Home / ಕವನ / ಕವಿತೆ / ದ್ರೌಪದಿಯ ಹಾಡು

ದ್ರೌಪದಿಯ ಹಾಡು

ಕರಿಯಪೂರ ನಗರದಲ್ಲಿ |
ಕಽವರವರು ಪಾಂಡವ್ರವರು |
ಧರಿಯ ಮ್ಯಾಲ ಲೆತ್ತನಿಟ್ಟು ಜೂಜನಾಡ್ಯಾರ ||೧||

ಪರಮಪಾಪಿ ಶಕುನಿ ತಾನು|
ಫಾಶಾದೊಳಗ ಫಕೀರನಾಗಿ|
ಧರ್ಮರಾಜ ಧರುಣಿ ದೌಽಪತಿನ ಸೋತರ ||೨||

ಸೋತನಂತ ದುರ್ಯೋಧನ|
ಸಂತೋಷದಿಂದ ಕೇಳಿದಾನ|
ದೂತನ್ಹಚ್ಚಿದಾರು ಮಾರು ಬದುಕ ತರಸ್ಯಾರ ||೩||

ನಿಂಬೆಣ್ಹಂತ ಕೊಂಬೆಣ್ಹಂತ|
ಆನಿಹಂತ ನಿನ್ನ ನಡಗಿ|
ಜಾಣಮುತ್ತಿನಂಥ ರಂಬಿ ಬಾರ ದ್ರೌಪತಿ ||೪||

ಹೆಚ್ಚು ಕುಂದ್ಯಾನಾಡದಿಽರು|
ಹೆರವರ್ಹೆಣ್ಣಾ ನೋಡದಿಽರು|
ಹಲ್ಲ ಕಿತ್ತ್ಯಾರೈವರವರು ಬ್ಯಾಡೋ ದುಸುವಾಸಾ ||೫||

ಹೆಣ್ಣ ಬಾಲಿ ಇಽವಳಿಗೆ|
ಹೆಮ್ಮಿಯಾದ ಮಾತನ್ಯಾಕ|
ಕಣ್ಣ ಚಿವುಟಿ ದುರ್ಯೋಧನ ಸೆದರಿಗೊಪ್ಪ್ಯಾನ ||೬||

ಹೀನ ದುಸುವಾಸ ನಿನ್ನ|
ರಗತಿನೊಳೆಗೆ ನಿಲಿಯ ಹಿಂಡಿ|
ಕರಳ ತೆಗೆದು ಮಾಲಿಮಾಡಿ ಧರಿಸೇನಂದಳ ||೭||

ಮುದ್ದೆ ಮುಖದೆ ಮಾನವರಿಗಿ|
ಮುಂದೆ ಮಾಡಿ ತಂಜದೆವೆಂದ|
ಇಂದ ನಿಮಗ ಬಿನ್ನವೆಂದು ಕೈಯ ಮುಗಿದರ ||೮||

ನೀರಬೊಬ್ಬಿ ಇಕ್ಕತಾರ|
ಲಡ್ಡನಾದರು ಕಡವುತಾರ|
ಆಗ ದ್ರೌಽಪತಿಯ ಸೀರಿ ನೆಳೆಯುತಿದರ ||೯||

ಆಗ ಮಾಽಡಿಽದ ಪಾಪ|
ಈಗ ಬಂದು ಒದಗಿತೇನ|
ಕೃಷ್ಣದೇವನ ಪಾದಕ್ಹೋಗಿ ಎರಗಲೇೆನ ||೧೦||

ಹರಿಯ ಹರಿಯ ಅನ್ನುತಾಳ|
ಹರಿಗೆ ಮೊರೆಯನಿಡುವುತಾಳ|
ಧರಿಯ ಮ್ಯಾಲ ಬಿದ್ದು ದ್ರೌಪತ್ಹ್ಯೊರಳತಿದ್ದಳ ||೧೧||

ಆಽಕಾಶ ಬಣ್ಣ ಸೀರಿ|
ಲೋಕದಾಗ ಇಲ್ಲ ಸೀರಿ|
ಸಾಕ್ಷ ಕೊಽಟ್ವಂತ ಸೀರಿ ಸಂವಿಯಲ್ದ್ಹೋದವ ||೧೨||

ಹಾದಿ ಇಂಜಾನ ಕಾಯೊ|
ಗಿಡದ ಮಂಜಾನ ಕಾಯೊ|
ಹಿಂಡ ದೈತ್ಯರುಳುವಂಥ ದೇವ ನೀ ಕುಯೊ ||೧೩||
*****

ಪಾಂಡವರು ಜೂಜಿನಲ್ಲಿ ದ್ರೌಪದಿಯನ್ನು ಸೋತಾಗ ಕೌರವರು ಅವಳ ಸೀರೆಯನ್ನು ಸೆಳೆದ ಕತೆಯಿದು. ಇದರಲ್ಲಿ ಎಂಟನೆಯ ನುಡಿಯೊಂದನ್ನು ಬಿಟ್ಟರೆ ಉಳಿದೆಲ್ಲ ಹಾಡಿನ ಭಾವವು ಸಹಜವಾಗಿ ಲಕ್ಷ್ಯಕ್ಕೆ ಬರುವಂತಿದೆ. ಆದರೆ ಎಂಟನೆಯ ನುಡಿಯಲ್ಲಿ ಭೀಷ್ಮಾದಿಗಳನ್ನು ಕುರಿತು ದ್ರೌಪದಿಯು ಆಡಿದ ಮಾತು ಹೇಳಲ್ಪಟ್ಟಿದೆಯೋ ಎನೋ. ಹಾಗೆ ತಿಳಿದುಕೊಂಡರೆ ಅರ್ಥವು ಸುಲಭವಾಗುವುದು.

ಛಂದಸ್ಸು :- ಭೋಗಷಟ್ಪದಿ.

ಶಬ್ದ ಪ್ರಯೋಗಗಳು :- ಕರಿಯಪೂರ=ಹಸ್ತಿನಾವತಿ. ಫಾಶ=ಪಗಡಿ ಆಟಡೊಳಗಿನ ಗಾಳುಗಳು. ಫಕೀರ=ಕಾಡುವ ಸನ್ಯಾಸಿ. ದಾರು ಮಾರು ಬದುಕು=ಸ್ಥಾವರಜಂಗಮ ಆಸ್ತಿ. ಕುಂದ್ಯಾನಾಡದಿರು=ಕುಂದಿಡಬೇಡ. ಸದರು=ಮುಖ್ಯ ಸ್ಥಳ. ರಗತ=ರಕ್ತ. ಲಡ್ಡ=ಚಬಕ. ಇಂಜಾನ=ಇಂಧನ. ಮಂಜಾನ=ಮಂಜು(ಮಬ್ಬು).

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...