Home / ಕವನ / ಕವಿತೆ / ಸಬ್ಬಂಬು ರಾತೂರಿ

ಸಬ್ಬಂಬು ರಾತೂರಿ

ಸಬ್ಬಂಬು ರಾತೂರಿ ಒಬ್ಬಕ್ಕಿ ನಾ ಇದ್ದ|
ನೀವೆಲ್ಲಿ ಹೋಗಿ ಬಂದ್ರಿಽ| ನೀವೆಲ್ಲಿ ಆಡಿ ಬಂದ್ರಿಽ ||೧||

ಜಾಣಿ | ಬೆಟ್ಟಂಬು ಬ್ಯಾಸಗಿ| ಕಣ್ಣೀಗಿ ನಿದ್ದಿಲ್ಲ|
ತನುಗಾಳಿಗ್ಹೋಗಿದ್ದೇವ| ತನುಗಾಳಿಗ್ಹೋಗಿದ್ದೇವ ||೨||

ಎದಿಯ ಮ್ಯಾಲಿನ ಘಾಯಿ ಎಳಿಯ ಚಂದ್ರಮನಂಗ|
ನೀವೆಲ್ಲಿ ಹಾದು ಬಂದ್ರಿಽ| ನೀವೆಲ್ಲಿ ಹೋಗಿ ಬಂದ್ರಿ ||೩||

ಜಾಣಿ| ಬಾಳಿಽಯ ಬನದಾಗ| ಹಾದು ನಾವ್ಬರುವಾಗ|
ಬಾಳಿಽಯ ಗರಿ ತಾಕ್ಯಾವಽ |ಬಾಳಿಽಯ ಗರಿ ತಾಕ್ಯಾವಽ ||೪||

ಹುಬ್ಬ ಹುಬ್ಬಿನ ಘಾಯಿ ಹುಬ್ಬೆಲ್ಲ ಚ್ಯೂರು ಘಾಯಿ|
ನೀವೆಲ್ಲಿ ಹೋಗಿ ಬಂದ್ರಿಽ | ನೀವೆಲ್ಲಿ ಆಡಿ ಬಂದ್ರಿ ||೫||

ಜಾಣಿ | ತ್ವಾಟಿದಾಗಽ ಇರುವ| ನೀಟುಳ್ಳ ಗಜನಿಂಬಿ|
ಗಜನಿಂಬಿ ಗರಿ ತಾಕ್ಯಾವಽ |ಗಜನಿಂಬಿ ಗರಿ ತಾಕ್ಯಾವಽ ||೬||

ನಾರ್ಯಾರ್ಹಚ್ಹಲ್ಲಪುಡಿ| ನಾರ್ಯಾರ್ಹಚ್ಹಲ್ಲಪುಡಿ|
ನಿಮ್ಹಲ್ಲಿಗ್ಯಾಕ್ಹತ್ಯಾವರೀ| ನಿಮ್ಹಲ್ಲಿಗ್ಯಾಕ್ಹತ್ಯಾವರೀ ||೭||

ಜಾಣಿ| ಗೊಲ್ಲರ ಓಣ್ಯಾಗ ಹಾದು ನಾವ್ಬರುವಾಗ|
ಅವರು ಹಲ್ಲಿಗಿ ತಂದ್ಹಚ್ಚಿದರಽ|ಅವರು ಹಲ್ಲಿಗಿ ತಂದ್ಹಚ್ಚಿದರ ||೮||

ಹತ್ತ ವಾರಿಽನ ಹೂವಿನಽ ಶಾಲ್ಗೋಳು|
ಮತ್ತ್ಯಾಕ ಮಾಸಿದವರಿ| ಮತ್ತ್ಯಾಕ ಬೆವತಿದವರಿ ||೯||

ಜಾಣಿ| ಗರಡಿಽಯ ಮನಿಯಾಗ| ಸಗತಿ ನಾ ಹೊಡಿಯಾಗ|
ಕಿರಿಬೆವರ ಬಿಟ್ಟಿದಾವಽ| ಕಿರಿಬೆವರ ಬಿಟ್ಟಿದಾವ ||೧೦||

