ಎತ್ತಿನ ಹಾಡು

ಮಾಗಿಽಯ ಹೊಡಿಯಾಗ
ನನ ಕೈಲೆ ಮಾಯದಿಂದ ಮಾಡಿಸಿಕೊಂಡ್ಯಾ
ನಾ ಹೋಗಿ ಒಂದ
ತೆನಿಧಂಟ ತಿಂದರ
ಕಲ್ಲಕಲ್ಲಿಲೆ ಹೊಡದ್ಯೊ| ನಮ ಜೀವ ಹೋದಾವೊ
ಕೈಲಾಸಕ ||೧||

ನಾ ಒಂದೆ ಬಿತ್ತಿಽದಽ ನಾ ಒಂದ ಬೆಳದೀದ
ನಾ ಹೋಗಿ ಒಂದ
ಹೊಡೆಧಂಟ ತಿಂದರ
ಬಡಬಡಗಿಲೆ ಹೊಡೆದ್ಯೊ | ನಮ ಜೀವ ಹೋದಾವೊ
ಕೈಲಾಸಕ ||೨||

ಹೆತ್ತಿಕಾಳೆ ಕುಡು ಅಂದ್ರಽ
ನಿನ ಮಡದಿ ಅತ್ತ ಮಾರಿ ತಿರುವ್ಯಾಳ
ಹತ್ತಗೊಳಗ ತಿನ್ನಂದ್ರ
ಖಂಡಽಗ ತಿನ್ನುವ
ತುಂಡಿನಽ ತಂದ್ಹೊಡೊ | ಜೀವ ಹೋದಾವೊ
ಕೈಲಾಸಕ ||೩||

ಹಿಂಡಿಽಯ ಕುಡು ಅಂದಽ
ನಿನ ಮಡದಿ ಮೂಗನೆ ಮುರದಾಳ
ಖಂಡಽಗ ತಿನ್ನಂದ್ರ
ಇಖ್ಖಂಡ್ಗ ತಿನ್ನಂಥ
ತುಂಡಿನಽ ತಂದ್ಹೊಡೊ | ನಮ ಜೀವ ಹೋದಾವೊ
ಕೈಲಾಸಕ ||೪||

ಇಕ್ಕಿದರ ಹೆಂಡಿನಾದಿನಽ | ಹಚ್ಚಿದರ ಕುಳ್ಳ ನಾದಿನಽ
ದೇವಽರ ಮುಂದಿಽನ
ಪರಸಾದ ನಾ ಆದ
ಮತ್ತ್ಯಾತಕಾದೇನಽ | ನಮ ಜೀನ ಹೋದಾವ
ಕೈಲಾಸಕ ||೫||

ಸತ್ತರ ತೊಗಲಾದೆನಽ | ಮೆಟ್ಟಿದರ ಕೆರವಾದೆನಽ |
ಹೆಗಲ ಮ್ಯಾಲಾಡಂತ
ಬಾರಕೋಲ ನಾ ಆದ
ಮತ್ತ್ಯಾತಕಾದೇನ | ನಮ ಜೀವ ಹೋದಾವ
ಕೈಲಾಸಕ ||೬||
*****

ಎತ್ತಿನ ಕಡೆಯಿಂದ ಅಡವಿಯಲ್ಲಿ ಬೇಕುಬೇಕಾದಷ್ಟು ಕೆಲಸವನ್ನು ಮಾಡಿಸಿಕೊಂಡು ಅದರ ಸುಖದ ಕಡೆಗೆ ಮಾತ್ರ ಅಲಕ್ಷ್ಯವನ್ನು ಮಾಡಿದರೆ ಅದಕ್ಕೆ ಎಷ್ಟು ದುಃಖವಾಗಬೇಡ! ತಮ್ಮ ಕೆಲಸಗಳನ್ನು ಮಂದಿಯ ಕಡೆಯಿಂದ ಬೇಕಾದ ಹಾಗೆ ಮಾಡಿಸಿಕೊಂಡು, ಅವರ ಅನುವು-ಆಪತ್ತುಗಳ ಕಡೆಗೆ ನೋಡುವ ಪ್ರಸಂಗ ಬಂದಾಗ ಮೋರೆ ತಿರುವುವ ಸ್ವಭಾವವು ಬಹು ಜನರಲ್ಲಿರುತ್ತದೆ. ಅಂಥರಿಗೆ ಚುಚ್ಚುವಂತೆ ಈ ಹಾಡು ಇದೆ. ಇದಲ್ಲದೆ ಒಕ್ಕಲಿಗರ ಮನೆಯಲ್ಲಿ ದನ-ಕರುಗಳ ನೀರು-ಮೇವುಗಳ ಚಿಂತೆಯು ಮನೆಯ ಒಡತಿಗೆ ಇಲ್ಲದೆ ಹೋಗಬಾರದೆಂಬುದಕ್ಕೂ ಈ ಹಾಡು ಉಸಯುಕ್ತವಾಗಿದೆಯೆಂದು ತೋರುತ್ತದೆ.

ಛಂದಸ್ಸು:- ತ್ರಿಪದಿಯ ಜಾತಿಗೆ ಸೇರಿದ್ದು.

ಶಬ್ದ ಪ್ರಯೋಗಗಳು:— ಮಾಗಿ=ಮಾಗಿಯ ಕಾಲದ ಎಂದರೆ ಮಾಘ ಮಾಸದ ನೇಗಿಲು ಗೆಲಸ. ಮಾಯದಿಂದ=ಪ್ರೀತಿಯಿಂದ. ಧಂಟಿ=ದಂಟು. ತುಂಡೀನ=ಸೊಕ್ಕಿದವಳನ್ನು. ಹೆಂಡಿ=ಸೆಗಣಿ. ಕುಳ್ಳ=ಬರಣಿ. ಪರಸಾದ=ಧೂಪದ ಬೂದಿ (ಪ್ರಸಾದ). ಬಾರಕೋಲ=ಚಬಕ

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹೋದ ವರ್‍ಷ ಬಂದ ಹಬ್ಬ
Next post ಇನ್ನು ರೋಬೊಟ್‌ಗಳ ಕೆಲಸ

ಸಣ್ಣ ಕತೆ

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…

  • ಆನುಗೋಲು

    ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…

cheap jordans|wholesale air max|wholesale jordans|wholesale jewelry|wholesale jerseys