Home / ಕವನ / ಭಾವಗೀತೆ / ಎತ್ತಿನ ಹಾಡು

ಎತ್ತಿನ ಹಾಡು

ಮಾಗಿಽಯ ಹೊಡಿಯಾಗ
ನನ ಕೈಲೆ ಮಾಯದಿಂದ ಮಾಡಿಸಿಕೊಂಡ್ಯಾ
ನಾ ಹೋಗಿ ಒಂದ
ತೆನಿಧಂಟ ತಿಂದರ
ಕಲ್ಲಕಲ್ಲಿಲೆ ಹೊಡದ್ಯೊ| ನಮ ಜೀವ ಹೋದಾವೊ
ಕೈಲಾಸಕ ||೧||

ನಾ ಒಂದೆ ಬಿತ್ತಿಽದಽ ನಾ ಒಂದ ಬೆಳದೀದ
ನಾ ಹೋಗಿ ಒಂದ
ಹೊಡೆಧಂಟ ತಿಂದರ
ಬಡಬಡಗಿಲೆ ಹೊಡೆದ್ಯೊ | ನಮ ಜೀವ ಹೋದಾವೊ
ಕೈಲಾಸಕ ||೨||

ಹೆತ್ತಿಕಾಳೆ ಕುಡು ಅಂದ್ರಽ
ನಿನ ಮಡದಿ ಅತ್ತ ಮಾರಿ ತಿರುವ್ಯಾಳ
ಹತ್ತಗೊಳಗ ತಿನ್ನಂದ್ರ
ಖಂಡಽಗ ತಿನ್ನುವ
ತುಂಡಿನಽ ತಂದ್ಹೊಡೊ | ಜೀವ ಹೋದಾವೊ
ಕೈಲಾಸಕ ||೩||

ಹಿಂಡಿಽಯ ಕುಡು ಅಂದಽ
ನಿನ ಮಡದಿ ಮೂಗನೆ ಮುರದಾಳ
ಖಂಡಽಗ ತಿನ್ನಂದ್ರ
ಇಖ್ಖಂಡ್ಗ ತಿನ್ನಂಥ
ತುಂಡಿನಽ ತಂದ್ಹೊಡೊ | ನಮ ಜೀವ ಹೋದಾವೊ
ಕೈಲಾಸಕ ||೪||

ಇಕ್ಕಿದರ ಹೆಂಡಿನಾದಿನಽ | ಹಚ್ಚಿದರ ಕುಳ್ಳ ನಾದಿನಽ
ದೇವಽರ ಮುಂದಿಽನ
ಪರಸಾದ ನಾ ಆದ
ಮತ್ತ್ಯಾತಕಾದೇನಽ | ನಮ ಜೀನ ಹೋದಾವ
ಕೈಲಾಸಕ ||೫||

ಸತ್ತರ ತೊಗಲಾದೆನಽ | ಮೆಟ್ಟಿದರ ಕೆರವಾದೆನಽ |
ಹೆಗಲ ಮ್ಯಾಲಾಡಂತ
ಬಾರಕೋಲ ನಾ ಆದ
ಮತ್ತ್ಯಾತಕಾದೇನ | ನಮ ಜೀವ ಹೋದಾವ
ಕೈಲಾಸಕ ||೬||
*****

ಎತ್ತಿನ ಕಡೆಯಿಂದ ಅಡವಿಯಲ್ಲಿ ಬೇಕುಬೇಕಾದಷ್ಟು ಕೆಲಸವನ್ನು ಮಾಡಿಸಿಕೊಂಡು ಅದರ ಸುಖದ ಕಡೆಗೆ ಮಾತ್ರ ಅಲಕ್ಷ್ಯವನ್ನು ಮಾಡಿದರೆ ಅದಕ್ಕೆ ಎಷ್ಟು ದುಃಖವಾಗಬೇಡ! ತಮ್ಮ ಕೆಲಸಗಳನ್ನು ಮಂದಿಯ ಕಡೆಯಿಂದ ಬೇಕಾದ ಹಾಗೆ ಮಾಡಿಸಿಕೊಂಡು, ಅವರ ಅನುವು-ಆಪತ್ತುಗಳ ಕಡೆಗೆ ನೋಡುವ ಪ್ರಸಂಗ ಬಂದಾಗ ಮೋರೆ ತಿರುವುವ ಸ್ವಭಾವವು ಬಹು ಜನರಲ್ಲಿರುತ್ತದೆ. ಅಂಥರಿಗೆ ಚುಚ್ಚುವಂತೆ ಈ ಹಾಡು ಇದೆ. ಇದಲ್ಲದೆ ಒಕ್ಕಲಿಗರ ಮನೆಯಲ್ಲಿ ದನ-ಕರುಗಳ ನೀರು-ಮೇವುಗಳ ಚಿಂತೆಯು ಮನೆಯ ಒಡತಿಗೆ ಇಲ್ಲದೆ ಹೋಗಬಾರದೆಂಬುದಕ್ಕೂ ಈ ಹಾಡು ಉಸಯುಕ್ತವಾಗಿದೆಯೆಂದು ತೋರುತ್ತದೆ.

ಛಂದಸ್ಸು:- ತ್ರಿಪದಿಯ ಜಾತಿಗೆ ಸೇರಿದ್ದು.

ಶಬ್ದ ಪ್ರಯೋಗಗಳು:— ಮಾಗಿ=ಮಾಗಿಯ ಕಾಲದ ಎಂದರೆ ಮಾಘ ಮಾಸದ ನೇಗಿಲು ಗೆಲಸ. ಮಾಯದಿಂದ=ಪ್ರೀತಿಯಿಂದ. ಧಂಟಿ=ದಂಟು. ತುಂಡೀನ=ಸೊಕ್ಕಿದವಳನ್ನು. ಹೆಂಡಿ=ಸೆಗಣಿ. ಕುಳ್ಳ=ಬರಣಿ. ಪರಸಾದ=ಧೂಪದ ಬೂದಿ (ಪ್ರಸಾದ). ಬಾರಕೋಲ=ಚಬಕ

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...