ಹತ್ತ ವಾರಿಽನ ಮುತ್ತಿಽನ ನಡಕಟ್ಟ|
ಮತ್ತ್ಯಾಕ ಮಾಸಿದವರಿ| ಮತ್ತ್ಯಾಕ ಬೆವತಿದವರಿ ||೧೧||

ಜಾಣಿ| ಚೆಂಡಾಟ ನಾಡಿದಾಗ| ಕೃಷ್ಣರು ಬಂದ್ಹಿಡಿಯಾಗ|
ಬಿದ್ದಲ್ಲಿ ಮಾಸಿದಾವಽ| ಬಿದ್ದಲ್ಲಿ ಮಾಸಿದಾವ ||೧೨||

ಎಷ್ಟೆಂತ ಹೇಳಲಿ ಎಷ್ಟೆಂತ ಕೇಳೂತಿ|
ಕೃಷ್ಣರ ದೇಶಕ್ಹೋಗಿದ್ದೇವಽ| ಕೃಷ್ಣರ ದೇಶಕ್ಹೋಗಿದ್ದೇವಽ |೧೩||

ಭಾಳ ಭಾಳ ಮಾತಾಡತೀದಿ ಬಾಯ್‌ ಪಾಟ್ಲೆ ಬೈತೀದಿ|
ರಂಗಽಗಿ ಬಂದಿ ನೀನು| ಭಾಳ ಪೆಟ್ಟಿಽಗಿ ಬಂದಿ ನೀನು ||೧೪||

ಊರ ಹೊರಗಿನ ನಿಷ್ಠುಳ್ಹಣಮನ ಮುಂದ|
ಆಣಿ ಮಾಡುಣು ನಡಿಯ| ಆಣಿ ಮಾಡೂಣು ನಡಿಯ ||೧೫||
*****

ಹಿಂದಿನ ಹಾಡಿನಂತೆ ಇದರಲ್ಲಾದರೂ ಕ್ರಮದಿಂದ ಪ್ರಶ್ನೋತ್ತರಗಳಿವೆ. ಇಂಥದೊಂದು ಹಾಡು ಗೀತಗೋವಿಂದದಲ್ಲಿದೆ. (“ರಜನಿ ಜನಿತ ಗುರು ಜಾಗರ”.) ರಸಿಕರಿಗೆ ಈ ಹಾಡಿನ ರಹಸ್ಯವು ಸ್ಪಷ್ಟನೇ ಇದೆ. ರೂಢ ಶಬ್ದಗಳ ಅರ್ಥವನ್ನು ಮಾತ್ರ ಇಲ್ಲಿ ಹೇಳಿದೆ.

ಛಂದಸ್ಸು:- ತ್ರಿಪದಿಗೆ ಸಮೀಪನಾದುದು.

ಶಬ್ದಪ್ರಯೋಗಗಳು:– ಸಬ್ಬಂಬು ರಾತೂರಿ = ಕಟ್ಟಿರುಳು, ಬೆಟ್ಟೆಂಬು ಬ್ಯಾಸೀಗಿ=ಕಡುಬೇಸಗೆ. ತನುಗಾಳಿ=ತನುವುಳ್ಳ ಗಾಳಿ ಅಥವಾ ತಂಗಾಳಿ. ಘಾಯ=ಗಾಯ. ಚ್ಯೂರು=ಚಿವುರು. ಹತ್ತು ವಾರ=ಹತ್ತು ಗಜ. ಸಗತಿ ಹೊಡಿ=ಸಾಮು ತೆಗೆ. ಕೃಷ್ಣರು=ಕೃಷ್ಣನಂಥ ಗೆಳೆಯರು(?). ಬಾಯ್‌ ಪಾಟ್ಲೆ=ಮುಖೋದ್ಗತವಾಗಿ.

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...