Home / ಕವನ / ಭಾವಗೀತೆ / ಮಳೀ ಹಾಡು

ಮಳೀ ಹಾಡು

ಬಣ್ಣದ ಗುಬ್ಬ್ಯಾರು ಮಳಿರಾಜಾ | ಅವರು |
ಮಣ್ಣಾಗಿ ಹೋದರು ಮಳಿರಾಜಾ ||
ಬಣ್ಣದ ಗುಬ್ಬ್ಯಾರು ಮಣ್ಣಾಗಿ ಹೋದರು
ಅನ್ಯದ ದಿನ ಬಂದು ಮಳಿರಾಜಾ ||೧||

ಒಕ್ಕಲಗೇರ್ಯಾಗ ಮಕಿರಾಜಾ | ಅವರು |
ಮಕ್ಕಳು ಮಾರ್ಯಾರ ಮಳಿರಾಜಾ ||
ಮಕ್ಕಳ ಮಾರೀಽ ರೊಕ್ಕಾ ಹಿಡಕೊಂಡು
ಭತ್ತಂಡಽ ತಿರಗ್ಯಾರ ಮಳಿರಾಜಾ ||೨||

ಸೊಲಗಿ ಹಿಟ್ಟಿನಾಗ ಮಳಿರಾಜಾ | ಅವರು |
ಸುಣ್ಣನ್ನು ಕೂಡಿಸ್ಯಾರ ಮಳಿರಾಜಾ ||
ಹಸ್ತು ಬಂದಕೇರಿ ಗಪಗಪ ತಿಂದು
ಒದ್ದಾಡಿ ಸತ್ತಾರ ಮಳಿರಾಜಾ ||೩||

ಗಿದ್ದನ ಆಕ್ಕ್ಯಾಗ ಮಳಿರಾಜಾ | ಅವರು |
ಅಪುವನ್ನು ಕೂಡ್ಯಾರ ಮಳಿರಾಜಾ ||
ಸಣ್ಣ ಕೂಸಿಗಿ ಮನ್ನಿಸಿ ಉಣಿಸ್ಯಾರ
ಕಣ್ಣನ್ನೆ ಮುಚ್ಚ್ಯಾವ ಮಳಿರಾಜಾ ||೪||

ಗಂಡುಳ್ಳ ಬಾಲ್ಯಾರು ಮಳಿರಾಜಾ | ಅವರು |
ಭಿಕ್ಷಾಕ ಹೊರಟಾರ ಮಳಿರಾಜಾ ||
ಗಂಡುಳ್ಳ ಬಾಲ್ಯಾರು ಭಿಕ್ಷಾಕ ಹೋದರು
ಅನ್ಯದ ದಿನ ಬಂದು ಮಳಿರಾಜಾ ||೫||

ಸ್ವಾತಿಽಯ ಮಳೆ ಬಂದು ಮಳಿರಾಜಾ | ಸುತ್ತ |
ದೇಶಾಕ ಆಗ್ಯಾದ ಮಳೆರಾಜಾ ||
ಹಳ್ಳ ಕೊಳ್ಳ ಹೆಣ ಹರಿದಾಡಿ ಹೋದವು
ಯಾವಾಗ ಬಂದೆಪ್ಪಾ ಮಳಿರಾಜಾ ||೬||
*****

ಬಿತ್ತಿಗೆಯ ಕಾಲದಲ್ಲಿ ಮಳೆಯು ಬರುವುದಕ್ಕೆ ಬಹೆಳ ತಡವಾಗಹತ್ತಿದರೆ ಒಕ್ಕಲಿಗರಲ್ಲಿ ಹಾಹಾಕಾರವೇ ಎದ್ದು ಹೋಗುತ್ತಿದೆ. ಪೂರ್ವಾ ಉತ್ತರಾ ಮಳೆಗಳು ಆಗಲೇಬೇಕು. ಅವು ತಪ್ಪಿದರೆ ರಂಬಾಟಕ್ಕೆ ಆರಂಭವೇ. ಹೀಗಿದ್ದು ಯಾವುದೊ ಒಂದು ವರುಷ ಸ್ವಾತಿಯ ಮಳೆಯ ವರೆಗೆ ಒಂದು ಹನಿ ಕೂಡ ಬೀಳೆಲಿಲ್ಲವಂತೆ. ಹೀಗೆ ಆದಾಗಲೆಲ್ಲ ಎಲ್ಲೆಲ್ಲಿಯೂ ಬರದ ಲಕ್ಷಣಗಳೇ ತೋರುತ್ತವೆ. ಇಂತಹೆ ಪ್ರಸಂಗದ ಒಂದು ಕರುಣಾಜನಕ ಚಿತ್ರವು ಈ ಹಾಡಿನಲ್ಲಿದೆ.

ಛಂದಸ್ಸು:- ತ್ರಿಪದಿಯ ಪೂರ್ವಾರ್ಧ.

ಶಬ್ದ ಪ್ರಯೋಗಗಳು:- ಗುಬ್ಬ್ಯಾರು=ಘೋಷಾ ಪದ್ದತಿಯ ಹೆಣ್ಣು ಮಕ್ಕಳು (ಗುಬ್ಬಿಯಂತೆ ಯಾವಾಗಲೂ ಮನೆಯಲ್ಲಿಯೆ ಇರುವವರು.) ಅನ್ಯಾದ=ಅನ್ಯಾಯದ. ಬಂದಕೇರಿ=ಬಂದುಬಿಟ್ಟು. ಉಣಿಸ್ಯಾರ=ಉಣಿಸಿದರು. ಮುಚ್ಚ್ಯಾವ=ಮುಚ್ಚಿದವು.

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...