ಗಂಗೀ ಗೌರೀ ಹಾಡು – ೨

ಅಡವಿಯನ್ನಿ ಮರನೆ
ಗಿಡವ ಬನ್ನಿ ಮರನೆ
ಅಡವ್ಯಾಗೆ ಇರುವಂಥ
ಸಾರಂಗ ಸರದೂಳಿ
ಹೆಬ್ಬುಽಲಿ ಹುಲಿಕರಡಿ
ಎಡಬಲ ಹಾಂವುತೇಳೋ ದೇವಾ|
ಎನ್ನ ಮೇಲಾಡಿ ಶ್ರೀಗಂಗೀನ ತಂದಿ|
ಎನ್ನ ತಪ್ಪೇನು ಕಂಡಿ ||೧||

ಪಟ್ಟಣದ ದಾರಿ ಮ್ಯಾಲ
ಹಿಟ್ಟಗಳ್ಲಿನ ಮ್ಯಾಲ
ಕತ್ತಿಽಯ ವರಿಯಂಗ
ವರಿಯವರು ಇದ್ದಲ್ಲಿ
ಇಪ್ಪತ್ತು ಗಾಂವುದ ತಪನಿದ್ದೊಽ ದೇವಾ
ಎನ್ನ ಮೇಲಾಡಿ ಶ್ರೀಗಂಗೀನ ತಂದಿ|
ಎನ್ನ ತಪ್ಪೇನು ಕಂಡಿ ||೨||

ಸಾರಂಗ ದಾರಿಮ್ಯಾಲ
ಸಾಲಗಲ್ಲಿನ ಮ್ಯಾಲ
ಛೂಜಿಽಯ ಮಣಿಯಂಗ
ಮಣಿಯವರು ಇದ್ದಲ್ಲಿ
ನಾಲ್ಪತ್ತು ಗಾಂವುರದ ತಪನಿದ್ದೊಽ ದೇವಾ
ಎನ್ನ ಮೇಲಾಡಿ ಶ್ರೀಗಂಗೀನ ತಂದಿ |
ಎನ್ನ ತಪ್ಪೇನು ಕಂಡಿ ||೩||

ತನುವ ಇಲ್ಲದ ಗಂಗಿ
ಥಣ್ಣೀರಿಗ್ಹೋದಾಗ
ನಿಂಬೀಹಣ್ಣಿಽನಂಗ
ತುಂಬಿಽದ ಕುಚಗಳು
ಬಂದ ಕುಂತಾಳ ಜಡಿಯೊಳಗೋ ದೇವಾ
ಎನ್ನ ಮೇಲಾಡಿ ಶ್ರೀಗಂಗೀನ ತಂದಿ |
ಎನ್ನ ತಪ್ಪೇನು ಕಂಡಿ ||೪||

ಒಟ್ಟಿಽದ ಭಣವಿಽಗಿ
ಕಿಚಗುಳ್ಳ ಬಿದ್ದಂಗ
ಮುತ್ತಿಽನ ರಾಸಿಽಗಿ
ಕಳ್ಳರು ಬಿದ್ದಂಗ
ಚಿಕ್ಕಂದಿನೊಗತಾನಾ
ಮತ್ತೊಬ್ಳಿಗಾಯ್ತಂದ
ಹೊಟ್ಯಾಗ ಭೆಂಕಿ ಬರಕ್ಯಾದೋ ದೇವಾ
ಎನ್ನ ಮೇಲಾಡಿ ಶ್ರೀಗಂಗೀನ ತಂದಿ |
ಎನ್ನ ತಪ್ಪೇನು ಕಂಡಿ ||೫||
*****

ಇದೊಂದು ಭಾವಗೀತೆ. ಲೆಕ್ಕದಂತೆ ಮುಂದಿನ ವಿಭಾಗದಲ್ಲಿ ಸೇರಿಸಬೇಕಿತ್ತು. ಅದರೆ ಈ ನಾಡಿನ ವಿಷಯವು ಪ್ರಣಯಾಂತರದ ಪರಿತಾಪವನ್ನು ಸ್ಪಷ್ಟಗೊಳಿಸುವುದರಿಂದ ಈ ನಿಭಾಗದಲ್ಲಿಯೇ ಸೇರಿಸಬೇಕಾಯಿತು. ಇದರಲ್ಲಿ ಗಂಗೆಗೆ ಶಿವನೊಲಿದದ್ದಕ್ಕಾಗಿ ಗೌರಿಯು ಅನುತಾಪಗೊಳ್ಳುವಳು. ಹಿಂದೆ ಗಿರಿರಾಜನ ಮನೆಯಲ್ಲಿದ್ದಾಗ ಶಿವನ ಸಲುವಾಗಿ ಮಾಡಿದ ಘೋರತಪಶ್ಚರ್ಯವನ್ನೆಲ್ಲ ನೆನಪಿಗೆ ತಂದುಕೊಟ್ಟು ಶಿವನ ಎದುರಿಗೇ ಕನವರಿಸುತ್ತಾಳೆ.

