Home / ಕಥೆ / ಕಾದಂಬರಿ / ಸುಭದ್ರೆ – ೧೮

ಸುಭದ್ರೆ – ೧೮

ಮಾಧವನು ಮುಖ್ಯ ವೈದ್ಯನೊಡನೆ ರೋಗಿಗಳಿರುವ ಸ್ಥಳಕ್ಕೆ ಹೋದನು. ಸುಬದ್ರೆಯು ಮಲಗಿದ್ದ ಕೊಠಡಿಯಬಳಿಗೆ ಬರುತ್ತಲೆ, ವೈದ್ಯನು ಮಾಧವನನ್ನು ಸ್ಕಲ್ತ. ಹೊತ್ತು ಮರೆಯಾಗಿರ ಹೇಳಿ ತಾನೊಬ್ಬನೆ ಒಳಗೆ ಹೋದನು. ಆಗ ಸುಭದ್ರೆಯು ಸಂಪೂ ರ್ಣವಾಗಿ ವಿಕಾಸವಾದ ಕಣ್ಣುಗಳಿಂದ ಮೇಲ್ಚಾವಣಿಯನ್ನು ನೋ ಡುತ್ತಾ ಮಲಗಿದ್ದಳು. ವೈದ್ಯನು “ಸುಭದ್ರಾಬಾಯಿ! ” ಎನ್ನುತ್ತಲೆ ಗಕ್ಕನೆ ತಿರುಗಿ ನೋಡಿದಳು. ಅಯ್ಯೊ! ನೀವೇ? ಅವರು ಬಂದರೇನೋ ಎಂದಿದ್ದೆ.“ ಎಂದು ತನ್ನಷ್ಟಕ್ಕೆ ತಾನೆ ಹೇಳಿಕೊಂಡಳು.

ವೈದ್ಯ– “ಅವರು ಎಂದರೆ ಯಾರು“

ಸುಭದ್ರೆ_-ಇನ್ನಾ ರು? ನನ್ನ ಕಣ್ಣೆದುರಿಗೆ ಇದುವರೆಗೂ ನಿಂತಿದ್ದವರು.

ವೈದ್ಯ_-ಅವರಾರು?

ಸುಭದ್ರೆ– ನಾನು ಹೇಗೆ ಹೇಳಲಿ?

ವೈದ್ಯ-ನಿಮ್ಮ ಭರ್ತನೆ ?

ಸುಭದ್ರೆ ಸುಮ್ಮನಿದ್ದಳು.

ವೈದ್ಯ – ಅವರ ಹೆಸರೇನು ?

ಸುಭದ್ರೆ–ಹೇಗೆ ಹೇಳಲಿ ?

ವೈದ್ಯ—ನಾನು ಹೇಳುತ್ತೇನೆ ಕೇಳಿ, “ಮಾಧವರಾಯರು. “?

ಸುಭದ್ರೆ- ಆಶ್ಚರ್ಯದಿಂದ) ನಿಮಗೆ ಯಾರುಹೇಳಿದರು?

ವೈದ್ಯನು —(ತನ್ನಷ್ಟಕ್ಕೆ ತಾನೆ) “ಇದುವರೆಗೂ ಕಾಣದ ನಗುವು ಈಗ ತೋರಿಬರುತ್ತಿದೆ. . ನಾನು. ಇಷ್ಟನ್ನು ಕಂಡು ಹಿಡಿಯಲಾರದೆ ಹೋದೆನಲ್ಲಾ –ಎಂತಹ ಮೂಢ!“ ಎಂದಂದುಕೊಂಡು. ಸುಭದ್ರೆಯ ಪ್ರಶ್ಕೆ ಗೆ ಉತ್ತರವಾಗಿ “ಅವರೇ” ಎಂದನು.

ಸುಭದ್ರೆ—ಅವರನ್ನೆಲ್ಲಿ ನೋಡಿದ್ದಿರಿ! “

ವೈದ್ಗ — ಇಲ್ಲಿಯೇ !

ಸುಭದ್ರೆ-ಅವರೇತಕ್ಕೆ ಇಲ್ಲಿಗೆ ಬರುವರು ? ಕುಚೋದ್ಯ ಮಾಡುತ್ತೀರಾ?

ವೈದ್ಯ—ಈಗ ಮಾಯಾಮಂತ್ರಮಾಡಿ ಅವರನ್ನು ನಿಮ್ಮೆ ದು ರಿಗೆ ಬರುವಂತೆಮಾಡಲೆ!

ಸುಭದ್ರೆ -ಎಲ್ಲಿ ನೋಡೋಣ

ವೈದ್ಯ —ನೀವು ಎದ್ದು ಕೂತುಕೊಳ್ಳಿ….ಸರಿ.. ಹಾಗೆ…. ಕಣ್ಣುಮುಚ್ಚಿಕೊಳ್ಳಿ ಈಗ ನಾನು ಮಂತ್ರಮಾಡುತ್ತೇನೆ. ಒಂದು, ಎರಡು, ಮೂರು,ಎಂದಕೂಡಲೆ ಕಣ್ಣುಬಿಡಬೇಕು ಅದಕ್ಕೆ ಮುಂಚೆ ಬಿಟ್ಟರೆ ಎಲ್ಲವೂ ಮಾಯವಾಗುವುದು.

