲ್ ೧೯೦೩, ಪುಸ್ತಕ ೨, ಅಂಕ ೧೦, ಪುಟ ೨೧೭)

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...