ಆನ್ನೀಮರ, ಬನ್ನೀಮರ ಮುಂತಾದವುಗಳಿಂದ ತುಂಬಿದ ಕಟ್ಟಡವಿಯೊಳಗೆ ಹಿಂಸ್ರಪಶುಗಳ ಮಧ್ಯದಲ್ಲಿ ತಾನು ತಪಗೈದೆನೆಂದು ಮೊದಲನೆಯ ನುಡಿಯಲ್ಲಿ, ಸ್ವರ್ಗನಗರಿಯ ದಾರಿಯಲ್ಲಿ ಕಲ್ಲುಬಂಡೆಗಳ ಮೇಲೆ ಕುಳಿತು, ಬಗೆ ಬಗೆಯ ರಾಕ್ಷಸರ ತೊಂದರೆಯನ್ನು ಸಹಿಸಿ, ಹತ್ತಿಪ್ಪತ್ತು ಯುಗಗಳ ವರೆಗೆ ತಪಗೈದೆನೆಂದು ಎರಡನೆಯ ಮೂರನೆಯ ನುಡಿಗಳಲ್ಲಿ ಹೇಳುತ್ತಾಳೆ.

ಛಂದಸ್ಸು:- ಲಲಿತರಗಳೆ

ಶಬ್ದಪ್ರಯೋಗಗಳು:- ಸಾರಂಗಸರದೂಳಿ=ಸಾರಂಗ ಮತ್ತು ಶಾರ್ದೂಲ. ಎನ್ನ ಮೇಲಾಡಿ=ನನ್ನ ಮೇಲೆ ಮೇಲಾಟಿಮಾಡಿ, ಅಥವಾ ನನಗಿಂತ ಮಿಗಿಲೆಂದು. ಪಟ್ಟಣದ ದಾರಿ=ಕೈಲಾಸ ಪಟ್ಟಣದ ದಾರಿ. ಕತ್ತೀಯ ವರಿಯವರು=ಚರ್ಮದ ಚೀಲದಲ್ಲಿ ಮುಚ್ಚಿದ ಖಡ್ಗವನ್ನು ಧರಿಸಿದ ಅಮಾನುಷರು. ಗಾಂವದ=ಗಾವುದ. ಈ ಶಬ್ದವನ್ನು ಇಲ್ಲಿ `ಯುಗ’ ಎಂಬ ಅರ್ಧದಲ್ಲಿ ಉಪಯೋಗಿಸಿದೆ. ಸಾರಂಗ ದಾರಿ=ಸ್ವರ್ಗ ದಾರಿ. ತಪನಿದ್ದ=ತಪವಿದ್ದೆನು. ಭಣವಿ=ಸೊಪ್ಪಿನ ಬಣಿವೆ ಅಧವಾ ಒಟ್ಟಲು. ಕಿಚಗುಳ್ಳ=ಕಿಚ್ಚಿನ ಬೆರಣಿ, ಎಂದರೆ ಕೆಂಡ. ಒಗತನ=ದಾಂಪತ್ಯ. ಬರಕ್ಯಾದ=ಸುರುವಿದೆ.

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಒಲವೇ ನನ್ನೊಲವೇ
Next post ಸಾನಿಯಾ ಮಿರ್‍ಜಾ

ಸಣ್ಣ ಕತೆ

  • ದೇವರೇ ಪಾರುಮಾಡಿದಿ ಕಂಡಿಯಾ

    "Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

  • ಒಂದು ಹಿಡಿ ಪ್ರೀತಿ

    ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…

  • ಕಳಕೊಂಡವನು

    ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…

cheap jordans|wholesale air max|wholesale jordans|wholesale jewelry|wholesale jerseys