ಸುಭದ್ರೆ_ಇದೇನೋ ಬ್ರಾಹ್ಮಣಿತಿಯು ಗಂಡನಿಗೆ ವಡೆ ಮಾಡಿಕೊಟ್ಟ ಕಥೆಯಂತಿದೆ.

ವೈದ್ಗ–ಒಂದು ಸಾರಿ ನನ್ನನ್ನು ಪರೀಕ್ಷೆ ಮಾಡಿ ನೋಡಿದರೆ ನನ್ನ ಮಂತ್ರದ ಮಹಿಮೆಯು ಗೊತ್ತಾಗುವುದು.

ಸುಭದ್ರೆಯುಎದ್ದು ದಿಂಬನ್ನೊರಗಿಳಕೊಂಡು ಕುಳಿತಳು, ಎರಡು ಕೈಗ ಳಿಂದಲೂಕಣ್ಣು ಗಳನ್ನು ಮುಚ್ಛಿ ಕೊಂಡಳು. ವೈದ್ಯನು, “ಹುಂ ! ಮಹಂಕಾಳಿ ! ಚಂಡಿ! ಚಾಮುಂಡಿ ” ಹ್ರೀಂ, ಹ್ರೂಂ, ಪಟಪಟ ಝುಂಕಾರಧ್ವನಿಭೈರವಿ, ನನ್ನ ಇಷ್ಠಾರ್ತವನ್ನು ನೆರವೇರಿಸು“ ಎಂದು, ಸುಭದ್ರೆಯನ್ನು ಕುರಿತು “ಸುಭದ್ರಾಬಾಯಿ! ಒಂದು, ಎರಡು, ಮೂರು. ಎಂದು ಚಿಟಿಕಿಯನ್ನು ಹೊಡೆದನು. ಸುಭದ್ರೆಯು ಕಣ್ದೆ ರೆಯಲಾಗಿ ತನ್ನ ಪ್ರಾಣಸ್ಕ್ರರೂಪನಾದವನೆ ಸ್ವಯಂ ನಿಂತಿದ್ದನು. ಸುಭದ್ರೆಯು ತನ್ನ ಕಣ್ಣನ್ನೆ ತಾನು ನಂಬಲಾರದೆ ಹೋದಳು. ಹಾಗೆಯೆ ಪತಿಯ ಬಾಹುಗಳು ಸ್ಪರ್ಶವಾದುದರಿಂದ ಕನಸಲ್ಲವೆಂದೂ ವ್ಯಕ್ತವಾ ಯಿತು. ದಂಪತಿಗಳಿಬ್ಬರೂ ಆನಂದಾತಿಶಯದಿಂದ ಅವಾಕಕ್ಕಾದರು. ಸುಭದ್ರೆಯು ಆಹಾರನಿದ್ರೆಗಳಿಲ್ಲದೆ ಬಹಳ ಬಡವಾಗಿದ್ದರೂ ಅವಳ ಸೌಂ ದರ್ಯವು ಸ್ನಲ್ಲವೂ ಕಡಿಮೆಯಾಗಿರಲಿಲ್ಲ. ತಲೆಯನ್ನು ಬಾಚಿಕೊಂಡು ಏಷ್ಲೋ ದಿನಗಳಾಗಿ ಹೋಗಿದ್ದುವು. ಹಳೆಯದಾದ ಮಾಸಲು ಬಣ್ಣದ ಸೀರೆಯನ್ನುಟ್ಟಿದ್ದಳು. ಆಭರಣದ, ಸೊಲ್ಲೇ ಇಲ್ಲ. ಹೀಗಿದ್ದ ರೂ ಆ ವಿಶಾಲವಾದ ಕಾಂತಿಯುಳ್ತವಾದ ನೇತ್ರದ್ವೆಯವೂ, ಶುಭ್ರ ವಾದ ದಂತ ಪಂಕ್ತಿಯೂ, ವಿಶಾಲವಾದ ಹಣೆಯೂ, ನಸುನೀಟ ವಾದ ಮೂಗೂ, ಮೇಲಾಗಿ, ಸ್ಕ್ರರ್ಣಕಾಂತಿಗೆ, ಸಮವಾದ ಶರೀರ ಕಾಂತಿಯೂ ಎಂತಹ ವಿರಕ್ತನನ್ನಾ ದರೂ ಮರುಳುಮಾಡುವಂತಿ ದ್ದುವು. ಮಾಧವನ್ನು ತಾನೇ ಧನ್ಯನೆಂದುಕೊಂಡನ್ನು ವೈದ್ಯನು “ನಾನೆಲ್ಲಿಯೂ ಇಂತಹ ಯುಗ್ಮವನ್ನು ನೋಡಲಿಲ್ಲ“ ಎಂದಂದು ಕೊಂಡು, ಮಾಧವನನ್ನು ಕುರಿತು , “ರಾಯರೆ ! ನಾನು ಇನ್ನು ಸ್ವಲ್ಪ ಹೊತ್ತು ಬಿಟ್ಟುಕೊಂಡು ಬರುತ್ತೇನೆ. ಇಲ್ಲಿಯೇ ಇರೋಣಾ ಗಲಿ“ ಎಂದು ಹೇಳಿ ಹೋದನು .

