Home / ಕವನ / ಕವಿತೆ / ಸಬ್ಬಂಬು ರಾತೂರಿ

ಸಬ್ಬಂಬು ರಾತೂರಿ

ಸಬ್ಬಂಬು ರಾತೂರಿ ಒಬ್ಬಕ್ಕಿ ನಾ ಇದ್ದ|
ನೀವೆಲ್ಲಿ ಹೋಗಿ ಬಂದ್ರಿಽ| ನೀವೆಲ್ಲಿ ಆಡಿ ಬಂದ್ರಿಽ ||೧||

ಜಾಣಿ | ಬೆಟ್ಟಂಬು ಬ್ಯಾಸಗಿ| ಕಣ್ಣೀಗಿ ನಿದ್ದಿಲ್ಲ|
ತನುಗಾಳಿಗ್ಹೋಗಿದ್ದೇವ| ತನುಗಾಳಿಗ್ಹೋಗಿದ್ದೇವ ||೨||

ಎದಿಯ ಮ್ಯಾಲಿನ ಘಾಯಿ ಎಳಿಯ ಚಂದ್ರಮನಂಗ|
ನೀವೆಲ್ಲಿ ಹಾದು ಬಂದ್ರಿಽ| ನೀವೆಲ್ಲಿ ಹೋಗಿ ಬಂದ್ರಿ ||೩||

ಜಾಣಿ| ಬಾಳಿಽಯ ಬನದಾಗ| ಹಾದು ನಾವ್ಬರುವಾಗ|
ಬಾಳಿಽಯ ಗರಿ ತಾಕ್ಯಾವಽ |ಬಾಳಿಽಯ ಗರಿ ತಾಕ್ಯಾವಽ ||೪||

ಹುಬ್ಬ ಹುಬ್ಬಿನ ಘಾಯಿ ಹುಬ್ಬೆಲ್ಲ ಚ್ಯೂರು ಘಾಯಿ|
ನೀವೆಲ್ಲಿ ಹೋಗಿ ಬಂದ್ರಿಽ | ನೀವೆಲ್ಲಿ ಆಡಿ ಬಂದ್ರಿ ||೫||

ಜಾಣಿ | ತ್ವಾಟಿದಾಗಽ ಇರುವ| ನೀಟುಳ್ಳ ಗಜನಿಂಬಿ|
ಗಜನಿಂಬಿ ಗರಿ ತಾಕ್ಯಾವಽ |ಗಜನಿಂಬಿ ಗರಿ ತಾಕ್ಯಾವಽ ||೬||

ನಾರ್ಯಾರ್ಹಚ್ಹಲ್ಲಪುಡಿ| ನಾರ್ಯಾರ್ಹಚ್ಹಲ್ಲಪುಡಿ|
ನಿಮ್ಹಲ್ಲಿಗ್ಯಾಕ್ಹತ್ಯಾವರೀ| ನಿಮ್ಹಲ್ಲಿಗ್ಯಾಕ್ಹತ್ಯಾವರೀ ||೭||

ಜಾಣಿ| ಗೊಲ್ಲರ ಓಣ್ಯಾಗ ಹಾದು ನಾವ್ಬರುವಾಗ|
ಅವರು ಹಲ್ಲಿಗಿ ತಂದ್ಹಚ್ಚಿದರಽ|ಅವರು ಹಲ್ಲಿಗಿ ತಂದ್ಹಚ್ಚಿದರ ||೮||

ಹತ್ತ ವಾರಿಽನ ಹೂವಿನಽ ಶಾಲ್ಗೋಳು|
ಮತ್ತ್ಯಾಕ ಮಾಸಿದವರಿ| ಮತ್ತ್ಯಾಕ ಬೆವತಿದವರಿ ||೯||

ಜಾಣಿ| ಗರಡಿಽಯ ಮನಿಯಾಗ| ಸಗತಿ ನಾ ಹೊಡಿಯಾಗ|
ಕಿರಿಬೆವರ ಬಿಟ್ಟಿದಾವಽ| ಕಿರಿಬೆವರ ಬಿಟ್ಟಿದಾವ ||೧೦||

