Home / ಕವನ / ಭಾವಗೀತೆ / ಕೂಸಿನ ಹಾಡು

ಕೂಸಿನ ಹಾಡು

ಕೂಸ ಕೂಸೆಂದೇನ ಕುಂದಽಲದ್ಹರಳಿಽಗಿ|
ಮಂಡಲದಾಗಾಡೊ ಮಗನ ಗೋವಿಂದಾ||
ಕೂಸ ಕಂಡೀಽರೆ| ಅವ್ವ್‌ ನನ್ನ|
ಬಾಲಽನ ಕಂಡಿಽರೆ ||೧||

ಸಣ್ಣಾಗಿ ಬೀಸಿಽದ ಸಂಣ್ಹಲ್ಲಿ ಮಾಡಿಽದ|
ಬೆಣ್ಹೆಚ್ಚಿ ರೊಟ್ಟೀ ನಾ ಕುಡುವೆನವ್ವಾ||
ಕೂಸ ಕಂಡಿಽರೇ| ಅವ್‌ ನನ್ನ|
ಬಾಲಽನ ಕಂಡಿಽರೆ ||೨||

ಹೆಸರಂಗಿ ತೊಡೆಸಿಽದ ಹಾಲಗಡಗ ಇಡಸಿಽದ|
ಕುಸಲದ ಟಿಪ್ಪಿಽಗಿ ತೆಲಿಮ್ಯಾಲಿತ್ತವ್ವಾ||
ಕೂಸ ಕಂಡೀಽರೇ| ‌ಅವ್ವ್‌ ನನ್ನ|
ಬಾಲಽನ ಕಂಡಿಽರೆ ||೩||

ಭಾಂಯಿ ಮ್ಯಾಲ ನಿಂತಿತ್ತು ಬಾಯಿ ಮಾಡಿ ಅಳತಿತ್ತು|
ಕಂಡ ಬಾಲ್ಯಾರಿಗಿಽ ಕೈಮಾಡಿತವ್ವಾ ||
ಕೂಸ ಕಂಡೀಽರೇ| ‌ಅವ್ವ್‌ ನನ್ನ|
ಬಾಲಽನ ಕಂಡಿಽರೆ ||೪||

ಬಿಳಿ ಅಂಗಿ ತೊಡಸಿಽದ ಬಿಳಿಮುತ್ತ ನಿಡಸಿಽದ
ಅಂಗಳದಾಗ ಕೂಸಾ ಮಾಯಾಯಿತವ್ವಾ||
ಕೂಸ ಕಂಡೀಽರೇ| ‌ಅವ್ವ್‌ ನನ್ನ|
ಬಾಲಽನ ಕಂಡಿಽರೆ ||೫||

ಗಂಡೆಹೆಂಡರು ಕೂಡಿ ಖಂಡಗ ಹರಕೀ ಮಾಡಿ|
ನಾ ಗಂಡಸಮಗನಽ ಹೆಡೆದಿದ್ದ ನವ್ವಾ|| ಕೂಸ ಕಂಡೀಽರೇ| ‌ಅವ್ವ್‌ ನನ್ನ|
ಬಾಲಽನ ಕಂಡಿಽರೆ ||೬||

ಜನವ ಜಾತ್ರಿಽಗ್ಹೊಯ್ತ ನಾನೂ ಜಾತ್ರಿಽಗ್ಹ್ವಾದ|
ಜನಕಿಲ್ಲದ ಕೇಡಾ ನನಗಾಯಿತವ್ವಾ ||
ಕೂಸ ಕಂಡೀಽರೇ| ‌ಅವ್ವ್‌ ನನ್ನ|
ಬಾಲಽನ ಕಂಡಿಽರೆ ||೭||
*****

ಭಾವಗೀತಗಳು

ಹೃದಯೋದ್ರೇಕಕ್ಕೆ ಕಾರಣವಾಗುವ ಯಾವುದೊಂದು ಒಂಟಿ ಸಂಗತಿಯನ್ನು ಕುರಿತು ಅದರ ಬೇರೆಬೇರೆ ಮಗ್ಗಲುಗಳನ್ನು ಒಂದೊಂದಾಗಿ ಬಣ್ಣಿಸುತ್ತ ಬಂದ ಹಾಗೆಲ್ಲ ಶ್ರೋತೃವಿನ ಅಂತರಂಗದಲ್ಲಿ ಭಾವಾವೇಗವು ಏಳುತ್ತದೆ. ಇಂತಹ ಹಾಡುಗಳಿಗೆ “ಭಾವಗೀತಗಳೆ”ಂದು ನಾಮಕರಣ ಮಾಡಲಾಗಿದೆ. ಈ ಹಾಡುಗಳಲ್ಲಿ ಒಂದೇ ಪಾತ್ರವು ತನ್ನ ಸ್ವಗತವನ್ನು ಕಲ್ಲು ಕರಗುವಂತೆ ಬಣ್ಣಿ ಸುತ್ತಿರುವುದುಂಟು.

ಕೂಸಿನ ಹಾಡು

ಜಾತ್ರೆಗೆ ಹೋದ ಒಬ್ಬ ಹೆಣ್ಣುಮಗಳು ಬಾವಿಯ ದಂಡೆಯ ಮೇಲೆ ನೀರು ಕುಡಿಯುವಾಗ ಜನರ ದಟ್ಟಣೆಯಲ್ಲಿ ಅವಳ ಕೂಸು ತಪ್ಪಿಸಿಕೊಂಡು ಬಿಟ್ಟಿದೆ. ಎಷ್ಟು ಹುಡುಕಿದರೂ ಸಿಗದಂತಾಗಲು ಅವಳು ನೆನೆನೆನೆಸಿ ಅಳುತ್ತಾಳೆ.

ಛಂದಸ್ಸು:— ತ್ರಿಪದಿಗೆ ಸಮೀಪವಾಗಿದೆ.

ಶಬ್ದಪ್ರಯೋಗಗಳು:- ಕುಂದಲ=ಕುಂದಣ. ಮಂಡಲ=ಬರಿದಾದ ಸ್ಥಳ. ಹಲ್ಲಿ=ಚಿಕ್ಕ ರೊಟ್ಟಿ. ಇಡಸೀದ=ಇಡಿಸಿರುವೆನು. ತೆಲಿ=ತಲೆ. ಹ್ವಾದ=ಹೋದೆನು.

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...