Home / ಕವನ / ಕವಿತೆ / ದ್ರೌಪದಿಯ ಹಾಡು

ದ್ರೌಪದಿಯ ಹಾಡು

ಕರಿಯಪೂರ ನಗರದಲ್ಲಿ |
ಕಽವರವರು ಪಾಂಡವ್ರವರು |
ಧರಿಯ ಮ್ಯಾಲ ಲೆತ್ತನಿಟ್ಟು ಜೂಜನಾಡ್ಯಾರ ||೧||

ಪರಮಪಾಪಿ ಶಕುನಿ ತಾನು|
ಫಾಶಾದೊಳಗ ಫಕೀರನಾಗಿ|
ಧರ್ಮರಾಜ ಧರುಣಿ ದೌಽಪತಿನ ಸೋತರ ||೨||

ಸೋತನಂತ ದುರ್ಯೋಧನ|
ಸಂತೋಷದಿಂದ ಕೇಳಿದಾನ|
ದೂತನ್ಹಚ್ಚಿದಾರು ಮಾರು ಬದುಕ ತರಸ್ಯಾರ ||೩||

ನಿಂಬೆಣ್ಹಂತ ಕೊಂಬೆಣ್ಹಂತ|
ಆನಿಹಂತ ನಿನ್ನ ನಡಗಿ|
ಜಾಣಮುತ್ತಿನಂಥ ರಂಬಿ ಬಾರ ದ್ರೌಪತಿ ||೪||

ಹೆಚ್ಚು ಕುಂದ್ಯಾನಾಡದಿಽರು|
ಹೆರವರ್ಹೆಣ್ಣಾ ನೋಡದಿಽರು|
ಹಲ್ಲ ಕಿತ್ತ್ಯಾರೈವರವರು ಬ್ಯಾಡೋ ದುಸುವಾಸಾ ||೫||

ಹೆಣ್ಣ ಬಾಲಿ ಇಽವಳಿಗೆ|
ಹೆಮ್ಮಿಯಾದ ಮಾತನ್ಯಾಕ|
ಕಣ್ಣ ಚಿವುಟಿ ದುರ್ಯೋಧನ ಸೆದರಿಗೊಪ್ಪ್ಯಾನ ||೬||

ಹೀನ ದುಸುವಾಸ ನಿನ್ನ|
ರಗತಿನೊಳೆಗೆ ನಿಲಿಯ ಹಿಂಡಿ|
ಕರಳ ತೆಗೆದು ಮಾಲಿಮಾಡಿ ಧರಿಸೇನಂದಳ ||೭||

ಮುದ್ದೆ ಮುಖದೆ ಮಾನವರಿಗಿ|
ಮುಂದೆ ಮಾಡಿ ತಂಜದೆವೆಂದ|
ಇಂದ ನಿಮಗ ಬಿನ್ನವೆಂದು ಕೈಯ ಮುಗಿದರ ||೮||

ನೀರಬೊಬ್ಬಿ ಇಕ್ಕತಾರ|
ಲಡ್ಡನಾದರು ಕಡವುತಾರ|
ಆಗ ದ್ರೌಽಪತಿಯ ಸೀರಿ ನೆಳೆಯುತಿದರ ||೯||

ಆಗ ಮಾಽಡಿಽದ ಪಾಪ|
ಈಗ ಬಂದು ಒದಗಿತೇನ|
ಕೃಷ್ಣದೇವನ ಪಾದಕ್ಹೋಗಿ ಎರಗಲೇೆನ ||೧೦||

ಹರಿಯ ಹರಿಯ ಅನ್ನುತಾಳ|
ಹರಿಗೆ ಮೊರೆಯನಿಡುವುತಾಳ|
ಧರಿಯ ಮ್ಯಾಲ ಬಿದ್ದು ದ್ರೌಪತ್ಹ್ಯೊರಳತಿದ್ದಳ ||೧೧||

ಆಽಕಾಶ ಬಣ್ಣ ಸೀರಿ|
ಲೋಕದಾಗ ಇಲ್ಲ ಸೀರಿ|
ಸಾಕ್ಷ ಕೊಽಟ್ವಂತ ಸೀರಿ ಸಂವಿಯಲ್ದ್ಹೋದವ ||೧೨||

ಹಾದಿ ಇಂಜಾನ ಕಾಯೊ|
ಗಿಡದ ಮಂಜಾನ ಕಾಯೊ|
ಹಿಂಡ ದೈತ್ಯರುಳುವಂಥ ದೇವ ನೀ ಕುಯೊ ||೧೩||
*****

ಪಾಂಡವರು ಜೂಜಿನಲ್ಲಿ ದ್ರೌಪದಿಯನ್ನು ಸೋತಾಗ ಕೌರವರು ಅವಳ ಸೀರೆಯನ್ನು ಸೆಳೆದ ಕತೆಯಿದು. ಇದರಲ್ಲಿ ಎಂಟನೆಯ ನುಡಿಯೊಂದನ್ನು ಬಿಟ್ಟರೆ ಉಳಿದೆಲ್ಲ ಹಾಡಿನ ಭಾವವು ಸಹಜವಾಗಿ ಲಕ್ಷ್ಯಕ್ಕೆ ಬರುವಂತಿದೆ. ಆದರೆ ಎಂಟನೆಯ ನುಡಿಯಲ್ಲಿ ಭೀಷ್ಮಾದಿಗಳನ್ನು ಕುರಿತು ದ್ರೌಪದಿಯು ಆಡಿದ ಮಾತು ಹೇಳಲ್ಪಟ್ಟಿದೆಯೋ ಎನೋ. ಹಾಗೆ ತಿಳಿದುಕೊಂಡರೆ ಅರ್ಥವು ಸುಲಭವಾಗುವುದು.

ಛಂದಸ್ಸು :- ಭೋಗಷಟ್ಪದಿ.

ಶಬ್ದ ಪ್ರಯೋಗಗಳು :- ಕರಿಯಪೂರ=ಹಸ್ತಿನಾವತಿ. ಫಾಶ=ಪಗಡಿ ಆಟಡೊಳಗಿನ ಗಾಳುಗಳು. ಫಕೀರ=ಕಾಡುವ ಸನ್ಯಾಸಿ. ದಾರು ಮಾರು ಬದುಕು=ಸ್ಥಾವರಜಂಗಮ ಆಸ್ತಿ. ಕುಂದ್ಯಾನಾಡದಿರು=ಕುಂದಿಡಬೇಡ. ಸದರು=ಮುಖ್ಯ ಸ್ಥಳ. ರಗತ=ರಕ್ತ. ಲಡ್ಡ=ಚಬಕ. ಇಂಜಾನ=ಇಂಧನ. ಮಂಜಾನ=ಮಂಜು(ಮಬ್ಬು).

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...