Home / ಕವನ / ಕವಿತೆ / ನೀಲಗಂಗಾನ ಹಾಡು

ನೀಲಗಂಗಾನ ಹಾಡು

ತಾಯಿ ತಂದಿಽ ಸತ್ತು ಇಂದಿಽಗ್ಹನ್ನೆರಡೊ ವರುಷ ||
ಇಂದಽ ನಮ ನೀಲ-ಗಂಗನ ಭಾವ ಬಂದಾನಽ | ಸೂಯಿ||
ಇಂದಽ ನಿಮ ನೀಲ-ಗಂಗನ ಖಳುವಬೇಕವ್ವಾ| ಸೂಯಿ||
* * *

ಅಚ್ಚೀ ಬಿಂಡಿಽ ಬಿಽಡು ಇಚ್ಚಿ ಬಿಂಡಿಽ ಬಿಽಡು||
ನಡುವಿಽನ ಬಿಂಡ್ಯಾನ ಸೀರಿ ಉಟಿಗ್ವಾ ನಿಲಗಂಗಾ| ಸೂಯಿ||

ಅಚ್ಚೀ ಭರಣೀ ಬಿಽಡು ಇಚ್ಚೀ ಭರಣೀ ಬಿಽಡು||
ನಡುವಿನ ಭರಣ್ಯಾನ ವಸ್ತಾ ಇಟಿಗ್ವಾ ನಿಲಗಂಗಾ| ಸೂಯಿ||
ಎಡಕೊಮ್ಮ ಹೊಳ್ಳವ್ವಾ ಬಲಕೊಮ್ಮ ಹೊಳ್ಳೆವ್ವಾ ||
ನಿಂತ ಗೆಳದ್ಯಾರಿಗಿ ಹೇಳವ್ವಾ ತಂಗಿಽ| ಸೂಯಿ||
ಬಿಸಲಽ ಬಡಿದರ ಶೆಲ್ಲ್ಯಾ ಮುಸುಕ ಹಾಕಣ್ಣಾ| ಸೂಯಿ||
ನೀರಡಿಕ್ಯಾದರ ಗಿಂಡಿಲಿ ನೀರ ಕುಡಿಸಣ್ಣ| ಸೂಯಿ||
* * *

ತೆವರಿಗ್ಹೊಡಿಯುವ ಕುದುರಿ ತೆಗ್ಗೀಗಿ ಹೊಡೆದಾನ||
ಮೈಯ ಕೈಯಗಳು ಮುಟ್ಟಿಲ್ಹೋಗ್ಯಾನ| ಸೂಯಿ||
ಸಿಟ್ಟೀಲಿ ನೀಲಗಂಗಾ ಮಡವ ಧುಮಕ್ಯಾಳ| ಸೂಯಿ||
* * *

ಆ ಊರ ಹಾದೀಲಿ (ಬತ್ತಲ) ಕುದರಿಽ ಬರತದ||
ಆಣ್ಣಾ ಸಹದೇವಣ್ಣಾ ಒಬನೇ ಬರತಾನ| ಸೂಯಿ||
ಮಡದೀ ನೀಲಗಂಗಾನ ಖಳುವಲಿಲ್ಲೇನ| ಸೂಯಿ||
ಆ ಊರ ಹಾದೀಲಿ ಏಳ್ಮಂದಿ ಕಳ್ಳಽರು||
ಮೈಯಽ ಕೈಯಗಳು ಮುಟ್ಟಲ್ಹೋಸಗ್ಯಾರೋ| ಸೂಯಿ||
ಸಿಟ್ಟೀಲಿ ನೀಲಗಂಗಾ ಮಡವ ಧುಮಕ್ಯಾಳೋ| ಸೂಯಿ||
ಮೊನ್ನಿಽನ ರಾತುರಲಿ ಸಪನಽವು ಬಿಽದ್ದಿತೊ||
ಮುತ್ತಿನ ತೂರಾಯಿಗಿ ಬೆಂಕಿ ಹೆತ್ತಿತ್ತೊ| ಸೂಯಿ||
ಇಽವು ಸುದ್ದಿಗಳವರಕ್ಕಽಗ ಒಯ್ಯೋ| ಸೂಯಿ||
* * *

ತಂಗಿಽ ನೀಲಗಂಗಾ ಏನ ಹೇಳ್ಯಾಳೊ| ಸೂಯಿ||
ಆ ಊರ ಹಾದೀಲಿ ಏಳ್ಮಂದಿ ಕಳ್ಳಽರ||
ಮೈಯ ಕೈಯಗಳು ಮುಟ್ಟಲ್ಹೋಗ್ಯಾರೊ || ಸೂಯಿ||
ಸಿಟ್ಟೀಲಿ ನೀಲಗಂಗಾ ಮಡವ ಧುಮಕ್ಯಾಳೊ| ಸೂಯಿ||

ತಾಯ್ತಂದಿ ಸಾಯಾಽಗ ಐಯ್ದಿನದ ಕೂಸಿದ್ದ್ಯ|
ಖಾರಿಕ ತೆಯ್ದ್ಹಾಕಿ ಸಲಹಿದನಲ ತಂಗಿಽ| ಸೂಯಿ||
ತಾಯ್ತಂದಿ ಸಾಯಾಗ ಏಳ್ದಿನದ ಕೂಸಿದ್ದಿ||
ಅಂಜರದ್ಹಣ್ಹಾಕಿ ಸಲವಿದನಲ ತಂಗಿ| ಸೂಯಿ||
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...