Home / ಕವನ / ಭಾವಗೀತೆ / ಎತ್ತಿನ ಹಾಡು

ಎತ್ತಿನ ಹಾಡು

ಮಾಗಿಽಯ ಹೊಡಿಯಾಗ
ನನ ಕೈಲೆ ಮಾಯದಿಂದ ಮಾಡಿಸಿಕೊಂಡ್ಯಾ
ನಾ ಹೋಗಿ ಒಂದ
ತೆನಿಧಂಟ ತಿಂದರ
ಕಲ್ಲಕಲ್ಲಿಲೆ ಹೊಡದ್ಯೊ| ನಮ ಜೀವ ಹೋದಾವೊ
ಕೈಲಾಸಕ ||೧||

ನಾ ಒಂದೆ ಬಿತ್ತಿಽದಽ ನಾ ಒಂದ ಬೆಳದೀದ
ನಾ ಹೋಗಿ ಒಂದ
ಹೊಡೆಧಂಟ ತಿಂದರ
ಬಡಬಡಗಿಲೆ ಹೊಡೆದ್ಯೊ | ನಮ ಜೀವ ಹೋದಾವೊ
ಕೈಲಾಸಕ ||೨||

ಹೆತ್ತಿಕಾಳೆ ಕುಡು ಅಂದ್ರಽ
ನಿನ ಮಡದಿ ಅತ್ತ ಮಾರಿ ತಿರುವ್ಯಾಳ
ಹತ್ತಗೊಳಗ ತಿನ್ನಂದ್ರ
ಖಂಡಽಗ ತಿನ್ನುವ
ತುಂಡಿನಽ ತಂದ್ಹೊಡೊ | ಜೀವ ಹೋದಾವೊ
ಕೈಲಾಸಕ ||೩||

ಹಿಂಡಿಽಯ ಕುಡು ಅಂದಽ
ನಿನ ಮಡದಿ ಮೂಗನೆ ಮುರದಾಳ
ಖಂಡಽಗ ತಿನ್ನಂದ್ರ
ಇಖ್ಖಂಡ್ಗ ತಿನ್ನಂಥ
ತುಂಡಿನಽ ತಂದ್ಹೊಡೊ | ನಮ ಜೀವ ಹೋದಾವೊ
ಕೈಲಾಸಕ ||೪||

ಇಕ್ಕಿದರ ಹೆಂಡಿನಾದಿನಽ | ಹಚ್ಚಿದರ ಕುಳ್ಳ ನಾದಿನಽ
ದೇವಽರ ಮುಂದಿಽನ
ಪರಸಾದ ನಾ ಆದ
ಮತ್ತ್ಯಾತಕಾದೇನಽ | ನಮ ಜೀನ ಹೋದಾವ
ಕೈಲಾಸಕ ||೫||

ಸತ್ತರ ತೊಗಲಾದೆನಽ | ಮೆಟ್ಟಿದರ ಕೆರವಾದೆನಽ |
ಹೆಗಲ ಮ್ಯಾಲಾಡಂತ
ಬಾರಕೋಲ ನಾ ಆದ
ಮತ್ತ್ಯಾತಕಾದೇನ | ನಮ ಜೀವ ಹೋದಾವ
ಕೈಲಾಸಕ ||೬||
*****

ಎತ್ತಿನ ಕಡೆಯಿಂದ ಅಡವಿಯಲ್ಲಿ ಬೇಕುಬೇಕಾದಷ್ಟು ಕೆಲಸವನ್ನು ಮಾಡಿಸಿಕೊಂಡು ಅದರ ಸುಖದ ಕಡೆಗೆ ಮಾತ್ರ ಅಲಕ್ಷ್ಯವನ್ನು ಮಾಡಿದರೆ ಅದಕ್ಕೆ ಎಷ್ಟು ದುಃಖವಾಗಬೇಡ! ತಮ್ಮ ಕೆಲಸಗಳನ್ನು ಮಂದಿಯ ಕಡೆಯಿಂದ ಬೇಕಾದ ಹಾಗೆ ಮಾಡಿಸಿಕೊಂಡು, ಅವರ ಅನುವು-ಆಪತ್ತುಗಳ ಕಡೆಗೆ ನೋಡುವ ಪ್ರಸಂಗ ಬಂದಾಗ ಮೋರೆ ತಿರುವುವ ಸ್ವಭಾವವು ಬಹು ಜನರಲ್ಲಿರುತ್ತದೆ. ಅಂಥರಿಗೆ ಚುಚ್ಚುವಂತೆ ಈ ಹಾಡು ಇದೆ. ಇದಲ್ಲದೆ ಒಕ್ಕಲಿಗರ ಮನೆಯಲ್ಲಿ ದನ-ಕರುಗಳ ನೀರು-ಮೇವುಗಳ ಚಿಂತೆಯು ಮನೆಯ ಒಡತಿಗೆ ಇಲ್ಲದೆ ಹೋಗಬಾರದೆಂಬುದಕ್ಕೂ ಈ ಹಾಡು ಉಸಯುಕ್ತವಾಗಿದೆಯೆಂದು ತೋರುತ್ತದೆ.

ಛಂದಸ್ಸು:- ತ್ರಿಪದಿಯ ಜಾತಿಗೆ ಸೇರಿದ್ದು.

ಶಬ್ದ ಪ್ರಯೋಗಗಳು:— ಮಾಗಿ=ಮಾಗಿಯ ಕಾಲದ ಎಂದರೆ ಮಾಘ ಮಾಸದ ನೇಗಿಲು ಗೆಲಸ. ಮಾಯದಿಂದ=ಪ್ರೀತಿಯಿಂದ. ಧಂಟಿ=ದಂಟು. ತುಂಡೀನ=ಸೊಕ್ಕಿದವಳನ್ನು. ಹೆಂಡಿ=ಸೆಗಣಿ. ಕುಳ್ಳ=ಬರಣಿ. ಪರಸಾದ=ಧೂಪದ ಬೂದಿ (ಪ್ರಸಾದ). ಬಾರಕೋಲ=ಚಬಕ

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...