Home / ಕವನ / ಕವಿತೆ / ಅಘನಾಶಿನಿ

ಅಘನಾಶಿನಿ

ಇಂದು ಅಘನಾಶಿನಿಯ ಬಗೆಗೆ ಮಾತಾಡುವೆ
ನನ್ನೊಲವಿನ ಅಘನಾಶಿನಿ ಆ ಊರು ನದಿ ಮತ್ತು ದಡ
ಇಲ್ಲಿ ನಾನು ಅವತರಿಸಿದೆ ನಿನ್ನ ಪ್ರೀತಿಯ ಅಘನಾಶಿನಿಗೆ
ಅದರ ಅಪಾರ ಜಲರಾಶಿಗೆ ನನಗೆ ಸ್ಪಷ್ಟ ಕೇಳಿಸುವ
ಆ ಜೀವದ ಮೂಲ ಚೈತನ್ಯದ ನಾಡಿ ಮಿಡಿತಕ್ಕೆ
ಇಲ್ಲಿ ಅಂಬಿಗರು ಹಾಕುವ ಹುಟ್ಟು ಆ ಹುಟ್ಟು
ಚಿಮ್ಮಿಸುವ ನೀರಿನ ಕಣಗಳ ಕುಣಿತ ಆಟಕ್ಕೆ
ಮೌನದಲ್ಲಿ ಭೋರ್ಗರೆಯುವ ಇಲ್ಲಿಯ ಅಲೆಗಳ ಕಲ್ಲುಬಡಿತಕ್ಕೆ
ಭರತಕ್ಕೆ ಇಳಿತಕ್ಕೆ
ನನ್ನ ಭಾವನೆಗಳನ್ನು ಕವಿತೆಗಳನ್ನು ಅಕ್ಷರ ಶಬ್ದಗಳನ್ನು
ಒಪ್ಪಿಸುವೆ ಪ್ರಿಯ ಅಘವಾಶಿನಿ

ಈ ನದಿಯನ್ನು ದಾಟಿ ಯಾರಾರೋ ಬರುವರು
ಅವರು ತಂದಿದ್ದರೆ ಸೈಕಲ್ಲನ್ನು
ಅಂಬಿಗರು ದಡಕ್ಕೆ ಹೊತ್ತು ತರುವರು ದೋಣಿ
ಅಲ್ಲಿಂದ ಇಲ್ಲಿಗೂ ಇಲ್ಲಿಂದ ಅಲ್ಲಿಗೂ
ಹೋಗುತ್ತಲಿರುವುದು

ಗಾಳಿ ಮಳೆಗೆ ಹಾಯಿ ಬಿಚ್ಚಿಕೊಳ್ಳುವುದು
ಅದರ ಸಹಸ್ರ ತೂತುಗಳಲ್ಲಿ ನನ್ನವರ ಬಡತನ
ನಿನ್ನ ಒಡಲಾಳದಲ್ಲಿ
ಯಾವಾವ ಜಾತಿಯ ಮೀನುಗಳು ಹುದುಗಿವೆ
ಇವರ ನಿರಕ್ಷರತೆ ದಾರಿದ್ರ್ಯ ಹಸಿವು ಸರಳ
ಹಾಗೂ ಕಠಿಣ
ಸರಾಯಿ ಘಮ್ಮೆಂದು ಮೂಗಿಗೆ ಬಡಿಯುವ ಬದುಕು
ಯಾವ ಕೈಯಲ್ಲಿ ಬರೆದೆ
ಇವರನ್ನು ದಡದಲ್ಲಿ ಕುಳ್ಳಿರಿಸಿ
ನೀನು ಯಾವಾವ ಲೋಕಕ್ಕೆ ನಡೆವೆ ನಿನ್ನ
ಗುಟ್ಟು ಬಗೆಯಲು ಕಾತರಿಸಿರುವೆ
ಉಪ್ಪು ನೀರಿನ ಒಳಗೂ ಸಿಹಿ
ತುಂಬಿ ತುಳುಕುವುದು ತದಡಿಯ ದಡಕ್ಕೊತ್ತಿ ನಿಂತ
ಲಾಂಚುಗಳು ರಾತ್ರಿಯ ಬೆಳಕಲ್ಲಿ
ದೋಣಿಗಳ ಕಂಡು ನಗಲಾರಂಭಿಸಿವೆ ತಾರೆಗಳು
ನೀರಲ್ಲಿ ಮುಖ ನೋಡಿ ರಾತ್ರಿಯ ಆಟಕ್ಕೆ
ಸಜ್ಜಾಗಿವೆ ತೇಲಿ ತೇಲಿ ಬರುತ್ತಿವೆ ನೆನಪುಗಳು
ಅಘನಾಶಿನಿ ಎಂದಾದರೊಂದು ದಿನ
ಈ ಕವಿತೆ ಪೂರ್ತಿ ಮಾಡುವೆ
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...