Home / ಕವನ / ಕವಿತೆ / ಮತ್ತೆ ಮಳೆ ಹೊಯ್ಯಲಿದೆ

ಮತ್ತೆ ಮಳೆ ಹೊಯ್ಯಲಿದೆ

ಮತ್ತೆ ಮಳೆ ಹೊಯ್ಯುವದೆ ? ಬಾಯಾರಿ ಬಿದ್ದ
ಬಾವಿಗಳು ತುಂಬುವವೆ ? ಬಾಡಿ ಬಸವಳಿದ
ನನ್ನ ಹಿತ್ತಲ ಗಿಡದ ಎಲೆಗಳು ಚಿಗುರುವವೆ ?
ಬರಲಿದೆಯೆ ಮೋಡಗಳ ಸಾಲು ? ಕಣ್ತುಂಬಲಿದೆಯೆ
ಮಿಂಚುಗಳ ಆಟ ? ಮೊದಲ ಮಳೆ ಬಿದ್ದು
ಮಣ್ಣು ಘಮ್ಮೆಂದ ಸಂಭ್ರಮ ? ಹರಕು ಕೊಡೆಗಳ
ಹೊಲಿಗೆ ? ತಟ್ಟಿ ಕಟ್ಟುವುದು ? ನೀರು ಸೋರುವಲ್ಲೆಲ್ಲ
ತಕ್ಕ ವ್ಯವಸ್ಥೆ ? ನಿಜ ಇವೆಲ್ಲ ಕಳೆದಿದ್ದೇ ದಾರಿ
ಈ ದಾರಿ ದಾಟಿದ್ದು ಅದೆಷ್ಟೋ ಬಾರಿ ಆದರೂ
ಕಳೆದಿದ್ದು ಕಟ್ಟುವುದು ಮತ್ತೆ ಮತ್ತೆ ಕಟ್ಟುವುದು
ಇದು ನಮ್ಮ- ನಿಮ್ಮ- ಭಾಗ್ಯ ಅದೆಲ್ಲಾ ಸರಿ ಗೆಳೆಯ
ಈಗ ಹೇಗಿದೆ ನಿನ್ನ ಆರೋಗ್ಯ ?

ಮನುಷ್ಯರ ಮಿತಿಗಳ ದಾಟಿ ನನ್ನ ಜ್ವರ ಇನ್ನು ಕೈ
ಬಿಟ್ಟೆವೋ ಎಂಬಂತೆ ಕ್ಷೀಣ ಸ್ವರ ಹೋದ ಹೋದ
ಕಣ್ಣುಗಳು ತುಂಬಿ ಬಂದವು ಜೀವದ ಕನಸುಗಳೆಲ್ಲ
ಕುತ್ತಿಗೆಗೆ ಬಂದವು ಉಕ್ಕಿ ಹರಿಯಿತು ಅಘನಾಶಿನಿ
ಈಸುತ್ತ ಬಂದವು ನೆನಪುಗಳು ಆ ನೆನಪುಗಳಿಗೆ
ನಾನಾ ಸ್ವರೂಪ ಕಲಸಿ ಕಲಸಿ
ಕಣ್ಣೊತ್ತಿ ನಿಂತಿದ್ದು ಮಂಗಳದ ಕುಂಕುಮ ಹೇಳು
ಆ ತಾಯಿ ಯಾರು ? ಅನಿಸುವುದು ನಾನು ಬದುಕುಳಿದಿದ್ದು
ಸಂಕಲ್ಪ ಮಾತ್ರದಿಂದ

ಮತ್ತೆ ಮಳೆ ಹೊಯ್ಯುವುದೆ ? ನನ್ನೂರು ಹಿರೇಗುತ್ತಿ
ಸ್ನಾನದ ಪುಳಕಕ್ಕೆ ಅರಳಿ ಹೂವಾಗುವುದೆ ? ಈಶ್ವರ ಕೆರೆ
ತುಂಬಿ ಎಬ್ಬಿಸುವುದೆ ರೋಮಾಂಚನ ? ಇದೇ ರೀತಿ
ಚೌತಿಯ ತನಕ ಇದ್ದು ಬಿಟ್ಟರೆ ಬಹಳ ಆರಾಮು
ಅನಂತರವೇನೂ ಬೇಡ ಎಂದಲ್ಲ …………….

