Home / ಕವನ / ಕವಿತೆ / ದ್ರೌಪದಿಯ ಹಾಡು

ದ್ರೌಪದಿಯ ಹಾಡು

ಕರಿಯಪೂರ ನಗರದಲ್ಲಿ |
ಕಽವರವರು ಪಾಂಡವ್ರವರು |
ಧರಿಯ ಮ್ಯಾಲ ಲೆತ್ತನಿಟ್ಟು ಜೂಜನಾಡ್ಯಾರ ||೧||

ಪರಮಪಾಪಿ ಶಕುನಿ ತಾನು|
ಫಾಶಾದೊಳಗ ಫಕೀರನಾಗಿ|
ಧರ್ಮರಾಜ ಧರುಣಿ ದೌಽಪತಿನ ಸೋತರ ||೨||

ಸೋತನಂತ ದುರ್ಯೋಧನ|
ಸಂತೋಷದಿಂದ ಕೇಳಿದಾನ|
ದೂತನ್ಹಚ್ಚಿದಾರು ಮಾರು ಬದುಕ ತರಸ್ಯಾರ ||೩||

ನಿಂಬೆಣ್ಹಂತ ಕೊಂಬೆಣ್ಹಂತ|
ಆನಿಹಂತ ನಿನ್ನ ನಡಗಿ|
ಜಾಣಮುತ್ತಿನಂಥ ರಂಬಿ ಬಾರ ದ್ರೌಪತಿ ||೪||

ಹೆಚ್ಚು ಕುಂದ್ಯಾನಾಡದಿಽರು|
ಹೆರವರ್ಹೆಣ್ಣಾ ನೋಡದಿಽರು|
ಹಲ್ಲ ಕಿತ್ತ್ಯಾರೈವರವರು ಬ್ಯಾಡೋ ದುಸುವಾಸಾ ||೫||

ಹೆಣ್ಣ ಬಾಲಿ ಇಽವಳಿಗೆ|
ಹೆಮ್ಮಿಯಾದ ಮಾತನ್ಯಾಕ|
ಕಣ್ಣ ಚಿವುಟಿ ದುರ್ಯೋಧನ ಸೆದರಿಗೊಪ್ಪ್ಯಾನ ||೬||

ಹೀನ ದುಸುವಾಸ ನಿನ್ನ|
ರಗತಿನೊಳೆಗೆ ನಿಲಿಯ ಹಿಂಡಿ|
ಕರಳ ತೆಗೆದು ಮಾಲಿಮಾಡಿ ಧರಿಸೇನಂದಳ ||೭||

ಮುದ್ದೆ ಮುಖದೆ ಮಾನವರಿಗಿ|
ಮುಂದೆ ಮಾಡಿ ತಂಜದೆವೆಂದ|
ಇಂದ ನಿಮಗ ಬಿನ್ನವೆಂದು ಕೈಯ ಮುಗಿದರ ||೮||

ನೀರಬೊಬ್ಬಿ ಇಕ್ಕತಾರ|
ಲಡ್ಡನಾದರು ಕಡವುತಾರ|
ಆಗ ದ್ರೌಽಪತಿಯ ಸೀರಿ ನೆಳೆಯುತಿದರ ||೯||

ಆಗ ಮಾಽಡಿಽದ ಪಾಪ|
ಈಗ ಬಂದು ಒದಗಿತೇನ|
ಕೃಷ್ಣದೇವನ ಪಾದಕ್ಹೋಗಿ ಎರಗಲೇೆನ ||೧೦||

ಹರಿಯ ಹರಿಯ ಅನ್ನುತಾಳ|
ಹರಿಗೆ ಮೊರೆಯನಿಡುವುತಾಳ|
ಧರಿಯ ಮ್ಯಾಲ ಬಿದ್ದು ದ್ರೌಪತ್ಹ್ಯೊರಳತಿದ್ದಳ ||೧೧||

ಆಽಕಾಶ ಬಣ್ಣ ಸೀರಿ|
ಲೋಕದಾಗ ಇಲ್ಲ ಸೀರಿ|
ಸಾಕ್ಷ ಕೊಽಟ್ವಂತ ಸೀರಿ ಸಂವಿಯಲ್ದ್ಹೋದವ ||೧೨||

ಹಾದಿ ಇಂಜಾನ ಕಾಯೊ|
ಗಿಡದ ಮಂಜಾನ ಕಾಯೊ|
ಹಿಂಡ ದೈತ್ಯರುಳುವಂಥ ದೇವ ನೀ ಕುಯೊ ||೧೩||
*****

ಪಾಂಡವರು ಜೂಜಿನಲ್ಲಿ ದ್ರೌಪದಿಯನ್ನು ಸೋತಾಗ ಕೌರವರು ಅವಳ ಸೀರೆಯನ್ನು ಸೆಳೆದ ಕತೆಯಿದು. ಇದರಲ್ಲಿ ಎಂಟನೆಯ ನುಡಿಯೊಂದನ್ನು ಬಿಟ್ಟರೆ ಉಳಿದೆಲ್ಲ ಹಾಡಿನ ಭಾವವು ಸಹಜವಾಗಿ ಲಕ್ಷ್ಯಕ್ಕೆ ಬರುವಂತಿದೆ. ಆದರೆ ಎಂಟನೆಯ ನುಡಿಯಲ್ಲಿ ಭೀಷ್ಮಾದಿಗಳನ್ನು ಕುರಿತು ದ್ರೌಪದಿಯು ಆಡಿದ ಮಾತು ಹೇಳಲ್ಪಟ್ಟಿದೆಯೋ ಎನೋ. ಹಾಗೆ ತಿಳಿದುಕೊಂಡರೆ ಅರ್ಥವು ಸುಲಭವಾಗುವುದು.

ಛಂದಸ್ಸು :- ಭೋಗಷಟ್ಪದಿ.

ಶಬ್ದ ಪ್ರಯೋಗಗಳು :- ಕರಿಯಪೂರ=ಹಸ್ತಿನಾವತಿ. ಫಾಶ=ಪಗಡಿ ಆಟಡೊಳಗಿನ ಗಾಳುಗಳು. ಫಕೀರ=ಕಾಡುವ ಸನ್ಯಾಸಿ. ದಾರು ಮಾರು ಬದುಕು=ಸ್ಥಾವರಜಂಗಮ ಆಸ್ತಿ. ಕುಂದ್ಯಾನಾಡದಿರು=ಕುಂದಿಡಬೇಡ. ಸದರು=ಮುಖ್ಯ ಸ್ಥಳ. ರಗತ=ರಕ್ತ. ಲಡ್ಡ=ಚಬಕ. ಇಂಜಾನ=ಇಂಧನ. ಮಂಜಾನ=ಮಂಜು(ಮಬ್ಬು).

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...