ಹತ್ತ ವಾರಿಽನ ಮುತ್ತಿಽನ ನಡಕಟ್ಟ|
ಮತ್ತ್ಯಾಕ ಮಾಸಿದವರಿ| ಮತ್ತ್ಯಾಕ ಬೆವತಿದವರಿ ||೧೧||

ಜಾಣಿ| ಚೆಂಡಾಟ ನಾಡಿದಾಗ| ಕೃಷ್ಣರು ಬಂದ್ಹಿಡಿಯಾಗ|
ಬಿದ್ದಲ್ಲಿ ಮಾಸಿದಾವಽ| ಬಿದ್ದಲ್ಲಿ ಮಾಸಿದಾವ ||೧೨||

ಎಷ್ಟೆಂತ ಹೇಳಲಿ ಎಷ್ಟೆಂತ ಕೇಳೂತಿ|
ಕೃಷ್ಣರ ದೇಶಕ್ಹೋಗಿದ್ದೇವಽ| ಕೃಷ್ಣರ ದೇಶಕ್ಹೋಗಿದ್ದೇವಽ |೧೩||

ಭಾಳ ಭಾಳ ಮಾತಾಡತೀದಿ ಬಾಯ್‌ ಪಾಟ್ಲೆ ಬೈತೀದಿ|
ರಂಗಽಗಿ ಬಂದಿ ನೀನು| ಭಾಳ ಪೆಟ್ಟಿಽಗಿ ಬಂದಿ ನೀನು ||೧೪||

ಊರ ಹೊರಗಿನ ನಿಷ್ಠುಳ್ಹಣಮನ ಮುಂದ|
ಆಣಿ ಮಾಡುಣು ನಡಿಯ| ಆಣಿ ಮಾಡೂಣು ನಡಿಯ ||೧೫||
*****

ಹಿಂದಿನ ಹಾಡಿನಂತೆ ಇದರಲ್ಲಾದರೂ ಕ್ರಮದಿಂದ ಪ್ರಶ್ನೋತ್ತರಗಳಿವೆ. ಇಂಥದೊಂದು ಹಾಡು ಗೀತಗೋವಿಂದದಲ್ಲಿದೆ. (“ರಜನಿ ಜನಿತ ಗುರು ಜಾಗರ”.) ರಸಿಕರಿಗೆ ಈ ಹಾಡಿನ ರಹಸ್ಯವು ಸ್ಪಷ್ಟನೇ ಇದೆ. ರೂಢ ಶಬ್ದಗಳ ಅರ್ಥವನ್ನು ಮಾತ್ರ ಇಲ್ಲಿ ಹೇಳಿದೆ.

ಛಂದಸ್ಸು:- ತ್ರಿಪದಿಗೆ ಸಮೀಪನಾದುದು.

ಶಬ್ದಪ್ರಯೋಗಗಳು:– ಸಬ್ಬಂಬು ರಾತೂರಿ = ಕಟ್ಟಿರುಳು, ಬೆಟ್ಟೆಂಬು ಬ್ಯಾಸೀಗಿ=ಕಡುಬೇಸಗೆ. ತನುಗಾಳಿ=ತನುವುಳ್ಳ ಗಾಳಿ ಅಥವಾ ತಂಗಾಳಿ. ಘಾಯ=ಗಾಯ. ಚ್ಯೂರು=ಚಿವುರು. ಹತ್ತು ವಾರ=ಹತ್ತು ಗಜ. ಸಗತಿ ಹೊಡಿ=ಸಾಮು ತೆಗೆ. ಕೃಷ್ಣರು=ಕೃಷ್ಣನಂಥ ಗೆಳೆಯರು(?). ಬಾಯ್‌ ಪಾಟ್ಲೆ=ಮುಖೋದ್ಗತವಾಗಿ.

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...