Home / ಕವನ / ಭಾವಗೀತೆ / ಮಳೀ ಹಾಡು

ಮಳೀ ಹಾಡು

ಬಣ್ಣದ ಗುಬ್ಬ್ಯಾರು ಮಳಿರಾಜಾ | ಅವರು |
ಮಣ್ಣಾಗಿ ಹೋದರು ಮಳಿರಾಜಾ ||
ಬಣ್ಣದ ಗುಬ್ಬ್ಯಾರು ಮಣ್ಣಾಗಿ ಹೋದರು
ಅನ್ಯದ ದಿನ ಬಂದು ಮಳಿರಾಜಾ ||೧||

ಒಕ್ಕಲಗೇರ್ಯಾಗ ಮಕಿರಾಜಾ | ಅವರು |
ಮಕ್ಕಳು ಮಾರ್ಯಾರ ಮಳಿರಾಜಾ ||
ಮಕ್ಕಳ ಮಾರೀಽ ರೊಕ್ಕಾ ಹಿಡಕೊಂಡು
ಭತ್ತಂಡಽ ತಿರಗ್ಯಾರ ಮಳಿರಾಜಾ ||೨||

ಸೊಲಗಿ ಹಿಟ್ಟಿನಾಗ ಮಳಿರಾಜಾ | ಅವರು |
ಸುಣ್ಣನ್ನು ಕೂಡಿಸ್ಯಾರ ಮಳಿರಾಜಾ ||
ಹಸ್ತು ಬಂದಕೇರಿ ಗಪಗಪ ತಿಂದು
ಒದ್ದಾಡಿ ಸತ್ತಾರ ಮಳಿರಾಜಾ ||೩||

ಗಿದ್ದನ ಆಕ್ಕ್ಯಾಗ ಮಳಿರಾಜಾ | ಅವರು |
ಅಪುವನ್ನು ಕೂಡ್ಯಾರ ಮಳಿರಾಜಾ ||
ಸಣ್ಣ ಕೂಸಿಗಿ ಮನ್ನಿಸಿ ಉಣಿಸ್ಯಾರ
ಕಣ್ಣನ್ನೆ ಮುಚ್ಚ್ಯಾವ ಮಳಿರಾಜಾ ||೪||

ಗಂಡುಳ್ಳ ಬಾಲ್ಯಾರು ಮಳಿರಾಜಾ | ಅವರು |
ಭಿಕ್ಷಾಕ ಹೊರಟಾರ ಮಳಿರಾಜಾ ||
ಗಂಡುಳ್ಳ ಬಾಲ್ಯಾರು ಭಿಕ್ಷಾಕ ಹೋದರು
ಅನ್ಯದ ದಿನ ಬಂದು ಮಳಿರಾಜಾ ||೫||

ಸ್ವಾತಿಽಯ ಮಳೆ ಬಂದು ಮಳಿರಾಜಾ | ಸುತ್ತ |
ದೇಶಾಕ ಆಗ್ಯಾದ ಮಳೆರಾಜಾ ||
ಹಳ್ಳ ಕೊಳ್ಳ ಹೆಣ ಹರಿದಾಡಿ ಹೋದವು
ಯಾವಾಗ ಬಂದೆಪ್ಪಾ ಮಳಿರಾಜಾ ||೬||
*****

ಬಿತ್ತಿಗೆಯ ಕಾಲದಲ್ಲಿ ಮಳೆಯು ಬರುವುದಕ್ಕೆ ಬಹೆಳ ತಡವಾಗಹತ್ತಿದರೆ ಒಕ್ಕಲಿಗರಲ್ಲಿ ಹಾಹಾಕಾರವೇ ಎದ್ದು ಹೋಗುತ್ತಿದೆ. ಪೂರ್ವಾ ಉತ್ತರಾ ಮಳೆಗಳು ಆಗಲೇಬೇಕು. ಅವು ತಪ್ಪಿದರೆ ರಂಬಾಟಕ್ಕೆ ಆರಂಭವೇ. ಹೀಗಿದ್ದು ಯಾವುದೊ ಒಂದು ವರುಷ ಸ್ವಾತಿಯ ಮಳೆಯ ವರೆಗೆ ಒಂದು ಹನಿ ಕೂಡ ಬೀಳೆಲಿಲ್ಲವಂತೆ. ಹೀಗೆ ಆದಾಗಲೆಲ್ಲ ಎಲ್ಲೆಲ್ಲಿಯೂ ಬರದ ಲಕ್ಷಣಗಳೇ ತೋರುತ್ತವೆ. ಇಂತಹೆ ಪ್ರಸಂಗದ ಒಂದು ಕರುಣಾಜನಕ ಚಿತ್ರವು ಈ ಹಾಡಿನಲ್ಲಿದೆ.

ಛಂದಸ್ಸು:- ತ್ರಿಪದಿಯ ಪೂರ್ವಾರ್ಧ.

ಶಬ್ದ ಪ್ರಯೋಗಗಳು:- ಗುಬ್ಬ್ಯಾರು=ಘೋಷಾ ಪದ್ದತಿಯ ಹೆಣ್ಣು ಮಕ್ಕಳು (ಗುಬ್ಬಿಯಂತೆ ಯಾವಾಗಲೂ ಮನೆಯಲ್ಲಿಯೆ ಇರುವವರು.) ಅನ್ಯಾದ=ಅನ್ಯಾಯದ. ಬಂದಕೇರಿ=ಬಂದುಬಿಟ್ಟು. ಉಣಿಸ್ಯಾರ=ಉಣಿಸಿದರು. ಮುಚ್ಚ್ಯಾವ=ಮುಚ್ಚಿದವು.

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...