Home / ಕವನ / ಭಾವಗೀತೆ / ಎತ್ತಿನ ಹಾಡು

ಎತ್ತಿನ ಹಾಡು

ಮಾಗಿಽಯ ಹೊಡಿಯಾಗ
ನನ ಕೈಲೆ ಮಾಯದಿಂದ ಮಾಡಿಸಿಕೊಂಡ್ಯಾ
ನಾ ಹೋಗಿ ಒಂದ
ತೆನಿಧಂಟ ತಿಂದರ
ಕಲ್ಲಕಲ್ಲಿಲೆ ಹೊಡದ್ಯೊ| ನಮ ಜೀವ ಹೋದಾವೊ
ಕೈಲಾಸಕ ||೧||

ನಾ ಒಂದೆ ಬಿತ್ತಿಽದಽ ನಾ ಒಂದ ಬೆಳದೀದ
ನಾ ಹೋಗಿ ಒಂದ
ಹೊಡೆಧಂಟ ತಿಂದರ
ಬಡಬಡಗಿಲೆ ಹೊಡೆದ್ಯೊ | ನಮ ಜೀವ ಹೋದಾವೊ
ಕೈಲಾಸಕ ||೨||

ಹೆತ್ತಿಕಾಳೆ ಕುಡು ಅಂದ್ರಽ
ನಿನ ಮಡದಿ ಅತ್ತ ಮಾರಿ ತಿರುವ್ಯಾಳ
ಹತ್ತಗೊಳಗ ತಿನ್ನಂದ್ರ
ಖಂಡಽಗ ತಿನ್ನುವ
ತುಂಡಿನಽ ತಂದ್ಹೊಡೊ | ಜೀವ ಹೋದಾವೊ
ಕೈಲಾಸಕ ||೩||

ಹಿಂಡಿಽಯ ಕುಡು ಅಂದಽ
ನಿನ ಮಡದಿ ಮೂಗನೆ ಮುರದಾಳ
ಖಂಡಽಗ ತಿನ್ನಂದ್ರ
ಇಖ್ಖಂಡ್ಗ ತಿನ್ನಂಥ
ತುಂಡಿನಽ ತಂದ್ಹೊಡೊ | ನಮ ಜೀವ ಹೋದಾವೊ
ಕೈಲಾಸಕ ||೪||

ಇಕ್ಕಿದರ ಹೆಂಡಿನಾದಿನಽ | ಹಚ್ಚಿದರ ಕುಳ್ಳ ನಾದಿನಽ
ದೇವಽರ ಮುಂದಿಽನ
ಪರಸಾದ ನಾ ಆದ
ಮತ್ತ್ಯಾತಕಾದೇನಽ | ನಮ ಜೀನ ಹೋದಾವ
ಕೈಲಾಸಕ ||೫||

ಸತ್ತರ ತೊಗಲಾದೆನಽ | ಮೆಟ್ಟಿದರ ಕೆರವಾದೆನಽ |
ಹೆಗಲ ಮ್ಯಾಲಾಡಂತ
ಬಾರಕೋಲ ನಾ ಆದ
ಮತ್ತ್ಯಾತಕಾದೇನ | ನಮ ಜೀವ ಹೋದಾವ
ಕೈಲಾಸಕ ||೬||
*****

ಎತ್ತಿನ ಕಡೆಯಿಂದ ಅಡವಿಯಲ್ಲಿ ಬೇಕುಬೇಕಾದಷ್ಟು ಕೆಲಸವನ್ನು ಮಾಡಿಸಿಕೊಂಡು ಅದರ ಸುಖದ ಕಡೆಗೆ ಮಾತ್ರ ಅಲಕ್ಷ್ಯವನ್ನು ಮಾಡಿದರೆ ಅದಕ್ಕೆ ಎಷ್ಟು ದುಃಖವಾಗಬೇಡ! ತಮ್ಮ ಕೆಲಸಗಳನ್ನು ಮಂದಿಯ ಕಡೆಯಿಂದ ಬೇಕಾದ ಹಾಗೆ ಮಾಡಿಸಿಕೊಂಡು, ಅವರ ಅನುವು-ಆಪತ್ತುಗಳ ಕಡೆಗೆ ನೋಡುವ ಪ್ರಸಂಗ ಬಂದಾಗ ಮೋರೆ ತಿರುವುವ ಸ್ವಭಾವವು ಬಹು ಜನರಲ್ಲಿರುತ್ತದೆ. ಅಂಥರಿಗೆ ಚುಚ್ಚುವಂತೆ ಈ ಹಾಡು ಇದೆ. ಇದಲ್ಲದೆ ಒಕ್ಕಲಿಗರ ಮನೆಯಲ್ಲಿ ದನ-ಕರುಗಳ ನೀರು-ಮೇವುಗಳ ಚಿಂತೆಯು ಮನೆಯ ಒಡತಿಗೆ ಇಲ್ಲದೆ ಹೋಗಬಾರದೆಂಬುದಕ್ಕೂ ಈ ಹಾಡು ಉಸಯುಕ್ತವಾಗಿದೆಯೆಂದು ತೋರುತ್ತದೆ.

ಛಂದಸ್ಸು:- ತ್ರಿಪದಿಯ ಜಾತಿಗೆ ಸೇರಿದ್ದು.

ಶಬ್ದ ಪ್ರಯೋಗಗಳು:— ಮಾಗಿ=ಮಾಗಿಯ ಕಾಲದ ಎಂದರೆ ಮಾಘ ಮಾಸದ ನೇಗಿಲು ಗೆಲಸ. ಮಾಯದಿಂದ=ಪ್ರೀತಿಯಿಂದ. ಧಂಟಿ=ದಂಟು. ತುಂಡೀನ=ಸೊಕ್ಕಿದವಳನ್ನು. ಹೆಂಡಿ=ಸೆಗಣಿ. ಕುಳ್ಳ=ಬರಣಿ. ಪರಸಾದ=ಧೂಪದ ಬೂದಿ (ಪ್ರಸಾದ). ಬಾರಕೋಲ=ಚಬಕ

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...