Home / ಕವನ / ಭಾವಗೀತೆ / ಎತ್ತಿನ ಹಾಡು

ಎತ್ತಿನ ಹಾಡು

ಮಾಗಿಽಯ ಹೊಡಿಯಾಗ
ನನ ಕೈಲೆ ಮಾಯದಿಂದ ಮಾಡಿಸಿಕೊಂಡ್ಯಾ
ನಾ ಹೋಗಿ ಒಂದ
ತೆನಿಧಂಟ ತಿಂದರ
ಕಲ್ಲಕಲ್ಲಿಲೆ ಹೊಡದ್ಯೊ| ನಮ ಜೀವ ಹೋದಾವೊ
ಕೈಲಾಸಕ ||೧||

ನಾ ಒಂದೆ ಬಿತ್ತಿಽದಽ ನಾ ಒಂದ ಬೆಳದೀದ
ನಾ ಹೋಗಿ ಒಂದ
ಹೊಡೆಧಂಟ ತಿಂದರ
ಬಡಬಡಗಿಲೆ ಹೊಡೆದ್ಯೊ | ನಮ ಜೀವ ಹೋದಾವೊ
ಕೈಲಾಸಕ ||೨||

ಹೆತ್ತಿಕಾಳೆ ಕುಡು ಅಂದ್ರಽ
ನಿನ ಮಡದಿ ಅತ್ತ ಮಾರಿ ತಿರುವ್ಯಾಳ
ಹತ್ತಗೊಳಗ ತಿನ್ನಂದ್ರ
ಖಂಡಽಗ ತಿನ್ನುವ
ತುಂಡಿನಽ ತಂದ್ಹೊಡೊ | ಜೀವ ಹೋದಾವೊ
ಕೈಲಾಸಕ ||೩||

ಹಿಂಡಿಽಯ ಕುಡು ಅಂದಽ
ನಿನ ಮಡದಿ ಮೂಗನೆ ಮುರದಾಳ
ಖಂಡಽಗ ತಿನ್ನಂದ್ರ
ಇಖ್ಖಂಡ್ಗ ತಿನ್ನಂಥ
ತುಂಡಿನಽ ತಂದ್ಹೊಡೊ | ನಮ ಜೀವ ಹೋದಾವೊ
ಕೈಲಾಸಕ ||೪||

ಇಕ್ಕಿದರ ಹೆಂಡಿನಾದಿನಽ | ಹಚ್ಚಿದರ ಕುಳ್ಳ ನಾದಿನಽ
ದೇವಽರ ಮುಂದಿಽನ
ಪರಸಾದ ನಾ ಆದ
ಮತ್ತ್ಯಾತಕಾದೇನಽ | ನಮ ಜೀನ ಹೋದಾವ
ಕೈಲಾಸಕ ||೫||

ಸತ್ತರ ತೊಗಲಾದೆನಽ | ಮೆಟ್ಟಿದರ ಕೆರವಾದೆನಽ |
ಹೆಗಲ ಮ್ಯಾಲಾಡಂತ
ಬಾರಕೋಲ ನಾ ಆದ
ಮತ್ತ್ಯಾತಕಾದೇನ | ನಮ ಜೀವ ಹೋದಾವ
ಕೈಲಾಸಕ ||೬||
*****

