Home / ಕವನ / ಕವಿತೆ / ನೀಲಗಂಗಾನ ಹಾಡು

ನೀಲಗಂಗಾನ ಹಾಡು

ತಾಯಿ ತಂದಿಽ ಸತ್ತು ಇಂದಿಽಗ್ಹನ್ನೆರಡೊ ವರುಷ ||
ಇಂದಽ ನಮ ನೀಲ-ಗಂಗನ ಭಾವ ಬಂದಾನಽ | ಸೂಯಿ||
ಇಂದಽ ನಿಮ ನೀಲ-ಗಂಗನ ಖಳುವಬೇಕವ್ವಾ| ಸೂಯಿ||
* * *

ಅಚ್ಚೀ ಬಿಂಡಿಽ ಬಿಽಡು ಇಚ್ಚಿ ಬಿಂಡಿಽ ಬಿಽಡು||
ನಡುವಿಽನ ಬಿಂಡ್ಯಾನ ಸೀರಿ ಉಟಿಗ್ವಾ ನಿಲಗಂಗಾ| ಸೂಯಿ||

ಅಚ್ಚೀ ಭರಣೀ ಬಿಽಡು ಇಚ್ಚೀ ಭರಣೀ ಬಿಽಡು||
ನಡುವಿನ ಭರಣ್ಯಾನ ವಸ್ತಾ ಇಟಿಗ್ವಾ ನಿಲಗಂಗಾ| ಸೂಯಿ||
ಎಡಕೊಮ್ಮ ಹೊಳ್ಳವ್ವಾ ಬಲಕೊಮ್ಮ ಹೊಳ್ಳೆವ್ವಾ ||
ನಿಂತ ಗೆಳದ್ಯಾರಿಗಿ ಹೇಳವ್ವಾ ತಂಗಿಽ| ಸೂಯಿ||
ಬಿಸಲಽ ಬಡಿದರ ಶೆಲ್ಲ್ಯಾ ಮುಸುಕ ಹಾಕಣ್ಣಾ| ಸೂಯಿ||
ನೀರಡಿಕ್ಯಾದರ ಗಿಂಡಿಲಿ ನೀರ ಕುಡಿಸಣ್ಣ| ಸೂಯಿ||
* * *

ತೆವರಿಗ್ಹೊಡಿಯುವ ಕುದುರಿ ತೆಗ್ಗೀಗಿ ಹೊಡೆದಾನ||
ಮೈಯ ಕೈಯಗಳು ಮುಟ್ಟಿಲ್ಹೋಗ್ಯಾನ| ಸೂಯಿ||
ಸಿಟ್ಟೀಲಿ ನೀಲಗಂಗಾ ಮಡವ ಧುಮಕ್ಯಾಳ| ಸೂಯಿ||
* * *

ಆ ಊರ ಹಾದೀಲಿ (ಬತ್ತಲ) ಕುದರಿಽ ಬರತದ||
ಆಣ್ಣಾ ಸಹದೇವಣ್ಣಾ ಒಬನೇ ಬರತಾನ| ಸೂಯಿ||
ಮಡದೀ ನೀಲಗಂಗಾನ ಖಳುವಲಿಲ್ಲೇನ| ಸೂಯಿ||
ಆ ಊರ ಹಾದೀಲಿ ಏಳ್ಮಂದಿ ಕಳ್ಳಽರು||
ಮೈಯಽ ಕೈಯಗಳು ಮುಟ್ಟಲ್ಹೋಸಗ್ಯಾರೋ| ಸೂಯಿ||
ಸಿಟ್ಟೀಲಿ ನೀಲಗಂಗಾ ಮಡವ ಧುಮಕ್ಯಾಳೋ| ಸೂಯಿ||
ಮೊನ್ನಿಽನ ರಾತುರಲಿ ಸಪನಽವು ಬಿಽದ್ದಿತೊ||
ಮುತ್ತಿನ ತೂರಾಯಿಗಿ ಬೆಂಕಿ ಹೆತ್ತಿತ್ತೊ| ಸೂಯಿ||
ಇಽವು ಸುದ್ದಿಗಳವರಕ್ಕಽಗ ಒಯ್ಯೋ| ಸೂಯಿ||
* * *

ತಂಗಿಽ ನೀಲಗಂಗಾ ಏನ ಹೇಳ್ಯಾಳೊ| ಸೂಯಿ||
ಆ ಊರ ಹಾದೀಲಿ ಏಳ್ಮಂದಿ ಕಳ್ಳಽರ||
ಮೈಯ ಕೈಯಗಳು ಮುಟ್ಟಲ್ಹೋಗ್ಯಾರೊ || ಸೂಯಿ||
ಸಿಟ್ಟೀಲಿ ನೀಲಗಂಗಾ ಮಡವ ಧುಮಕ್ಯಾಳೊ| ಸೂಯಿ||

ತಾಯ್ತಂದಿ ಸಾಯಾಽಗ ಐಯ್ದಿನದ ಕೂಸಿದ್ದ್ಯ|
ಖಾರಿಕ ತೆಯ್ದ್ಹಾಕಿ ಸಲಹಿದನಲ ತಂಗಿಽ| ಸೂಯಿ||
ತಾಯ್ತಂದಿ ಸಾಯಾಗ ಏಳ್ದಿನದ ಕೂಸಿದ್ದಿ||
ಅಂಜರದ್ಹಣ್ಹಾಕಿ ಸಲವಿದನಲ ತಂಗಿ| ಸೂಯಿ||
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...