ಸುಭದ್ರೆಯೂ ಮಾಧನನೂ ಏನೇನುಮಾತಾಡು ತ್ತಿದ್ದ ರೋ ನಾವರಿಯಿವು. ಸುಭದ್ರೆಯು ತನ್ನ ಕಷ್ಟಗಳನ್ನೆಲ್ಲಾ ಹೀಳಿಕೊಂಡಿರಬ ಹುದು. ಮಾಧವನೂ ತಾನು ಪಂಡರಾಪುರವನ್ನು ಬಿಟ್ಟು ಹೊರಟ ಮೇಲೆ ನಡೆದು ದೆಲ್ಲನನ್ನೂ ತಿಳಿಸಿರಬಹುದು. ಸ್ವಲ್ಪ ಹೊತ್ತು ಕಳೆದ ಅನಂತರ ಗಂಗಾಬಾಯಿ, ಶಂಕರರಾಯ, ನವಾಬ, ಈ ಮೂರು ಜನವೂ ಆಸ್ಪತ್ರೆಗೆ ಬಂದು ದಂಪತಿಗಳದುರಿಗೆ ನಿಂತರು. ಅವರನ್ನು ವೈದ್ಯನು ಕರೆಯಕಳುಹಿಸಿದ್ದನು. ಸುಭದ್ರೆಗೆ ಅವರನ್ನು ಕಂಡೊಡನೆಯೆ ಎಲ್ಲಿಂದ ಲೋ ಹೊಸ ಶಕ್ತಿಯುಂಟಾಯಿತು.. ಸರಾಗವಾ[\, ಎದ್ದುಕೂರಲಾರದವಳು ಮಂಚದಿಂದ ಕೆಳಗೆ ಜಗ್ಗನೆ ಇಳಿದು ಮೊದಲುಶಂಕರರಾಯ ನಿಗೂ, ಅನಂತರ ಗಂಗಾಬಾಯಿಗೂ ನಮಸ್ಥಾ ರ ಮಾಡಿದಳು. ಇದ ನ್ನೆ ಲ್ಲಾ ನೋಡುತ್ತಿದ್ದ ವೈದ್ಯನಿಗೆ ಪರಮಾಶ್ಚರ್ಯವುಂಟಾಯಿತು. “ಮನಸ್ಸಿನ ಶಕ್ತಿಯ ಮುಂದೆ ಔಷಧದ ಶಕ್ತಿ ಎಷ್ಟರದು?“ ಎಂದನು. ಶಂಕರರಾಯನು ಸುಭದ್ರೆಯ ರೂಪಲಾವಣ್ಯವನ್ನು ನೋಡಿ ಮುಗ್ಧ ನಾದನು. “ಮನೆಗೆ ಮಹಾಲಕ್ಸ್ಮೀ ಸ್ವರೂಪಳಾದವಳ ಮೇಲೆ ನಿಷ್ಕಾ ರಣವಾಗಿ ದ್ವೇಷಮಾಡಿ ಅಮೃತವನ್ನು ವಿಷಮಾಡಿಕೊಂಡಿ ದದೆನಲ್ಲಾ ! ಭಗವಂತನ . ಕರುಣೆಯು ಅಪರಿಮಿತವಾದುದು“ ಎಂದಂದುಕೊಂಡನು.

ಮುಖ್ಯವೈದ್ಗನು ಆಸ್ಪತ್ರೆಯಿಂದ ಸುಭದ್ರೆಯನ್ನು ಕರೆದು ಕೊಂಡು ಹೋಗಬಹುದಿಂದೂ, ಅಳೆಗೆ ಸ್ವಲ್ಪ ಸರಿಯಾದ ಆಹಾರ, ವಿಶ್ರಾಂತಿಗಳನ್ನು ಕೊಟ್ಟರೆ ಒಂದು ವಾರದೊಳಗೆ ಸಂಪೂರ್ಣವಾಗಿ ಗುಣವಾಗುವುದೆಂದೂ ಹೇಳಿದನು, ಅದರಂತೆಯೆ ಸುಭದ್ರೆಯನ್ನು ಕರದುಕೊಂಡುಹೋದರು.
*****
ಮುಂದುವರೆಯುವುದು

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...