ಎತ್ತಿನ ಕಡೆಯಿಂದ ಅಡವಿಯಲ್ಲಿ ಬೇಕುಬೇಕಾದಷ್ಟು ಕೆಲಸವನ್ನು ಮಾಡಿಸಿಕೊಂಡು ಅದರ ಸುಖದ ಕಡೆಗೆ ಮಾತ್ರ ಅಲಕ್ಷ್ಯವನ್ನು ಮಾಡಿದರೆ ಅದಕ್ಕೆ ಎಷ್ಟು ದುಃಖವಾಗಬೇಡ! ತಮ್ಮ ಕೆಲಸಗಳನ್ನು ಮಂದಿಯ ಕಡೆಯಿಂದ ಬೇಕಾದ ಹಾಗೆ ಮಾಡಿಸಿಕೊಂಡು, ಅವರ ಅನುವು-ಆಪತ್ತುಗಳ ಕಡೆಗೆ ನೋಡುವ ಪ್ರಸಂಗ ಬಂದಾಗ ಮೋರೆ ತಿರುವುವ ಸ್ವಭಾವವು ಬಹು ಜನರಲ್ಲಿರುತ್ತದೆ. ಅಂಥರಿಗೆ ಚುಚ್ಚುವಂತೆ ಈ ಹಾಡು ಇದೆ. ಇದಲ್ಲದೆ ಒಕ್ಕಲಿಗರ ಮನೆಯಲ್ಲಿ ದನ-ಕರುಗಳ ನೀರು-ಮೇವುಗಳ ಚಿಂತೆಯು ಮನೆಯ ಒಡತಿಗೆ ಇಲ್ಲದೆ ಹೋಗಬಾರದೆಂಬುದಕ್ಕೂ ಈ ಹಾಡು ಉಸಯುಕ್ತವಾಗಿದೆಯೆಂದು ತೋರುತ್ತದೆ.

ಛಂದಸ್ಸು:- ತ್ರಿಪದಿಯ ಜಾತಿಗೆ ಸೇರಿದ್ದು.

ಶಬ್ದ ಪ್ರಯೋಗಗಳು:— ಮಾಗಿ=ಮಾಗಿಯ ಕಾಲದ ಎಂದರೆ ಮಾಘ ಮಾಸದ ನೇಗಿಲು ಗೆಲಸ. ಮಾಯದಿಂದ=ಪ್ರೀತಿಯಿಂದ. ಧಂಟಿ=ದಂಟು. ತುಂಡೀನ=ಸೊಕ್ಕಿದವಳನ್ನು. ಹೆಂಡಿ=ಸೆಗಣಿ. ಕುಳ್ಳ=ಬರಣಿ. ಪರಸಾದ=ಧೂಪದ ಬೂದಿ (ಪ್ರಸಾದ). ಬಾರಕೋಲ=ಚಬಕ

Tagged:

Leave a Reply

Your email address will not be published. Required fields are marked *

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...

ಒಂದೊಂದೆ ನೀರ ಹನಿಗಳು ಮುಳಿಹುಲ್ಲಿನ ಮಾಡಿನಿಂದ ಜಿನುಗಿ ತೊಟ್ಟಿಕ್ಕಿ ಆತ ಹೊದ್ದ ಕಂಬಳಿಯ ನೆನೆಸಿ ಒಳನುಸುಳಿ ಆತನ ಕುಂಡೆಯ ಭಾಗವೆಲ್ಲಾ ಒದ್ದೆಯಾದ ಕಾರಣವೋ ಹೊತ್ತಿಗೆ ಮುಂಚೆ ಎಂದೂ ಏಳದ ಹೊಲಿಯಪ್ಪ ಅಂದು ದಡಬಡಿಸಿ ಎದ್ದ. ಆತ ಮಲಗಿದ ಕಡೆಯಲ್ಲಿ ನೆಲವೆಲ್ಲಾ ಅದಾಗಲೇ ಹಸಿಯಾಗಿತ್ತಲ್ಲ. ಹ...

ಅದು ರಾಷ್ಟೀಯ ಹೆದ್ದಾರಿ ಎನ್.ಎಚ್.೧೭. ಎಡೆಬಿಡದ ವಾಹನಗಳ ಸಂಚಾರ. ಮಧ್ಯೆ ಮಧ್ಯೆ ಅಪಾಯಕಾರಿ ತಿರುವುಗಳು. ಹೊಸಬರಿಗೆ ಅಪರಿಚಿತರಿಗೆ ಮುಂದೆ ತಿರುವು ಇದೆ ಎಂದು ತಿಳಿಯಲಾಗದ, ಅವಘಡವೇನಾದರೂ ಸಂಭವಿಸಿದರೆ ನೇರವಾಗಿ ಪ್ರಪಾತದ ಪಾಲಾಗುವ ಭಯವನ್ನು ಹೊಂದಿದ ಭೀಕರ ತಿರುವುಗಳನ್ನು ಹೊಂದಿದ ವಕ...