Home / ಕವನ / ಕೋಲಾಟ / ದಂಡ ಬಂತವ್ವಾ ದಂಡ

ದಂಡ ಬಂತವ್ವಾ ದಂಡ

ದಂಡ ಬಂತವ್ವ ದಂಡ ಸೊಲ್ಲಾಪುರದ ದಂಡ|
ದಂಡ ನೋಡಿ ಬರತ ಹಡದವ್ವಾ| ಕೋಲೆನ್ನ ಕೋಲ||

ಹುಟ್ಟಿದ ಮಗಳವ್ವ ಕಟ್ಟಿ ಕಲ್ಲ ಇಳದಿಲ್ಲ|
ಭ್ಯಾಡ ನನ ಮಗಳ ಹೊರಿಯಾಕ| ಕೋ||

ಭ್ಯಾಡ ಭ್ಯಾಡಂದರ ಭಿರಿಭಿರಿ ಹೋಗ್ಯಾಳ|
ಹೋಗಿ ಅಗಸ್ಯಾಗ ನಿಂತಾಳ| ಕೋ||

ಢೇರ್ಯಾದ ಮ್ಯಾಲಕಿಽಯ ಬೆಳಕ| ಕೋ||

ಮುಗಲಿಲ್ಲ ಮಾಡಿಲ್ಲ ಮಿಂಚ ಗದ್ದರಣಿಲ್ಲ|
ಇದು ಯಾತದ ಬೆಳಕ ಕರಣೀಕ| ಕೋ||

ಒಬ್ಬರ ಹೋಗಂದ್ರ ಇಬ್ಬರ ಹೋಗಿದಾರ|
ಓಡ್ಹೋಗಿ ಅಕಿನ ಹಿಡದಾರ| ಕೋ||

ಇಪ್ಪತ್ತು ವರುಷದ ತುಪ್ಪುಂಡ ಕೂದಲ|
ನಾರಿ ನಿನಗಾಗಿ ಕಾಯ್ದಿದಾಳೇನ| ಕೋ||

ಹನ್ನೆರಡು ವರುಷದ ಎಣ್ಣುಂಡ ಕೂದಲ|
ಮಿತ್ರಿ ನಿನಗಾಗಿ ಕಾಯ್ದಿದಾಳೇನ| ಕೋ||

ನಾರಿ ನಿನಗಾಗಿ ಕಾಯ್ದಿದಾಳೇನ ಸೊಲ್ಲಪುರದ|
ದಂಡೀಗಿ ಧಾರಿ ಎರೆದೀದನೇನ| ಕೋ||

ಆಂಗಳದಾಗಿನ ತನುವ ಶಾವಂತಿಗ್ಹೂವ|
ಹೂ ಬಾಡಿದಾಗೊಮ್ಮ ನೆನೆಯವ್ವ| ಕೋ||

ಕುಂಬಿಽಯ ಮ್ಯಾಲಿಽನ ದುಂಡ ಶಾವಂತಿಗ್ಹೂವ|
ಹೂ ಬಾಡಿದಾಗೊಮ್ಮ ನೆನೆಯವ್ವ| ಕೋ||
*****

ಪಟ್ಟಣದ ದಾರಿಯ ಮೇಲಿರುವ ಒಂದು ಊರ ಬಳಿಯಲ್ಲಿ ದಂಡು ಬಂದಿಳದಾಗ ಒಬ್ಬ ಹೆಣ್ಣುಮಗಳು ನೋಡಲಿಕ್ಕೆಂದು ಹೋಗಿ ಡೇರೇದ ಹತ್ತಿರ ನಿಂತಿದ್ದಳು. ಒಳಗೆ ಕುಳಿತ ಅಧಿಕಾರಿಯು ಅವಳ ರೂಪಕ್ಕೆ ಮರುಳಾಗಿ ಅವಳನ್ನು ಹಿಡಿದು ತರುವುದಕ್ಕೆ ಜವಾನರನ್ನು ಕಳಿಸುತ್ತಾನೆ(೧-೫). ಈ ಸುದ್ದಿಯನ್ನು ಕೇಳಿ ಅವಳ ತಾಯಿಯು ಓಡಿಬಂದು ದುಃಖಮಾಡುತ್ತಾಳೆ (೬-೮). ಆಗ ಮಗಳು ತಾಯಿಗೆ ತನ್ನ ಸುಖದುಃಖದ ಬಗ್ಗೆ ಕುರುಹುಗಳನ್ನು ಹೇಳುತ್ತಾಳೆ (೯-೧೦).

ಹೀಗೆ ಕುರುಹು ಹೇಳುವ ಪದ್ಧತಿಯು ಬಹುಪ್ರಾಚೀನ ಕಾಲದ್ದು. ಘಟೋತ್ಕಚನು ತಾನು ಸತ್ತರೆ ಮನೆಯ ಮುಂದಿನ ಸಪ್ತತಾಳ ವೃಕ್ಷಗಳು ನೆಲಕ್ಕುರುಳುವವೆಂದು ತನ್ನ ತಾಯಿಗೆ ಕುರುಹನ್ನು ಹೇಳಿ ಯುದ್ಧಕ್ಕೆ ಹೋದ ಸಂಗತಿ ಸುಪ್ರಸಿದ್ಧವಿದೆಯಲ್ಲವೇ?

ಛಂದಸ್ಸು:- ತ್ರಿಪದಿಯ ಪೂರ್ವಾರ್ಧ.

ಶಬ್ಧಪ್ರಯೋಗಗಳು:- ಢೇರೆ=ತಂಬೂ.

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...