Home / ಕವನ / ಭಾವಗೀತೆ / ಎತ್ತಿನ ಹಾಡು

ಎತ್ತಿನ ಹಾಡು

ಮಾಗಿಽಯ ಹೊಡಿಯಾಗ
ನನ ಕೈಲೆ ಮಾಯದಿಂದ ಮಾಡಿಸಿಕೊಂಡ್ಯಾ
ನಾ ಹೋಗಿ ಒಂದ
ತೆನಿಧಂಟ ತಿಂದರ
ಕಲ್ಲಕಲ್ಲಿಲೆ ಹೊಡದ್ಯೊ| ನಮ ಜೀವ ಹೋದಾವೊ
ಕೈಲಾಸಕ ||೧||

ನಾ ಒಂದೆ ಬಿತ್ತಿಽದಽ ನಾ ಒಂದ ಬೆಳದೀದ
ನಾ ಹೋಗಿ ಒಂದ
ಹೊಡೆಧಂಟ ತಿಂದರ
ಬಡಬಡಗಿಲೆ ಹೊಡೆದ್ಯೊ | ನಮ ಜೀವ ಹೋದಾವೊ
ಕೈಲಾಸಕ ||೨||

ಹೆತ್ತಿಕಾಳೆ ಕುಡು ಅಂದ್ರಽ
ನಿನ ಮಡದಿ ಅತ್ತ ಮಾರಿ ತಿರುವ್ಯಾಳ
ಹತ್ತಗೊಳಗ ತಿನ್ನಂದ್ರ
ಖಂಡಽಗ ತಿನ್ನುವ
ತುಂಡಿನಽ ತಂದ್ಹೊಡೊ | ಜೀವ ಹೋದಾವೊ
ಕೈಲಾಸಕ ||೩||

ಹಿಂಡಿಽಯ ಕುಡು ಅಂದಽ
ನಿನ ಮಡದಿ ಮೂಗನೆ ಮುರದಾಳ
ಖಂಡಽಗ ತಿನ್ನಂದ್ರ
ಇಖ್ಖಂಡ್ಗ ತಿನ್ನಂಥ
ತುಂಡಿನಽ ತಂದ್ಹೊಡೊ | ನಮ ಜೀವ ಹೋದಾವೊ
ಕೈಲಾಸಕ ||೪||

ಇಕ್ಕಿದರ ಹೆಂಡಿನಾದಿನಽ | ಹಚ್ಚಿದರ ಕುಳ್ಳ ನಾದಿನಽ
ದೇವಽರ ಮುಂದಿಽನ
ಪರಸಾದ ನಾ ಆದ
ಮತ್ತ್ಯಾತಕಾದೇನಽ | ನಮ ಜೀನ ಹೋದಾವ
ಕೈಲಾಸಕ ||೫||

ಸತ್ತರ ತೊಗಲಾದೆನಽ | ಮೆಟ್ಟಿದರ ಕೆರವಾದೆನಽ |
ಹೆಗಲ ಮ್ಯಾಲಾಡಂತ
ಬಾರಕೋಲ ನಾ ಆದ
ಮತ್ತ್ಯಾತಕಾದೇನ | ನಮ ಜೀವ ಹೋದಾವ
ಕೈಲಾಸಕ ||೬||
*****

ಎತ್ತಿನ ಕಡೆಯಿಂದ ಅಡವಿಯಲ್ಲಿ ಬೇಕುಬೇಕಾದಷ್ಟು ಕೆಲಸವನ್ನು ಮಾಡಿಸಿಕೊಂಡು ಅದರ ಸುಖದ ಕಡೆಗೆ ಮಾತ್ರ ಅಲಕ್ಷ್ಯವನ್ನು ಮಾಡಿದರೆ ಅದಕ್ಕೆ ಎಷ್ಟು ದುಃಖವಾಗಬೇಡ! ತಮ್ಮ ಕೆಲಸಗಳನ್ನು ಮಂದಿಯ ಕಡೆಯಿಂದ ಬೇಕಾದ ಹಾಗೆ ಮಾಡಿಸಿಕೊಂಡು, ಅವರ ಅನುವು-ಆಪತ್ತುಗಳ ಕಡೆಗೆ ನೋಡುವ ಪ್ರಸಂಗ ಬಂದಾಗ ಮೋರೆ ತಿರುವುವ ಸ್ವಭಾವವು ಬಹು ಜನರಲ್ಲಿರುತ್ತದೆ. ಅಂಥರಿಗೆ ಚುಚ್ಚುವಂತೆ ಈ ಹಾಡು ಇದೆ. ಇದಲ್ಲದೆ ಒಕ್ಕಲಿಗರ ಮನೆಯಲ್ಲಿ ದನ-ಕರುಗಳ ನೀರು-ಮೇವುಗಳ ಚಿಂತೆಯು ಮನೆಯ ಒಡತಿಗೆ ಇಲ್ಲದೆ ಹೋಗಬಾರದೆಂಬುದಕ್ಕೂ ಈ ಹಾಡು ಉಸಯುಕ್ತವಾಗಿದೆಯೆಂದು ತೋರುತ್ತದೆ.

ಛಂದಸ್ಸು:- ತ್ರಿಪದಿಯ ಜಾತಿಗೆ ಸೇರಿದ್ದು.

ಶಬ್ದ ಪ್ರಯೋಗಗಳು:— ಮಾಗಿ=ಮಾಗಿಯ ಕಾಲದ ಎಂದರೆ ಮಾಘ ಮಾಸದ ನೇಗಿಲು ಗೆಲಸ. ಮಾಯದಿಂದ=ಪ್ರೀತಿಯಿಂದ. ಧಂಟಿ=ದಂಟು. ತುಂಡೀನ=ಸೊಕ್ಕಿದವಳನ್ನು. ಹೆಂಡಿ=ಸೆಗಣಿ. ಕುಳ್ಳ=ಬರಣಿ. ಪರಸಾದ=ಧೂಪದ ಬೂದಿ (ಪ್ರಸಾದ). ಬಾರಕೋಲ=ಚಬಕ

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...