Home / ಕವನ / ಕವಿತೆ / ಹರಿಶ್ಚಂದ್ರ ರಾಜ್ಯವಿಯೋಗ

ಹರಿಶ್ಚಂದ್ರ ರಾಜ್ಯವಿಯೋಗ

(ಮತ್ತೇಭ ವಿಕ್ರೀಡಿತ)

ಅಡಿಯಂ ಮೆಲ್ಲನಿಡುತ್ತೆ, ಕಂದು ಮೊಗಮಂ ಕೀಳೋದು, ಕಣ್ಣೀರ್ಗಳಿಂ|
ಮಿಡಿದುಂ, ತಾಮೊಡವರ್ಪೆವೆಂದು ನೃಪನಂ ಬೆಂಬತ್ತಿ ಬಂದಿರ್ಪರಂ|
ಜಡಿದುಂ ಜಾಡಿಸಿ, ಪಿಂದಕಟ್ಟಿ ಪುರಕಂ, ಗಾಧೇಯನುಂ ಮೂವರಂ|
ಕಡುಗಲ್ತೀವಿದರಣ್ಯಮಂ ಪುಗಿಸಿದಂ – ಕೈಗೂಡಿಸಲ್ ಪಂತವಂ ||೧||

ಮನುವಿಂದಿನ್ನೆವರಂ ಮಹಾವಿಭವದಿಂ ಸಾಮ್ರಾಜ್ಯಮಂಗೈದ ಪ|
ತ್ತನಮಂ ನಿಟ್ಟಿಸುತೊರ್ಮೆ ನಿಂದರಿನಿಸುಂ; ಮೇಣೊರ್ಮೆಯೋಕೋರ್ವರುಂ|
ನನೆಗೂಸಂ ನೆರೆ ನೋಡಿ ನೋಡಿ, ನುಡಿದರ್ ನೇತ್ರಂಗಳಿಂ ಮತ್ತೆ ಮಾ
ನಿನಿ ತನ್ನಂಬಕದಿಂದೆ ಬಿಳ್ದ ಪನಿಮುತ್ತಂ ಮಾಜಿದಳ್ ಸೀರೆಯಿಂ ||೨||

“ಎಲೆ! ಪ್ರಾಣೇಶ್ವರಿ! ತಕ್ಕುದಲ್ತು ದುಗುಡಂ ಪ್ರಸ್ತಾನದಾರಂಭದೊಳ್|
ಪಲವುಂ ದಂದುಗಮಂತು ರೋಗರುಜೆಯುಂ, ಸಂಕಷ್ಟ ಕಷ್ಟಂಗಳುಂ|
ಸತಿ ಎಮ್ಮುದರಣಾರ್ಥಮಾಗಿ, ಪ್ರಭು ತಾಂ ಕೈಗಾಯ್ದ ಸೌಭಾಗ್ಯಮಂ|
ದೊಲಿದುಂ ತಾಳ್ವುದು – ಭಕ್ತರಕ್ಷಣದೊಳುಂ ‘ದೈವೀ ವಿಚಿತ್ರಾಗತೀ!’” ||೩||

ಎನಸುಂ ಸಂತವಿಡುತ್ತೆ ಚಂದ್ರಮತಿಯಂ, ಮುದ್ದಾಡುತಂ ಬಾಲನಂ,|
ಜನಪಂ ಕೊಂಡು ತಳರ್ದನೆಲ್ಲ ನೆಲಮುಂ ಕಣ್ಮುಂದೆ ಪರ್ಬಿತ್ತು ದೇ|
ವನ ಹಸ್ತಾಬ್ಜದ ಛಾಯೆಯಿರ್ಪುದೆನುತಂ, ನಲ್ಲಳ್ಗೆ ಕೈಗೊಟ್ಟು, ಮೆ|
ಲ್ಲನೆ ಪೋದಂ, ತಡಗಾಲ ಪಜ್ಜೆ ತೊಡರಲ್, ಶಂಕವಂ ರಾಜ್ಯದಿಂ| ||೪||
*****
(ಸುವಾಸಿನಿ ಏಪ್ರಿಲ್ ೧೯೦೩, ಪುಸ್ತಕ ೨, ಅಂಕ ೧೦, ಪುಟ ೨೧೭)

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...