ಮೃತ್ಯು ಲೋಕ ಬಾ ಎಂದಾಗ ಬದುಕು ಸಿಹಿ ಅನಿಸಿತು
ಇಲ್ಲಿ ಬದುಕುವೆ ಮಾನವನಾಗಿ ಈ ಬದುಕು ನನ್ನದು
ಇದರ ಸೋಲೂ ಗೆಲುವೂ ಸಂಪೂರ್ಣ ನನ್ನದು ಒಮ್ಮೆ
ಕೊಟ್ಟು ನೋಡು ಅವಕಾಶ- ಆಗ
ಎತ್ತರಿಸುವೆ ಆಕಾಶ

ಸ್ವಲ್ಪ ಸಾವಕಾಶ ಬಿದ್ದ ಮಳೆ ಪೂರಾ ನೋಡಿದ್ದೇ ಕೀರ್ತಿ
ಅಲ್ಲ. ನಮ್ಮೂರ ಕೆರೆಗಳ ಪಾಲೂ ಉಂಟಲ್ಲ ? ಬಾ ಎಂದು ಕರೆಯುವ
ಬೆಟ್ಟಗಳು ನವಿಲುಗಳು ಕಪ್ಪೆಗಳು ಇವುಗಳಿಗೆ ಅಭಾರ
ಸಲ್ಲಲೇಬೇಕಲ್ಲ ? ಮುಖ್ಯವಾಗಿ ಇವೆಲ್ಲ ಪ್ರಕೃತಿ ನಿಯಮ
ಇದು ಸತ್ಯ. ಇದು ಸತ್ಯ ನಂಬು

ನಾನಾಗ ಚಿಕ್ಕವನು ಆಗ ಇದ್ದಿದ್ದು ಈ ಮನೆಯಲ್ಲಲ್ಲ ಇದೇ
ಕೇರಿಯಲ್ಲಿ ಕೆಳಗೆ ಎಂಥ ಮಳೇ ಹೇಗೆ ಹರಿಯುತ್ತಿತ್ತು, ನೀರು !
ಆ ನೀರಿನ ಎದುರು ಎದ್ದ ಗುಳ್ಳೆಗಳ ಎದುರು ದಂಗು ದುಗುಡದ ನಾ
ಮನೆ ಅಂಗಳದ ಎರಡನೇ ಮೆಟ್ಟಿಲ ಮೇಲೆ ಆ ಗುಳ್ಳೆಗಳಿಗೆ
ಕೈ ಬೀಸುತ್ತಿದ್ದೆ. ಆ ಗುಳ್ಳೆಗಳದು ಅನಿಯಂತ್ರಿತ ಪ್ರವಾಹ
ಇಂದಿಗೂ ನಾನು ಅದೇ ಹುಡುಗ ಗಡ್ಡ ಮೀಸೆ ಬಂದಿದ್ದು
ನನಗಲ್ಲ ನನ್ನ ದೇಹಕ್ಕೆ

ಮತ್ತೆ ಮಳೆ ಹೊಯ್ಯಲಿದೆ. ಕಲ್ಪನೆಯ ಕಡಲುಗಳು
ತುಂಬಿ ತುಳುಕಲಿವೆ ಹಡಗುಗಳು ಬರಲಿವೆ ದೋಣಿಗಳು
ಬರಲಿವೆ ಆಚೆ ದಡದಿಂದ ಬರುವರು ಹೊಸ ಅತಿಥಿಗಳು
ಬಾ – ಅವರನ್ನು ಸ್ವಾಗತಿಸು ಕುಡಿಯಲು ಬಿಸಿಯೋ ತಣ್ಣಗೋ
ಬನ್ನಿ ಬಟ್ಟೆ ಬದಲಿಸಿ ನಮ್ಮದೂ ನಿಮ್ಮದೂ ಒಂದೇ ಬದುಕು
ಇರುವಷ್ಟು ದಿವಸ ಇದ್ದೇ ಬಿಡುವ ಬಿಡದೇ ಬಿರುಕು
ಇಲ್ಲದಿದ್ದಾಗಲೂ ಇದ್ದಿದ್ದ ಎಂದು ಎದೆ ತುಂಬಿ ಹೇಳಿದರೆ ಸಾಕು
ಅಷ್ಟೇ ಸಾಕು ; ಈ ಮಣ್ಣಿನ ಜೀವಕ್ಕೆ ಇನ್ನೇನು ಬೇಕು ?
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...